‹ಹಾಗಾದರೆ ಯಾತಕ್ಕೆ ಹೋಗಿದ್ದಿರಿ? ಪ್ರವಾದಿಯನ್ನು ನೋಡುವುದಕ್ಕೋ? ಹೌದು ಪ್ರವಾದಿಗಿಂತಲೂ ಹೆಚ್ಚಿನವನನ್ನು ನೋಡಿದ್ದೀರಿ ಎಂದು ನಿಮಗೆ ಹೇಳುತ್ತೇನೆ.›
TSK
TSK · ಮತ್ತಾಯನು 21:26
مراجع Treasury of Scripture Knowledge في ಕನ್ನಡ IRV.
ಆದರೆ ಅವರು ಆತನನ್ನು ಬಂಧಿಸುವುದಕ್ಕೆ ಪ್ರಯತ್ನಿಸಿದರೂ ಜನರು ಆತನನ್ನು ಪ್ರವಾದಿಯೆಂದು ಎಣಿಸಿದ್ದರಿಂದ ಅವರಿಗೆ ಭಯಪಟ್ಟರು.
‘ಮನುಷ್ಯರಿಂದ ಬಂದಿತು’” ಎಂದು ಹೇಳಿದರೆ ಏನಾಗುವುದೋ ಎಂಬುದಾಗಿ ಎಂದು ತಮ್ಮತಮ್ಮೊಳಗೆ ಚರ್ಚಿಸಿಕೊಳ್ಳುತ್ತಿದ್ದರು. ಯೋಹಾನನು ನಿಜವಾದ ಪ್ರವಾದಿಯೆಂದು ಜನರೆಲ್ಲರೂ ಅನುಮಾನವಿಲ್ಲದೆ ತಿಳಿದುಕೊಂಡಿದ್ದರಿಂದ ಇವರಿಗೆ ಜನರ ಭಯವಿತ್ತು.
ಮನುಷ್ಯರಿಂದ ಬಂದಿತೆಂದು ಹೇಳಿದರೆ ಜನರೆಲ್ಲರೂ ಯೋಹಾನನನ್ನು ಪ್ರವಾದಿಯೆಂದು ನಂಬಿರುವುದರಿಂದ ಅವರು ನಮ್ಮನ್ನು ಕಲ್ಲೆಸೆದು ಕೊಂದಾರು’” ಎಂದು ತಮ್ಮ ತಮ್ಮೊಳಗೆ ಮಾತನಾಡಿಕೊಂಡು,
ಮುಖ್ಯಯಾಜಕರೂ ಶಾಸ್ತ್ರಿಗಳೂ ಯೇಸುವನ್ನು ಕೊಲ್ಲಬೇಕೆಂದಿದ್ದರು. ಆದರೆ ಜನರಿಗೆ ಹೆದರಿ ತಕ್ಕ ಮಾರ್ಗವನ್ನು ಹುಡುಕುತ್ತಿದ್ದರು.
ಅವನ ತಂದೆ ತಾಯಿಗಳು ಯೆಹೂದ್ಯರಿಗೆ ಭಯಪಟ್ಟದ್ದರಿಂದ ಹೀಗೆ ಹೇಳಿದರು. ಏಕೆಂದರೆ ಯಾರಾದರೂ ಯೇಸುವನ್ನು ಕ್ರಿಸ್ತನೆಂದು ಒಪ್ಪಿಕೊಂಡರೆ ಅವನನ್ನು ಸಭಾಮಂದಿರದಿಂದ ಬಹಿಷ್ಕರಿಸಬೇಕೆಂದು ಯೆಹೂದ್ಯರು ಆಗಲೇ ತೀರ್ಮಾನಿಸಿಕೊಂಡಿದ್ದರು.
ಆಗ ಸೈನ್ಯದ ಅಧಿಕಾರಿಯು ಓಲೇಕಾರರ ಸಂಗಡ ಹೋಗಿ ಅವರನ್ನು ಕರೆದುಕೊಂಡು ಬಂದನು. ಆದರೆ ತಮಗೆ ಜನರು ಕಲ್ಲೆಸೆದಾರೆಂದು ಹೆದರಿ ಅವರನ್ನು ಹಿಂಸಿಸಲಿಲ್ಲ.