‹ಕರ್ತನೇ, ಕರ್ತನೇ, ನಿನ್ನ ಹೆಸರಿನಲ್ಲಿ ನಾವು ಪ್ರವಾದನೆ ಮಾಡಲಿಲ್ಲವೇ? ನಿನ್ನ ಹೆಸರಿನಲ್ಲಿ ದೆವ್ವಗಳನ್ನು ಬಿಡಿಸಲಿಲ್ಲವೇ? ನಿನ್ನ ಹೆಸರಿನಲ್ಲಿ ಅನೇಕ ಮಹತ್ಕಾರ್ಯಗಳನ್ನು ಮಾಡಲಿಲ್ಲವೇ ಎಂದು ತೀರ್ಪಿನ ದಿನದಲ್ಲಿ ಎಷ್ಟೋ ಜನರು ನನಗೆ ಹೇಳುವರು.›
TSK
TSK · ಮತ್ತಾಯನು 13:41
مراجع Treasury of Scripture Knowledge في ಕನ್ನಡ IRV.
‹ಹಾಗೆಯೇ ಯುಗದ ಸಮಾಪ್ತಿಯಲ್ಲಿ ಆಗುವುದು. ದೇವದೂತರು ಹೊರಟು ಬಂದು ನೀತಿವಂತರೊಳಗಿಂದ ಕೆಟ್ಟವರನ್ನು ಬೇರೆ ಮಾಡಿ ಅವರನ್ನು ಬೆಂಕಿಯ ಕೊಂಡದಲ್ಲಿ ಹಾಕುವರು.›
‹ಆತನು ತನ್ನ ದೂತರನ್ನು ತುತ್ತೂರಿಯ ಮಹಾ ಶಬ್ದದೊಂದಿಗೆ ಕಳುಹಿಸುವನು. ಅವರು ಆತನು ಆರಿಸಿಕೊಂಡವರನ್ನು ಆಕಾಶದ ಒಂದು ಕಡೆಯಿಂದ ಮತ್ತೊಂದು ಕಡೆಯವರೆಗೆ ನಾಲ್ಕು ದಿಕ್ಕುಗಳಿಂದ ಒಟ್ಟುಗೂಡಿಸುವರು.›
‹ಅದಕ್ಕೆ ನೀವು, ‘ನಿನ್ನ ಸಂಗಡ ನಾವು ಊಟ ಮಾಡಿದೆವು, ಕುಡಿದೆವು, ನಮ್ಮ ಬೀದಿಗಳಲ್ಲಿ ನೀನು ಉಪದೇಶ ಮಾಡಿದ್ದಿ’ ಎಂದು ಹೇಳುವುದಕ್ಕೆ ತೊಡಗುವಿರಿ.›
ನಾನು ಸಾರುವ ಸುವಾರ್ತೆಯಲ್ಲಿ ಬೋಧಿಸಿರುವ ಪ್ರಕಾರ ದೇವರು ಯೇಸು ಕ್ರಿಸ್ತನ ಮೂಲಕವಾಗಿ ಮನುಷ್ಯರ ಗುಟ್ಟುಗಳನ್ನು ಹಿಡಿದು ವಿಚಾರಿಸುವ ದಿನದಂದು ಸೂಚಿಸುತ್ತದೆ. ಆ ದಿನದಲ್ಲಿ ಇದೆಲ್ಲಾ ತಿಳಿದು ಬರುವುದು.
ಇದಲ್ಲದೆ ದೇವರು ತನ್ನ ಚೊಚ್ಚಲು ಮಗನನ್ನು ಭೂಲೋಕಕ್ಕೆ ತಿರುಗಿ ಬರಮಾಡುವಾಗ “ದೇವದೂತರೆಲ್ಲರೂ ಆತನನ್ನು ಆರಾಧಿಸಬೇಕು” ಎಂದು ಆಜ್ಞಾಪಿಸಿದ್ದಾನೆ.
¶ ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
ಅದರಲ್ಲಿ ಅಶುದ್ಧವಾದದ್ದೊಂದು ಸೇರುವುದಿಲ್ಲ. ಅವಮಾನವಾದದ್ದಾಗಲಿ ವಂಚನೆಯಾಗಲಿ ಮಾಡುವವನು ಅದರೊಳಗೆ ಪ್ರವೇಶಿಸಲಾರನು. ಆದರೆ ಯಜ್ಞದ ಕುರಿಮರಿಯಾದಾತನ ಜೀವಬಾಧ್ಯರ ಪುಸ್ತಕದಲ್ಲಿ ಯಾರಾರ ಹೆಸರುಗಳು ಬರೆಯಲ್ಪಟ್ಟಿವೆಯೋ ಅವರು ಮಾತ್ರ ಸೇರುವರು.