ನ್ಯಾಯಾಸನದ ಮುಂದೆ ಉರಿಯ ಪ್ರವಾಹವು ಉಕ್ಕಿ ಹರಿದು ಬಂದಿತು. ಲಕ್ಷೋಪಲಕ್ಷ ದೂತರು ಆತನ ಸೇವೆಗೆ ಸಿದ್ಧರಾಗಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತುಕೊಂಡಿದ್ದರು. ನ್ಯಾಯಸಭೆಯವರು ಕುಳಿತುಕೊಂಡರು, ಪುಸ್ತಕಗಳು ತೆರೆಯಲ್ಪಟ್ಟವು.
TSK
TSK · ಮತ್ತಾಯನು 13:39
مراجع Treasury of Scripture Knowledge في ಕನ್ನಡ IRV.
‹ಆದರೆ ಜನರು ನಿದ್ರೆ ಮಾಡುವ ಸಮಯದಲ್ಲಿ ಅವನ ವೈರಿಯು ಬಂದು ಗೋದಿಯ ನಡುವೆ ಕಳೆಯನ್ನು ಬಿತ್ತಿ ಹೋದನು.›
‹ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.›
¶ ‹“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;›
ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ, ಕ್ರಿಸ್ತ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.
ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.
ಸೈತಾನನ ತಂತ್ರೋಪಾಯಗಳನ್ನು ನೀವು ಎದುರಿಸಿ ನಿಲ್ಲುವುದಕ್ಕೆ ಶಕ್ತರಾಗುವಂತೆ ದೇವರು ದಯಪಾಲಿಸುವ ಸರ್ವಾಯುಧಗಳನ್ನು ಧರಿಸಿಕೊಳ್ಳಿರಿ.
ಆಗ ಅಧರ್ಮಸ್ವರೂಪನು ಕಾಣಿಸಿಕೊಳ್ಳುವನು, ಅವನನ್ನು ಯೇಸು ಕರ್ತನು ತನ್ನ ಬಾಯಿಯ ಉಸಿರಿನಿಂದ ಕೊಲ್ಲುವನು, ತನ್ನ ಬರುವಿಕೆಯ ಪ್ರತ್ಯಕ್ಷತೆಯಿಂದ ಸಂಹರಿಸುವನು.
ಸ್ವಸ್ಥಚಿತ್ತರಾಗಿರಿ ಎಚ್ಚರವಾಗಿರಿ. ನಿಮ್ಮ ವಿರೋಧಿಯಾಗಿರುವ ಸೈತಾನನು ಘರ್ಜಿಸುವ ಸಿಂಹದೋಪಾದಿಯಲ್ಲಿ ಯಾರನ್ನು ನುಂಗಲಿ ಎಂದು ಹುಡುಕುತ್ತಾ ತಿರುಗಾಡುತ್ತಿದ್ದಾನೆ.
ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ ಪುರಾತನ ಸರ್ಪವನ್ನು ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.
ಆಗ ಮತ್ತೊಬ್ಬ ದೂತನು ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು.
ಅವನು ಪಿಶಾಚಿಯೂ ಸೈತಾನನೂ ಆಗಿರುವ ಪುರಾತನ ಸರ್ಪವೆಂಬ ಘಟಸರ್ಪವನ್ನು ಹಿಡಿದು ಸಾವಿರ ವರ್ಷ ಬಂಧನದಲ್ಲಿಟ್ಟನು.