ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.
TSK
TSK · ಮತ್ತಾಯನು 17:23
مراجع Treasury of Scripture Knowledge في ಕನ್ನಡ IRV.
ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, ಬಾಯಿ ತೆರೆಯಲೇ ಇಲ್ಲ.
ಅರುವತ್ತೆರಡು ವಾರಗಳಾದ ಮೇಲೆ ಅಭಿಷಿಕ್ತನೊಬ್ಬನು ಛೇದಿಸಲ್ಪಡುವನು; ಅವನಿಗೆ ಏನೂ ಇರದು; ನುಗ್ಗುವ ಪ್ರಭುವಿನ ಜನರು ಪಟ್ಟಣವನ್ನೂ ಪವಿತ್ರಾಲಯವನ್ನೂ ಹಾಳು ಮಾಡುವರು; ತುಂಬಿ ತುಳುಕುವ ಪ್ರಳಯವು ಪಟ್ಟಣವನ್ನು ಕೊನೆಗಾಣಿಸುವುದು; ಅಂತ್ಯದವರೆಗೂ ಯುದ್ಧವಾಗುವುದು, ನಿಶ್ಚಿತ ನಾಶನಗಳು ಸಂಭವಿಸುವವು.
¶ ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.
ಅದಕ್ಕೆ ಯೇಸು ‹“ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು”› ಎಂದು ಉತ್ತರಕೊಟ್ಟನು.
‹ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ.›‹ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ›‹ನಿಮ್ಮ ದುಃಖವು ಹೋಗಿ ಆನಂದ ಬರುವುದು.›
ನಾನು ಸಹ ಕಲಿತುಕೊಂಡ ಮೊದಲನೆಯ ಸಂಗತಿಗಳೊಳಗೆ ಪ್ರಮುಖವಾದ ಸಂಗತಿಯನ್ನೇ ನಿಮಗೆ ತಿಳಿಸಿದ್ದೇನೆ ಅದೇನೆಂದರೆ ಧರ್ಮಶಾಸ್ತ್ರದಲ್ಲಿ ತಿಳಿಸಿರುವ ಪ್ರಕಾರ ಕ್ರಿಸ್ತನು ನಮ್ಮ ಪಾಪಗಳ ನಿವಾರಣೆಗಾಗಿ ಸತ್ತನು; ಹೂಣಲ್ಪಟ್ಟನು;