ಅವರಲ್ಲೊಬ್ಬನು ನನ್ನನ್ನು ನೋಡುವುದಕ್ಕೆ ಬಂದರೆ ಕಪಟದ ಮಾತನಾಡುವನು; ಮನಸ್ಸಿನಲ್ಲಿ ಕುಯುಕ್ತಿಗಳನ್ನು ಕಲ್ಪಿಸಿಕೊಂಡು ಹೋಗಿ ಹೊರಗೆ ಪ್ರಕಟಿಸುತ್ತಾನೆ.
TSK
TSK · ಮತ್ತಾಯನು 22:15
مراجع Treasury of Scripture Knowledge في ಕನ್ನಡ IRV.
ನನ್ನ ಕಾಲಿಗೆ ಬಲೆಯನ್ನು ಹಾಸಿದ್ದಾರೆ; ನನ್ನ ಪ್ರಾಣವು ಕುಂದಿಹೋಯಿತು. ನನ್ನ ದಾರಿಯಲ್ಲಿ ಕುಣಿಯನ್ನು ಅಗೆದರು; ತಾವೇ ಅದರಲ್ಲಿ ಬಿದ್ದುಹೋದರು. ಸೆಲಾ
ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ, ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು.
“ಇವನ ಮೇಲೆ ದೂರು ಹೇಳಿರಿ, ನಾವೂ ಹೇಳುವೆವು” ಎಂದು ಬಹು ಜನರು ಗುಸುಗುಟ್ಟುವುದನ್ನು ಕೇಳಿದ್ದೇನೆ. ಸುತ್ತುಮುತ್ತಲೂ ದಿಗಿಲು; ನನ್ನ ಆಪ್ತ ಸ್ನೇಹಿತರೆಲ್ಲರೂ “ಇವನು ಎಡವಿ ಬೀಳಲಿ” ಎಂದು ನನ್ನನ್ನು ಹೊಂಚಿನೋಡುತ್ತಾ, “ಒಂದು ವೇಳೆ ಸಿಕ್ಕಿಬಿದ್ದಾನು, ಇವನನ್ನು ಗೆದ್ದು ಮುಯ್ಯಿತೀರಿಸಿಕೊಳ್ಳುವೆವು” ಎಂದು ತಮ್ಮತಮ್ಮೊಳಗೆ ಅಂದುಕೊಳ್ಳುತ್ತಿದ್ದಾರೆ.
¶ ಬಳಿಕ ಯೇಸು ಅಲ್ಲಿಂದ ಹೊರಗೆ ಬಂದಾಗ ಶಾಸ್ತ್ರಿಗಳೂ ಫರಿಸಾಯರೂ ಆತನನ್ನು ಕಠಿಣವಾಗಿ ಕೆಣಕಿ, ವಿರೋಧಿಸಿ ಅನೇಕ ವಿಷಯಗಳನ್ನು ಕುರಿತು ಆತನನ್ನು ಅಡ್ಡಾದಿಡ್ಡೀ ಪ್ರಶ್ನೆಮಾಡುತ್ತಾ,
ನೀವು ಮನಗುಂದಿದವರಾಗಿ ಬೇಸರಗೊಳ್ಳದಂತೆ ಯೇಸುವನ್ನು ಕುರಿತು ಯೋಚಿಸಿರಿ. ಆತನು ಪಾಪಿಗಳಿಂದ ಎಷ್ಟೋ ವಿರೋಧವನ್ನು ಸಹಿಸಿಕೊಂಡನು.