ಆಗ ಯೇಸು ಆ ಮರಕ್ಕೆ, ‹“ಇನ್ನೆಂದಿಗೂ ಒಬ್ಬರೂ ನಿನ್ನಲ್ಲಿ ಹಣ್ಣನ್ನು ತಿನ್ನದಿರಲಿ”› ಎಂದು ಹೇಳಿದನು. ಆತನ ಶಿಷ್ಯರು ಅದನ್ನು ಕೇಳಿಸಿಕೊಂಡರು.
TSK
TSK · ಮತ್ತಾಯನು 21:19
مراجع Treasury of Scripture Knowledge في ಕನ್ನಡ IRV.
¶ ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, ‹“ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.›
‹ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.›
ಭಕ್ತಿಯ ವೇಷವಿದ್ದು ಅದರ ಬಲವನ್ನು ಬೇಡವೆನ್ನುವವರೂ ಆಗಿರುವರು. ಇಂಥವರ ಸಹವಾಸವನ್ನೂ ಮಾಡದಿರು.
ಭೂಮಿಯು ತನ್ನ ಮೇಲೆ ಅನೇಕಾವರ್ತಿ ಸುರಿಯುವ ಮಳೆಯನ್ನು ಹೀರಿಕೊಂಡು, ಅದು ಯಾರ ನಿಮಿತ್ತವಾಗಿ ವ್ಯವಸಾಯ ಮಾಡಲ್ಪಡುತ್ತದೋ, ಅವರಿಗೆ ಅನುಕೂಲವಾದ ಬೆಳೆಯನ್ನು ಕೊಡುತ್ತದೆ, ಅದು ದೇವರ ಆಶೀರ್ವಾದವನ್ನು ಹೊಂದುತ್ತದೆ.
ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.