ಅರಸನು ಅವರಿಗೆ, “ನಿಮಗೆ ಸರಿಕಂಡ ಹಾಗೆ ಮಾಡುತ್ತೇನೆ” ಎಂದು ಹೇಳಿ ಊರಬಾಗಿಲಿನ ಒಂದು ಕಡೆಯಲ್ಲಿ ನಿಂತನು. ಸೈನಿಕರು ನೂರು ನೂರು ಮಂದಿಯಾಗಿಯೂ, ಸಾವಿರ ಸಾವಿರ ಮಂದಿಯಾಗಿಯೂ ಹೊರಟರು.
TSK
TSK · ಮತ್ತಾಯನು 16:18
مراجع Treasury of Scripture Knowledge في ಕನ್ನಡ IRV.
ಯೆಹೋವನೇ, ಮರಣದ್ವಾರದೊಳಗೆ ಸೇರದಂತೆ; ನನ್ನನ್ನು ಉದ್ಧರಿಸುವವನೇ, ಕನಿಕರಿಸು; ಹಗೆಗಳಿಂದ ನನಗುಂಟಾದ ಬಾಧೆಯನ್ನು ಲಕ್ಷ್ಯಕ್ಕೆ ತಂದುಕೋ.
ಎಲ್ಲಾ ಆಹಾರಕ್ಕೂ ಅಸಹ್ಯಪಟ್ಟು ಮರಣದ್ವಾರಕ್ಕೆ ಸಮೀಪವಾದರು.
ಇವುಗಳಿಂದ ತನ್ನ ಬತ್ತಳಿಕೆಯನ್ನು ತುಂಬಿದವನು ಧನ್ಯನು. ಊರ ಬಾಗಿಲಲ್ಲಿ ವೈರಿಗಳ ಸಂಗಡ ವ್ಯಾಜ್ಯವಾಡುವಾಗ ಅಂಥವರು ಅವಮಾನ ಹೊಂದುವುದಿಲ್ಲ.
ಆತನೇ ನ್ಯಾಯಾಸನದಲ್ಲಿ ಕುಳಿತವನಿಗೆ ನ್ಯಾಯವಿವೇಚನೆಯಾಗಿಯೂ, ಊರಬಾಗಿಲಲ್ಲಿ ಶತ್ರುಗಳನ್ನು ನಾಶಮಾಡುವವರಿಗೆ ಶೌರ್ಯವಾಗಿಯೂ ಪರಿಣಮಿಸುವನು.
ನನ್ನ ರೋಗದಲ್ಲಿ ಹೀಗೆಲ್ಲಾ ಅಂದುಕೊಂಡೆನು, “ನನ್ನ ಮಧ್ಯಪ್ರಾಯದಲ್ಲಿ ಪಾತಾಳ ದ್ವಾರಗಳೊಳಗೆ ಸೇರಿದ್ದೇನೆ, ನನ್ನ ಆಯುಷ್ಯದಲ್ಲಿ ಕಳೆದು ಉಳಿದ ವರ್ಷಗಳು ನನಗೆ ನಷ್ಟವಾದವು.
¶ ಅವನಿಗೆ ಹೀಗೆ ಹೇಳು, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ಇಗೋ, ಮೊಳಿಕೆಯೆಂಬ ಪುರುಷನು! ಅವನು ಇದ್ದಲ್ಲಿಯೇ ವೃದ್ಧಿಯಾಗಿ, ಯೆಹೋವನ ಆಲಯವನ್ನು ಕಟ್ಟಿಸುವನು.
‹ಎಲೈ ಕಪೆರ್ನೌಮೇ›‹ನೀನು ಪರಲೋಕಕ್ಕೇರುವೇ ಎಂದು ನೆನಸುತ್ತೀಯೋ? ಇಲ್ಲ, ಪಾತಾಳಕ್ಕೆ ಇಳಿಯುವೆ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋಮಿನಲ್ಲಿ ನಡೆದಿದ್ದರೆ ಅದು ಇಂದಿನ ವರೆಗೆ ಉಳಿದಿರುತ್ತಿತ್ತು.›
ಅವನನ್ನು ಯೇಸುವಿನ ಬಳಿಗೆ ಕರೆದುಕೊಂಡು ಬಂದನು. ಯೇಸು ಅವನನ್ನು ನೋಡಿ ‹“ನೀನು ಯೋಹಾನನ ಮಗನಾದ ಸೀಮೋನನು. ಇನ್ನು ಮೇಲೆ ನೀನು ‘ಕೇಫ’ ಎಂದು ಕರೆಯಲ್ಪಡುವಿ”› ಎಂದು ಹೇಳಿದನು. (ಕೇಫ ಎಂದರೆ ಪೇತ್ರ ಇಲ್ಲವೆ ಬಂಡೆ ಎಂದು ಅರ್ಥ)
ಅವರೆಲ್ಲರೂ ದೇವರನ್ನು ಕೊಂಡಾಡುವವರಾಗಿಯೂ, ಜನರೆಲ್ಲರ ದಯವನ್ನು ಹೊಂದುವವರಾಗಿಯೂ ಇದ್ದರು. ಕರ್ತನು ರಕ್ಷಣೆಯ ಮಾರ್ಗದಲ್ಲಿರುವವರನ್ನು ಪ್ರತಿದಿನ ಅವರೊಂದಿಗೆ ಸಭೆಗೆ ಸೇರಿಸುತ್ತಿದ್ದನು.
ದೇವರು ಆದುಕೊಂಡವರ ಮೇಲೆ ಯಾರು ತಪ್ಪು ಹೊರಿಸುವವರು ಯಾರು? ದೇವರೇ ನಮ್ಮನ್ನು ನೀತಿವಂತರೆಂದು ನಿರ್ಣಯಿಸುವಾತನಾಗಿದ್ದಾನೆ.
“ಹೇ! ಮರಣವೇ ನಿನ್ನ ಜಯವೆಲ್ಲಿ? ಹೇ! ಮರಣವೇ ನಿನ್ನ ವಿಷದ ಕೊಂಡಿ ಎಲ್ಲಿ?”
ಹೀಗಿರಲಾಗಿ ನೀವು ಇನ್ನು ಮೇಲೆ ಪರದೇಶದವರೂ ಅನ್ಯರೂ ಆಗಿರದೇ ದೇವಜನರೊಂದಿಗೆ ಒಂದೇ ಸಂಸ್ಥಾನದವರೂ ದೇವರ ಮನೆಯವರೂ ಆಗಿದ್ದೀರಿ.
¶ ಪತಿಯರೇ, ಕ್ರಿಸ್ತನು ಸಭೆಯನ್ನು ಪ್ರೀತಿಸಿದ ಪ್ರಕಾರವೇ ನಿಮ್ಮ ಹೆಂಡತಿಯರನ್ನು ಪ್ರೀತಿಸಿರಿ.
ಸಭೆಯೆಂಬ ದೇಹಕ್ಕೆ ಆತನು ತಲೆಯಾಗಿದ್ದಾನೆ, ಆತನೇ ಆದಿಸಂಭೂತನು, ಎಲ್ಲಾದರಲ್ಲಿ ಆತನು ಮೊದಲಿಗನಾಗುವುದಕ್ಕಾಗಿ ಸತ್ತವರೊಳಗಿಂದ ಮೊದಲು ಎದ್ದು ಬಂದವನು ಆತನೇ.
ಆದರೆ ಒಂದು ವೇಳೆ ನಾನು ತಡಮಾಡಿದರೂ, ದೇವರ ಮನೆಯಲ್ಲಿ ಅಂದರೆ ಜೀವಸ್ವರೂಪನಾದ ದೇವರ ಸಭೆಯಲ್ಲಿ ನಡೆದುಕೊಳ್ಳಬೇಕಾದ ರೀತಿಯು ನಿನಗೆ ತಿಳಿದಿರಬೇಕೆಂದು ಈ ಸಂಗತಿಗಳನ್ನು ಬರೆದಿದ್ದೇನೆ. ಯಾಕೆಂದರೆ ಸಭೆಯು ಸತ್ಯಕ್ಕೆ ಸ್ತಂಭವೂ ಆಧಾರವೂ ಆಗಿದೆ.
ಆದ್ದರಿಂದ ಯಾರೂ ಕದಲಿಸಲಾರದ ರಾಜ್ಯವನ್ನು ಪಡೆದುಕೊಳ್ಳುವವರಾದ ನಾವು ಕೃತಜ್ಞತೆಯುಳ್ಳವರಾಗಿ, ಆತನಿಗೆ ಸಮರ್ಪಕವಾದ ಆರಾಧನೆಯನ್ನು ಭಕ್ತಿಯಿಂದಲೂ ಮತ್ತು ಭಯದಿಂದಲೂ ಮಾಡೋಣ.
¶ ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ.