ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.
TSK
TSK · ಮತ್ತಾಯನು 13:44
مراجع Treasury of Scripture Knowledge في ಕನ್ನಡ IRV.
ಜನರಲ್ಲಿ ಸೇರದವನು ಸ್ವೇಚ್ಛಾನುಸಾರ ನಡೆಯುತ್ತಾ, ಸಮಸ್ತ ಸುಜ್ಞಾನಕ್ಕೂ ರೇಗುವನು.
“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.
¶ ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, ‹“ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.›
¶ ಆಗ ಪೇತ್ರನು ಆತನನ್ನು, ಇಗೋ, ನಾವು ಎಲ್ಲವನ್ನೂ ಬಿಟ್ಟು ನಿನ್ನನ್ನು ಹಿಂಬಾಲಿಸಿದೆವು; ಇದರಿಂದ ನಮಗೆ ಏನು ದೊರಕುವುದು? ಎಂದು ಕೇಳಿದನು.
‹ಹಾಗೆಯೇ ನಿಮ್ಮಲ್ಲಿ ಯಾವನೇ ಆಗಲಿ ತನಗಿರುವುದನ್ನೆಲ್ಲಾ ಬಿಟ್ಟುಬಿಡದೆ ಹೋದರೆ ಅವನು ನನ್ನ ಶಿಷ್ಯನಾಗಿರಲಾರನು.›
ಅವನು ತಕ್ಷಣ ಇಳಿದು ಬಂದು ಆತನನ್ನು ಸಂತೋಷದಿಂದ ಬರಮಾಡಿಕೊಂಡನು.
ನಂಬಿದವರೆಲ್ಲರು ಒಗ್ಗಟ್ಟಾಗಿದ್ದು, ತಮ್ಮಲ್ಲಿರುವುದೆಲ್ಲವನ್ನೂ ಸಂತೋಷವಾಗಿ ಹಂಚಿಕೊಂಡು ಅನುಭೋಗಿಸುತ್ತಿದ್ದರು.
ಈ ಮೊದಲು ಬರೆದದ್ದೆಲ್ಲಾ ನಮ್ಮನ್ನು ಉಪದೇಶಿಸುವುದಕ್ಕಾಗಿ ಬರೆಯಲ್ಪಟ್ಟಿತು. ನಾವು ಓದಿ ಸ್ಥಿರಚಿತ್ತವನ್ನೂ, ಆದರಣೆಯನ್ನೂ ಹೊಂದಿ ರಕ್ಷಣೆಯ ನಿರೀಕ್ಷೆಯುಳ್ಳವರಾಗಿರುವಂತೆ ಆ ಶಾಸ್ತ್ರಗಳು ಬರೆಯಲ್ಪಟ್ಟವು.
ಆದರೆ, ನನಗೆ ಲಾಭವಾಗಿದ್ದಂಥವುಗಳನ್ನು ಕ್ರಿಸ್ತನ ನಿಮಿತ್ತ ನಷ್ಟವೆಂದೆಣಿಸಿದ್ದೇನೆ.
ಯಾಕೆಂದರೆ ನೀವು ಸತ್ತು ಮತ್ತು ನಿಮ್ಮ ಜೀವವು ಕ್ರಿಸ್ತನೊಂದಿಗೆ ದೇವರಲ್ಲಿ ಮರೆಯಾಗಿದೆ.
ನೀವು ಸೆರೆಯವರಿಗೆ ಅನುತಾಪ ತೋರಿಸಿ, ನಿಮಗೋಸ್ಕರವಾಗಿ ಉತ್ತಮವಾಗಿಯೂ, ಸ್ಥಿರವಾಗಿಯೂ ಇರುವ ಆಸ್ತಿಯುಂಟೆಂದು ಚೆನ್ನಾಗಿ ಅರಿತುಕೊಂಡು, ನಿಮ್ಮ ಸೊತ್ತನ್ನು ಸುಲುಕೊಳ್ಳುವವರಿಗೆ ಸಂತೋಷದಿಂದ ಬಿಟ್ಟು ಕೊಟ್ಟಿದ್ದೀರಿ.
‹ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ,›‹ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ›‹ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ›‹ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.›