TSK

TSK · ಮತ್ತಾಯನು 22:3

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ಯಜ್ಞಭೋಜನಕ್ಕೋಸ್ಕರ ಗುಡ್ಡಕ್ಕೆ ಹೋಗುವ ಮೊದಲು ನೀವು ಊರೊಳಕ್ಕೆ ಹೋದರೆ ಸಿಕ್ಕುವನು. ಅವನು ಅಲ್ಲಿಗೆ ಹೋಗುವ ವರೆಗೆ ಜನರು ಊಟಮಾಡುವುದಿಲ್ಲ. ಅವನು ಹೋಗಿ ಯಜ್ಞಾಹಾರವನ್ನು ಆಶೀರ್ವದಿಸುತ್ತಾನೆ. ಅನಂತರ ಕರೆಯಲ್ಪಟ್ಟವರು ಊಟಮಾಡುತ್ತಾರೆ. ಈಗಲೇ ಹೋಗಿರಿ. ಅವನು ಸಿಕ್ಕುವ ಸಮಯ ಇದೇ” ಅಂದರು.

ನಿಮ್ಮನ್ನು ಐಗುಪ್ತದಿಂದ ಕರೆತಂದ ಯೆಹೋವನೆಂಬ ನಾನೇ ನಿಮ್ಮ ದೇವರು; ಅಗಲವಾಗಿ ಬಾಯಿತೆರೆಯಿರಿ; ಅದನ್ನು ತುಂಬಿಸುವೆನು ಅಂದೆನು.

ಜ್ಞಾನವೆಂಬಾಕೆಯು ಏಳು ಕಂಬಗಳನ್ನು ಕಡಿದು, ತನ್ನ ಮನೆಯನ್ನು ಕಟ್ಟಿಕೊಂಡಿದ್ದಾಳೆ.

“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.

ಯೆಹೋವನು ತನ್ನ ಸೇವಕರಾದ ಪ್ರವಾದಿಗಳನ್ನೆಲ್ಲಾ ನಿಮ್ಮ ಬಳಿಗೆ ತಪ್ಪದೆ ಕಳುಹಿಸುತ್ತಿದ್ದರೂ ನೀವು ಕೇಳಲಿಲ್ಲ, ಕಿವಿಗೊಡಲೂ ಇಲ್ಲ.

ನಾನು ಕರೆದ ಹಾಗೆಲ್ಲಾ ನನ್ನ ಜನರು ದೂರದೂರ ಹೋಗುತ್ತಲೇ ಬಂದರು. ಬಾಳ್ ದೇವತೆಗಳಿಗೆ ಯಜ್ಞಮಾಡಿ, ಬೊಂಬೆಗಳಿಗೆ ಧೂಪ ಹಾಕಿದರು.

ಕರ್ತನಾದ ಯೆಹೋವನ ಸನ್ನಿಧಿಯಲ್ಲಿ ಮೌನವಾಗಿರಿ, ಯೆಹೋವನ ನ್ಯಾಯತೀರ್ಪಿನ ದಿನವು ಸಮೀಪಿಸಿತು; ಯೆಹೋವನು ಯಜ್ಞದ ಔತಣವನ್ನು ಸಿದ್ಧಪಡಿಸಿದ್ದಾನೆ, ಕರೆದವರನ್ನು ಪ್ರತಿಷ್ಠಿಸಿದ್ದಾನೆ.

‹ಇವರನ್ನು ಬಿಟ್ಟು ತಪ್ಪಿಸಿಕೊಂಡ ಕುರಿಗಳಂತಿರುವ ಇಸ್ರಾಯೇಲಿನ ಮನೆತನದವರ ಬಳಿಗೆ ಹೋಗಿರಿ.›

¶ ‹“ಯೆರೂಸಲೇಮೇ, ಯೆರೂಸಲೇಮೇ, ಪ್ರವಾದಿಗಳ ಪ್ರಾಣತೆಗೆಯುವವಳೇ, ದೇವರು ನಿನ್ನ ಬಳಿಗೆ ಕಳುಹಿಸಿಕೊಟ್ಟವರನ್ನು ಕಲ್ಲೆಸೆದು ಕೊಲ್ಲುವವಳೇ!›‹ಕೋಳಿ ತನ್ನ ಮರಿಗಳನ್ನು ರೆಕ್ಕೆಗಳ ಕೆಳಗೆ ಹುದುಗಿಸಿಕೊಳ್ಳುವಂತೆ ನಿನ್ನ ಮಕ್ಕಳನ್ನು ಸೇರಿಸಿಕೊಳ್ಳಲು ನನಗೆ ಎಷ್ಟೋ ಸಾರಿ ಮನಸ್ಸಿತ್ತು; ಆದರೆ ನಿನಗೆ ಮನಸ್ಸಿಲ್ಲದೆ ಹೋಯಿತು.›

¶ ಆತನು ತನ್ನ ಹನ್ನೆರಡು ಮಂದಿ ಶಿಷ್ಯರನ್ನು ಒಟ್ಟಿಗೆ ಕರೆದು ಅವರಿಗೆ ಎಲ್ಲಾ ದೆವ್ವಗಳನ್ನು ಬಿಡಿಸುವ ಮತ್ತು ರೋಗಗಳನ್ನು ವಾಸಿಮಾಡುವ ಶಕ್ತಿ ಮತ್ತು ಅಧಿಕಾರಗಳನ್ನು ಕೊಟ್ಟು,

¶ ಊಟಕ್ಕೆ ಕುಳಿತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ, “ದೇವರ ರಾಜ್ಯದಲ್ಲಿ ಊಟಮಾಡುವವನೇ ಧನ್ಯನು” ಎಂದು ಹೇಳಲು,

‹ಮತ್ತು ತಮ್ಮ ಮೇಲೆ ನಾನು ದೊರೆತನ ಮಾಡುವುದು ಇಷ್ಟವಿಲ್ಲವೆಂದು ಹೇಳಿದ ಆ ನನ್ನ ವೈರಿಗಳನ್ನು ಇಲ್ಲಿಗೆ ತಂದು ನನ್ನ ಮುಂದೆ ಸಂಹಾರ ಮಾಡಿರಿ”› ಅಂದನು.

ಆದರೆ ಜನರು ಗುಂಪುಗುಂಪಾಗಿ ಬರುವುದನ್ನು ನೋಡಿ ಯೆಹೂದ್ಯರು ಮತ್ಸರವುಳ್ಳವರಾಗಿ ಪೌಲನು ಹೇಳಿದ ಮಾತುಗಳಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನಾಡುತ್ತಾ ಇದ್ದರು.

ಮಾತನಾಡುತ್ತಿರುವಾತನನ್ನು ನೀವು ಅಸಡ್ಡೆ ಮಾಡದಂತೆ ನೋಡಿಕೊಳ್ಳಿರಿ. ಏಕೆಂದರೆ ಭೂಮಿಯ ಮೇಲೆ ದೈವೋಕ್ತಿಗಳನ್ನಾಡಿದವನನ್ನು ಅಸಡ್ಡೆಮಾಡಿದವರು ದಂಡನೆಗೆ ತಪ್ಪಿಸಿಕೊಳ್ಳಲಾಗದಿದ್ದರೆ, ಪರಲೋಕದಿಂದ ಮಾತನಾಡುವಾತನನ್ನು ಬಿಟ್ಟು ದೂರವಾಗಿ ನಾವು ಹೋದರೆ ದಂಡನೆಯಿಂದ ಹೇಗೆ ತಪ್ಪಿಸಿಕೊಂಡೆವು?