TSK

TSK · ಮತ್ತಾಯನು 21:34

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ದರ್ಶಕರೆನಿಸಿಕೊಂಡ ತನ್ನ ಪ್ರವಾದಿಗಳ ಮುಖಾಂತರವಾಗಿ ಇಸ್ರಾಯೇಲರಿಗೆ ಮತ್ತು ಯೆಹೂದ್ಯರಿಗೆ, “ನೀವು, ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಿಕರಿಗೂ, ನನ್ನ ಸೇವಕರಾದ ಪ್ರವಾದಿಗಳ ಮುಖಾಂತರವಾಗಿ ನಿಮಗೆ ಕೊಟ್ಟಂಥ ನನ್ನ ಎಲ್ಲಾ ಆಜ್ಞಾನಿಯಮವಿಧಿಗಳನ್ನು ಕೈಕೊಂಡು ನಡೆಯಿರಿ” ಎಂದು ಖಂಡಿತವಾಗಿ ಹೇಳಿಸಿದನು.

ನಿನ್ನ ಧರ್ಮೋಪದೇಶಕ್ಕೆ ಪುನಃ ಮನಗೊಟ್ಟು ಬನ್ನಿರಿ ಎಂದು ಎಷ್ಟೋ ಖಂಡಿತವಾಗಿ ಅವರನ್ನು ಎಚ್ಚರಿಸಿದೆ. ಆದರೂ ಅವರು ಲಾಲಿಸದೆ ಗರ್ವಿಗಳೂ, ನಿನ್ನ ಆಜ್ಞೆಗಳಿಗೆ ಅವಿಧೇಯರೂ ಆದರು. ಕೈಕೊಳ್ಳುವ ಮನುಷ್ಯನಿಗೆ ಜೀವಾಧಾರವಾಗಿರುವ ನಿನ್ನ ವಿಧಿನ್ಯಾಯಗಳನ್ನು ಮೀರಿ ಪಾಪಮಾಡಿ ಮೊಂಡು ಬಿದ್ದು ನಿನ್ನ ಮಾತುಗಳನ್ನು ಕೇಳದೆ ಹೋದರು.

ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು?

ಇದಲ್ಲದೆ ನಾನು ನನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ನಿತ್ಯವೂ ಕಳುಹಿಸುತ್ತಾ, ನೀವೆಲ್ಲರೂ ನಿಮ್ಮ ನಿಮ್ಮ ದುರ್ಮಾರ್ಗಗಳಿಂದ ಹಿಂದಿರುಗಿ ನಿಮ್ಮ ನಡತೆಗಳನ್ನು ಸರಿಪಡಿಸಿಕೊಳ್ಳಿರಿ, ಅನ್ಯದೇವತೆಗಳನ್ನು ಹಿಂಬಾಲಿಸಿ ಸೇವಿಸದಿರಿ; ಹೀಗೆ ಮಾಡಿದರೆ ನಾನು ನಿಮಗೂ, ನಿಮ್ಮ ಪೂರ್ವಿಕರಿಗೂ ದಯಪಾಲಿಸಿದ ದೇಶದಲ್ಲಿ ನೀವು ಸುಖವಾಸಿಗಳಾಗಿರುವಿರಿ ಎಂದು ಹೇಳಿಸಿದರೂ ನೀವು ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

“ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಷ್ಠೆಯಿಂದ ನ್ಯಾಯತೀರಿಸಿರಿ,

‹ಫಲಕಾಲವು ಬಂದಾಗ ತನಗೆ ಬರತಕ್ಕ ಪಾಲನ್ನು ತೆಗೆದುಕೊಳ್ಳುವುದಕ್ಕಾಗಿ ಒಬ್ಬ ಸೇವಕನನ್ನು ಗುತ್ತಿಗೆದಾರರ ಬಳಿಗೆ ಕಳುಹಿಸಿದನು.›