ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
TSK
TSK · ಮತ್ತಾಯನು 15:9
مراجع Treasury of Scripture Knowledge في ಕನ್ನಡ IRV.
ನೀವು ದುಡಿದದ್ದೆಲ್ಲಾ ವ್ಯರ್ಥವಾಗುವುದು; ನಿಮ್ಮ ಭೂಮಿಯಲ್ಲಿ ಬೆಳೆಯಾಗುವುದಿಲ್ಲ, ತೋಟಗಳ ಮರಗಳು ಫಲ ಕೊಡುವುದಿಲ್ಲ.
ಅಷ್ಟರಲ್ಲಿ ದಾವೀದನು, “ನಾನು ಮರುಭೂಮಿಯಲ್ಲಿ ಈ ಮನುಷ್ಯನ ಆಸ್ತಿಯಲ್ಲಿ ಏನೂ ನಷ್ಟವಾಗದಂತೆ ಕಾಪಾಡಿದ್ದು ವ್ಯರ್ಥವಾಯಿತು. ಅವನು ಉಪಕಾರಕ್ಕೆ ಅಪಕಾರ ಮಾಡಿದನು.
ನನ್ನ ಮನಸ್ಸನ್ನು ನಿರ್ಮಲಮಾಡಿಕೊಂಡಿದ್ದೂ, ಶುದ್ಧತ್ವದಲ್ಲಿ ಕೈತೊಳಕೊಂಡಿದ್ದೂ ವ್ಯರ್ಥವೇ ಸರಿ.
ನಿನ್ನ ಬಾಯಿಂದ ದುಡುಕಬೇಡ ಮತ್ತು ದೇವರ ಮುಂದೆ ಮಾತನಾಡಲು ನಿನ್ನ ಹೃದಯದಲ್ಲಿ ಆತುರಪಡಬೇಡ. ದೇವರು ಪರಲೋಕದಲ್ಲಿದ್ದಾನೆ. ನೀನು ಭೂಮಿಯಲ್ಲಿದ್ದಿ, ಆದಕಾರಣ ನಿನ್ನ ಮಾತುಗಳು ಕಡಿಮೆಯಾಗಿರಲಿ.
ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ, ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ.
ನೀವು “ದೇವರನ್ನು ಸೇವಿಸುವುದು ವ್ಯರ್ಥ; ನಾವು ಆತನ ನಿಯಮವನ್ನು ಅನುಸರಿಸಿ ಸೇನಾಧೀಶ್ವರನಾದ ಯೆಹೋವನ ಮುಂದೆ ದುಃಖದಿಂದ ವಿಕಾರಿಗಳಾಗಿ ನಡೆದುಕೊಂಡದ್ದರಿಂದ ಆದ ಲಾಭವೇನು?
ನಾನು ನಿಮಗೆ ಸಾರಿದ ಸುವಾರ್ತೆಯನ್ನು ನೀವು ದೃಢವಾಗಿ ಹಿಡಿದುಕೊಂಡರೆ ನಿಮಗೆ ರಕ್ಷಣೆಯಾಗುತ್ತದೆ. ಇಲ್ಲದಿದ್ದರೆ ನಿಮ್ಮ ನಂಬಿಕೆಯು ನಿರರ್ಥಕವಾಗುತ್ತದೆ.
ಕಲ್ಪಿತಕಥೆಗಳಿಗೂ, ಕೊನೆಮೊದಲಿಲ್ಲದ ವಂಶಾವಳಿಗಳಿಗೂ ಲಕ್ಷ್ಯ ಕೊಡಬಾರದೆಂತಲೂ, ಆಜ್ಞಾಪಿಸಬೇಕೆಂಬುದಾಗಿ ನಿನಗೆ ಖಂಡಿತವಾಗಿ ಹೇಳಿದ ಪ್ರಕಾರ ಈಗಲೂ ಹೇಳುತ್ತಿದೇನೆ. ಅಂತಹ ಕಥೆಗಳೂ, ವಂಶಾವಳಿಗಳೂ ವಿವಾದಕ್ಕೆ ಎಡೆಮಾಡಿಕೊಡುತ್ತದೆಯೇ ಹೊರತು ದೇವರ ಯೋಜನೆಗಳಿಗೆ ಅನುಕೂಲವಾಗಿರುವುದಿಲ್ಲ. ನಂಬಿಕೆಯಿಂದ ಮಾತ್ರ ಅದು ಸಾಧ್ಯವಾಗುತ್ತದೆ.
¶ ಈ ಸಂಗತಿಗಳನ್ನು ಸಹೋದರರಿಗೆ ತಿಳಿಸಿದರೆ, ನೀನು ಅನುಸರಿಸುತ್ತಿರುವ ಕ್ರಿಸ್ತ ನಂಬಿಕೆಯ ಮತ್ತು ಸುಬೋಧನೆಯ ವಾಕ್ಯಗಳಲ್ಲಿ ಅಭ್ಯಾಸಹೊಂದಿದವನಾಗಿ, ಕ್ರಿಸ್ತ ಯೇಸುವಿನ ಒಳ್ಳೆಯ ಸೇವಕನಾಗಿರುವಿ.
ನಾನಾ ವಿಧವಾದ ಅನ್ಯೋಪದೇಶಗಳ ಸೆಳವಿಗೆ ಸಿಕ್ಕಿಕೊಳ್ಳಬೇಡಿರಿ. ಏಕೆಂದರೆ ದೇವರ ಕೃಪೆಯಿಂದ ಹೃದಯವನ್ನು ದೃಢಪಡಿಸಿಕೊಳ್ಳುವುದು ಒಳ್ಳೆಯದು. ಭೋಜನ ಪದಾರ್ಥಗಳ ಕುರಿತಾದ ನಿಯಮಗಳನ್ನು ಅನುಸರಿಸುವವರಿಗೆ ಏನೂ ಪ್ರಯೋಜನವಾಗುವುದಿಲ್ಲ.
¶ ಈ ಪುಸ್ತಕದ ಪ್ರವಾದನಾ ವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನೆಂದರೆ, ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ಕೂಡಿಸಿದರೆ, ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ಕೊಡುವನು.