TSK

TSK · ಮತ್ತಾಯನು 20:18

مراجع Treasury of Scripture Knowledge في ಕನ್ನಡ IRV.

العودة إلى المقطع

ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?

ದೇವರೇ, ರಕ್ಷಿಸು; ಜಲವು ನನ್ನ ಕುತ್ತಿಗೆಯವರೆಗೂ ಏರಿಬಂದಿದೆ.

ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

¶ ಅವರು ಗಲಿಲಾಯದಲ್ಲಿ ವಾಸಿಸುತ್ತಿರುವಾಗಲೇ ಯೇಸು ಶಿಷ್ಯರಿಗೆ, ‹“ಮನುಷ್ಯಕುಮಾರನು ಮನುಷ್ಯರ ಕೈಗೆ ಒಪ್ಪಿಸಲ್ಪಡುವನು.›

ನಿಮಗೆ ಹೇಗೆ ತೋರುತ್ತದೆ?” ಅನ್ನಲು, “ಇವನು ಮರಣದಂಡನೆಗೆ ಯೋಗ್ಯನು” ಎಂದು ಅವರು ಉತ್ತರಕೊಟ್ಟರು.

ಇವನು ಮಾಡಿದ ದೇವದೂಷಣೆಯನ್ನು ನೀವು ಕೇಳಿದಿರಲ್ಲಾ, ನಿಮಗೆ ಹೇಗೆ ತೋರುತ್ತದೆ?” ಎಂದು ಕೇಳಲು ಅವರೆಲ್ಲರೂ, ಇವನಿಗೆ ಮರಣದಂಡನೆ ಆಗಬೇಕು ಎಂದು ತೀರ್ಪು ಮಾಡಿದರು.

ಆದರೂ ಆ ಯೇಸು ದೇವರ ಸ್ಥಿರಸಂಕಲ್ಪಕ್ಕೂ, ಭವಿಷ್ಯದ ಜ್ಞಾನಕ್ಕೂ ಅನುಸಾರವಾಗಿ ಒಪ್ಪಿಸಲ್ಪಟ್ಟಿರಲು ನೀವು ಅನ್ಯಜನರ ಕೈಯಿಂದ ಆತನನ್ನು ಶಿಲುಬೆಗೆ ಹಾಕಿ ಮೊಳೆ ಜಡಿದು ಕೊಂದಿರಿ.