ಅನಂತರ ಅವನು ಯೆಹೋವನಿಗೆ, “ನನ್ನ ದೇವರಾದ ಯೆಹೋವನೇ, ನನಗೆ ಸ್ಥಳಕೊಟ್ಟ ಈ ವಿಧವೆಯ ಮಗನನ್ನು ನೀನು ಸಾಯಿಸಿ, ಆಕೆಗೆ ಕೇಡನ್ನುಂಟುಮಾಡಿದ್ದೇನು?” ಎಂದು ಕೇಳಿದನು.
TSK
TSK · ಮತ್ತಾಯನು 17:21
مراجع Treasury of Scripture Knowledge في ಕನ್ನಡ IRV.
‹ತರುವಾಯ ಹೊರಟುಹೋಗಿ ತನಗಿಂತ ಕೆಟ್ಟವುಗಳಾದ ಬೇರೆ ಏಳು ದೆವ್ವಗಳನ್ನು ತನ್ನೊಂದಿಗೆ ಕರೆದುಕೊಂಡು ಬರುವುದು. ಅವು ಒಳ ನುಗ್ಗಿ ಅಲ್ಲಿ ವಾಸ ಮಾಡುವವು. ಆಗ ಆ ಮನುಷ್ಯನ ಅಂತ್ಯಸ್ಥಿತಿಯು ಮೊದಲಿಗಿಂತ ಕೆಟ್ಟದಾಗುವುದು. ಇದರಂತೆಯೇ ಈ ದುಷ್ಟ ಸಂತತಿಗೆ ಆಗುವುದು”› ಅಂದನು.
ಇವರು ಕರ್ತನನ್ನು ಆರಾಧಿಸುತ್ತಾ, ಉಪವಾಸಮಾಡುತ್ತಾ ಇದ್ದಾಗ ಪವಿತ್ರಾತ್ಮನು; “ನಾನು ಬಾರ್ನಬ ಮತ್ತು ಸೌಲರನ್ನು ಕರೆದ ಸೇವೆಗಾಗಿ ಅವರನ್ನು ಬೇರ್ಪಡಿಸಿರಿ” ಎಂದು ಹೇಳಿದನು.
ಪ್ರಾರ್ಥನೆಗೆ ಸಮಯ ಕೊಡುವುದಕ್ಕಾಗಿ ನೀವು ಪರಸ್ಪರ ಸಮ್ಮತಿಯಿಂದ ಸ್ವಲ್ಪ ಕಾಲ ಅಗಲಿ ಇರಬಹುದೇ ಹೊರತು ಅನ್ಯತಾ ಹಾಗೆ ಮಾಡಬಾರದು. ಸೈತಾನನು ನಿಮಗೆ ಸ್ವಯಂ ನಿಯಂತ್ರಣವಿಲ್ಲದಿರುವುದನ್ನು ನೋಡಿ ನಿಮಗೆ ದುಷ್ಪ್ರೇರಣೆಗೆ ಎಡೆ ಮಾಡದಂತೆ ತಿರುಗಿ ಕೂಡಿಕೊಳ್ಳಿರಿ.
ನೀವು ಪವಿತ್ರಾತ್ಮಪ್ರೇರಿತರಾಗಿ ಎಲ್ಲಾ ಸಮಯಗಳಲ್ಲಿ ಸಕಲವಿಧವಾದ ಪ್ರಾರ್ಥನೆಯಿಂದಲೂ ವಿಜ್ಞಾಪನೆಗಳಿಂದಲೂ ದೇವರನ್ನು ಪ್ರಾರ್ಥಿಸಿರಿ. ಇದರಲ್ಲಿ ಪೂರ್ಣ ಸ್ಥಿರಚಿತ್ತರಾಗಿದ್ದು ದೇವಜನರೆಲ್ಲರ ವಿಷಯದಲ್ಲಿ ವಿಜ್ಞಾಪನೆಮಾಡುತ್ತಾ ಎಚ್ಚರವಾಗಿರಿ. ನನಗಾಗಿಯೂ ಪ್ರಾರ್ಥನೆ ಮಾಡಿರಿ.