ನೀನೇ ಹತ್ತಿರಕ್ಕೆ ಹೋಗಿ ನಮ್ಮ ದೇವರಾದ ಯೆಹೋವನ ಆಜ್ಞೆಗಳನ್ನೆಲ್ಲಾ ತಿಳಿದುಕೊಂಡು ಬಂದು ನಮಗೆ ತಿಳಿಸು; ತಿಳಿಸಿದಾಗ ನಾವು ನಡಿಸುವೆವು” ಎಂದು ಹೇಳಿದಿರಿ.
TSK
TSK · ಮತ್ತಾಯನು 20:2
مراجع Treasury of Scripture Knowledge في ಕನ್ನಡ IRV.
ಬಾಲಕನಾದ ಸಮುವೇಲನಾದರೋ ಬೆಳೆಯುತ್ತಾ ಬಂದ ಹಾಗೆಲ್ಲಾ ಯೆಹೋವನ ಮತ್ತು ಮನುಷ್ಯರ ದಯೆಗೆ ಪಾತ್ರನಾದನು.
ಯೆಹೋವನು ಶೀಲೋವಿನಲ್ಲಿ ದರ್ಶನಕೊಡುವುದಕ್ಕೆ ಪ್ರಾರಂಭಿಸಿ ತನ್ನ ವಾಕ್ಯದಿಂದ ಸಮುವೇಲನಿಗೆ ತನ್ನನ್ನು ಪ್ರಕಟಿಸಿಕೊಳ್ಳುತ್ತಾ ಬಂದನು. ಸಮುವೇಲನು ಇಸ್ರಾಯೇಲರೆಲ್ಲರಿಗೆ ದೈವೋತ್ತರಗಳನ್ನು ತಿಳಿಸುತ್ತಿದ್ದನು.
“ನಿನಗೆ ನಂಬಿಗಸ್ತನಾಗಿಯೂ, ನೀತಿಯಿಂದಲೂ ಯಥಾರ್ಥಚಿತ್ತದಿಂದಲೂ ನಡೆದುಕೊಂಡ ನಿನ್ನ ಸೇವಕನೂ, ನನ್ನ ತಂದೆಯೂ ಆದ ದಾವೀದನಿಗೆ ನೀನು ಮಹಾ ಕೃಪೆಯನ್ನು ತೋರಿಸಿದ್ದೀ. ಅವನ ಮೇಲೆ ಬಹಳವಾಗಿ ಕೃಪೆಯಿಟ್ಟು ಈಹೊತ್ತು ಅವನ ಸಿಂಹಾಸನಕ್ಕೆ ಒಬ್ಬ ಮಗನನ್ನು ಅನುಗ್ರಹಿಸಿದ್ದರಲ್ಲಿ ಅದನ್ನು ಸಂಪೂರ್ಣಗೊಳಿಸಿರುವೆ.
¶ ಅವನು ತನ್ನ ಆಳ್ವಿಕೆಯ ಎಂಟನೆಯ ವರ್ಷದಲ್ಲಿ ಇನ್ನೂ ಯೌವನಸ್ಥನಾಗಿರುವಾಗಲೇ ತನ್ನ ಪೂರ್ವಿಕನಾದ ದಾವೀದನ ದೇವರನ್ನು ಹುಡುಕುವವನಾದನು. ಹನ್ನೆರಡನೆಯ ವರ್ಷ ಯೆಹೂದದಲ್ಲಿಯೂ ಯೆರೂಸಲೇಮಿನಲ್ಲಿ ಇದ್ದ ಪೂಜಾಸ್ಥಳಗಳನ್ನೂ, ಅಶೇರ ಸ್ತಂಭಗಳನ್ನೂ, ಕೆತ್ತಿದ ಮತ್ತು ಎರಕದ ವಿಗ್ರಹಗಳನ್ನೂ ತೆಗೆದುಹಾಕಿ ದೇಶವನ್ನು ಶುದ್ಧಿಗೊಳಿಸಿದನು.
‹ತರುವಾಯ ಆ ಸೇವಕನು ಹೊರಕ್ಕೆ ಬಂದು ತನಗೆ ನೂರು ಬೆಳ್ಳಿ ನಾಣ್ಯ ಕೊಡಬೇಕಾಗಿದ್ದ ಒಬ್ಬ ಜೊತೆ ಸೇವಕನನ್ನು ಕಂಡು ಅವನನ್ನು ಹಿಡಿದು ಕುತ್ತಿಗೆ ಹಿಸುಕಿ, ‘ನನ್ನ ಸಾಲ ತೀರಿಸು’ ಎಂದು ಹೇಳಿದನು.›
‹ಅದಕ್ಕೆ ಯಜಮಾನನು ಅವರಲ್ಲಿ ಒಬ್ಬನಿಗೆ, ‘ಸ್ನೇಹಿತನೇ ನಾನು ನಿನಗೆ ಅನ್ಯಾಯ ಮಾಡಲಿಲ್ಲ. ನೀನು ನನ್ನ ಸಂಗಡ ಒಂದು ಬೆಳ್ಳಿಯ ನಾಣ್ಯಕ್ಕೆ ಒಪ್ಪಂದ ಮಾಡಿಕೊಳ್ಳಲಿಲ್ಲವೆ?›
ಅವನು ಕರ್ತನ ದೃಷ್ಟಿಯಲ್ಲಿ ಮಹಾಪುರುಷನಾಗಿರುವನು; ದ್ರಾಕ್ಷಾರಸವನ್ನಾಗಲಿ, ಯಾವ ಮದ್ಯವನ್ನಾಗಲಿ ಕುಡಿಯಬಾರದು; ಅವನು ಹುಟ್ಟಿದಂದಿನಿಂದಲೇ ಪವಿತ್ರಾತ್ಮಭರಿತನಾಗಿರುವನು.
ಚಿಕ್ಕಂದಿನಿಂದಲೂ ನಿನಗೆ ಪರಿಶುದ್ಧ ಗ್ರಂಥಗಳ ಪರಿಚಯವಾಗಿದೆಯಲ್ಲಾ. ಆ ಗ್ರಂಥಗಳು ಕ್ರಿಸ್ತಯೇಸುವಿನಲ್ಲಿರುವ ನಂಬಿಕೆಯ ಮೂಲಕ ರಕ್ಷಣೆಹೊಂದುವ ಜ್ಞಾನವನ್ನು ನಿನಗೆ ಕೊಡುವುದಕ್ಕೆ ಶಕ್ತವಾಗಿವೆ.