TSK

TSK · ಮತ್ತಾಯನು 22:11

مراجع Treasury of Scripture Knowledge في ಕನ್ನಡ IRV.

العودة إلى المقطع

ಅಂತಃಪುರದಲ್ಲಿ ರಾಜಕುಮಾರಿಯು ಎಷ್ಟೋ ವೈಭವದಿಂದಿದ್ದಾಳೆ; ಆಕೆಯು ಜರತಾರಿಯ ವಸ್ತ್ರವನ್ನು ಧರಿಸಿಕೊಂಡಿದ್ದಾಳೆ.

ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.

ಪೂರ್ವಕಾಲದ ಸುಸ್ಥಿತಿಯನ್ನು ನಮಗೆ ಮತ್ತೆ ದಯಪಾಲಿಸು. ನಮ್ಮನ್ನು ನಿನ್ನ ಕಡೆಗೆ ತಿರುಗಿಸು; ನೀನು ತಿರುಗಿಸಿದ ಹಾಗೆ ತಿರುಗುವೆವು;

ಯೆಹೋಶುವನು ದೇವದೂತನ ಮುಂದೆ ಕೊಳೆಯಾದ ಬಟ್ಟೆಯನ್ನು ಧರಿಸಿ ನಿಂತಿರಲು,

‹ಸುಗ್ಗಿ ಕಾಲದ ತನಕ ಎರಡೂ ಒಟ್ಟಿಗೆ ಬೆಳೆಯಲಿ. ಸುಗ್ಗಿ ಕಾಲದಲ್ಲಿ ನಾನು ಕೊಯ್ಯುವವರಿಗೆ, ಮೊದಲು ಕಳೆಯನ್ನು ಕಿತ್ತು ತೆಗೆದು ಹೊರೆಕಟ್ಟಿ ಅದನ್ನು ಸುಡುವುದಕ್ಕೆ ಹಾಕಿ,›‹ಗೋದಿಯನ್ನು ಕೂಡಿಸಿ ನನ್ನ ಕಣಜಕ್ಕೆ ತುಂಬಿರಿ ಎಂದು ಹೇಳುವೆನು’”› ಅಂದನು.

ಯೇಸು ಕ್ರಿಸ್ತನಲ್ಲಿ ನಂಬಿಕೆಯಿಡುವುದರ ಮೂಲಕವೇ ವಿಶ್ವಾಸಿಗಳೆಲ್ಲರಿಗೆ ದೇವರ ನೀತಿಯು ಉಂಟಾಗುತ್ತದೆ. ಇದರಲ್ಲಿ ಯಾವ ತಾರತಮ್ಯವನ್ನು ಮಾಡುವುದಿಲ್ಲ.

ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.

¶ ಹೇಗೆಂದರೆ ಕ್ರಿಸ್ತನಲ್ಲಿ ಸೇರುವುದಕ್ಕೆ ದೀಕ್ಷಾಸ್ನಾನ ಮಾಡಿಸಿಕೊಂಡಿರುವ ನೀವೆಲ್ಲರೂ ಕ್ರಿಸ್ತನನ್ನು ಧರಿಸಿಕೊಂಡಿದ್ದೀರಿ.

ಈ ನೂತನ ಸ್ವಭಾವವು ಸೃಷ್ಟಿಸಿದಾತನ ಹೋಲಿಕೆಯ ಜ್ಞಾನದ ಮೇರೆಗೆ ಅದು ನೂತನವಾಗುತ್ತಾ ಬರುತ್ತದೆ.

‹ಅವಳ ಮಕ್ಕಳನ್ನು ಕೊಲ್ಲುವೆನು. ಆಗ ನಾನು ಮನುಷ್ಯರ›‹ಅಂತರಿಂದ್ರಿಯಗಳನ್ನೂ, ಹೃದಯಗಳನ್ನೂ ಪರೀಕ್ಷಿಸುವವನಾಗಿದ್ದೇನೆಂಬುದು ಎಲ್ಲಾ ಸಭೆಗಳಿಗೆ ಗೊತ್ತಾಗುವುದು.›‹ನಿಮ್ಮಲ್ಲಿ ಪ್ರತಿಯೊಬ್ಬನಿಗೂ ಅವನವನ ಕ್ರಿಯೆಗಳಿಗೆ ತಕ್ಕ ಹಾಗೆ ಪ್ರತಿಫಲವನ್ನು ಕೊಡುವೆನು.›

‹ನೀನು ಐಶ್ವರ್ಯವಂತನಾಗಲು ಬೆಂಕಿಯಲ್ಲಿ ಪುಟಾಹಾಕಿದ ಚಿನ್ನವನ್ನೂ,›‹ಲಜ್ಜಾಸ್ಪದವಾದ ನಿನ್ನ ಬೆತ್ತಲೆತನ ಕಾಣಿಸದಂತೆ ಧರಿಸಿಕೊಳ್ಳುವುದಕ್ಕಾಗಿ›‹ಬಿಳೀವಸ್ತ್ರಗಳನ್ನೂ, ಕಣ್ಣುಕಾಣುವಂತೆ ನಿನ್ನ ಕಣ್ಣುಗಳಿಗೆ ಹಚ್ಚುವುದಕ್ಕಾಗಿ ಅಂಜನವನ್ನೂ ನನ್ನಿಂದ›‹ಕೊಂಡುಕೊಳ್ಳಬೇಕೆಂದು ನಾನು ನಿನಗೆ ಬುದ್ಧಿ ಹೇಳುತ್ತೇನೆ.›

ಪ್ರಕಾಶಮಾನವೂ, ನಿರ್ಮಲವೂ ಆದ ನಯವಾದ ನಾರುಮಡಿಯನ್ನು ಧರಿಸಿಕೊಳ್ಳುವುದಕ್ಕೆ ಆಕೆಗೆ ಕೃಪೆ ಲಭಿಸಿತು. (ಆ ನಾರುಮಡಿ ಅಂದರೆ ದೇವಜನರ ನೀತಿಕೃತ್ಯಗಳೇ).