TSK

TSK · ಮತ್ತಾಯನು 24:21

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರ ಸಂಪತ್ತು ಅವರಿಗೆ ಉರುಲಾಗಲಿ; ನಿಶ್ಚಿಂತರಾಗಿರುವಾಗಲೇ ಅದು ಅವರಿಗೆ ಬೋನಾಗಲಿ.

ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು.

¶ “ನಿನ್ನ ಜನರ ಪಕ್ಷವನ್ನು ಹಿಡಿದಿರುವ ಮಹಾಪಾಲಕನಾದ ದೇವದೂತ ಮೀಕಾಯೇಲನು ಆ ಕಾಲದಲ್ಲಿ ಏಳುವನು. ಮೊಟ್ಟಮೊದಲು ಜನಾಂಗವು ಉಂಟಾದ ದಿನದಿಂದ ಇಂದಿನವರೆಗೂ ಸಂಭವಿಸದಂಥ ಸಂಕಟವು ಸಂಭವಿಸುವುದು. ಆಗ ನಿನ್ನ ಜನರೊಳಗೆ ಯಾರ ಹೆಸರುಗಳು ಜೀವಬಾಧ್ಯರ ಪಟ್ಟಿಯಲ್ಲಿ ಸಿಕ್ಕುವವೋ ಅವರೆಲ್ಲರೂ ರಕ್ಷಿಸಲ್ಪಡುವರು.

ಅದು ಕತ್ತಲೆಯ ಮತ್ತು ಮೊಬ್ಬಿನ ದಿನವೂ, ಕಾರ್ಮುಗಿಲಿನ ಕಗ್ಗತ್ತಲ ದಿನವೂ ಆಗಿದೆ. ಉದಯವು ಬೆಟ್ಟಗಳ ಮೇಲೆ ಹರಡಿಕೊಳ್ಳುವ ಹಾಗೆ, ಪ್ರಬಲವಾದ ದೊಡ್ಡ ಸೈನ್ಯವು ಬರುತ್ತದೆ. ಅದರ ಹಾಗೆ ಹಿಂದೆಂದೂ ಬಂದಿಲ್ಲ, ಇನ್ನು ಮುಂದೆಯೂ ಬರುವುದಿಲ್ಲ, ತಲತಲಾಂತರಗಳ ವರ್ಷಗಳವರೆಗೂ ಬರುವುದಿಲ್ಲ.

¶ ನಾನು ಸಕಲ ಜನಾಂಗಗಳನ್ನು ಯೆರೂಸಲೇಮಿಗೆ ವಿರುದ್ಧವಾಗಿ ಕೂಡಿಸುವೆನು; ಅವು ಪಟ್ಟಣವನ್ನು ಆಕ್ರಮಿಸಿಕೊಂಡು ಮನೆಗಳನ್ನು ಸೂರೆಮಾಡಿ ಹೆಂಗಸರನ್ನು ಕೆಡಿಸುವವು; ಪಟ್ಟಣದ ಅರ್ಧ ಜನರು ಸೆರೆಗೆ ಹೋಗುವರು, ಉಳಿದ ಜನರೋ ಪಟ್ಟಣದಲ್ಲೇ ಉಳಿಯುವರು.

¶ ‹“ಆ ದಿನಗಳ ಸಂಕಟವು ಮುಗಿದಕೂಡಲೆ ಸೂರ್ಯನು ಕತ್ತಲಾಗಿ ಹೋಗುವನು, ಚಂದ್ರನು ಬೆಳಕು ಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.›

‹ದೇವರು ನಿನಗೆ ದರ್ಶನಕೊಟ್ಟ ಸಮಯವನ್ನು ನೀನು ತಿಳಿದುಕೊಳ್ಳಲಿಲ್ಲವಾದ್ದರಿಂದ, ನಿನ್ನ ವೈರಿಗಳು ನಿನ್ನ ಸುತ್ತಲೂ ಒಡ್ದುಕಟ್ಟಿ, ಮುತ್ತಿಗೆ ಹಾಕಿ, ಎಲ್ಲಾ ಕಡೆಗಳಿಂದ ನಿನ್ನನ್ನು ಒಂದುಗೂಡಿಸಿ, ನಿನ್ನನ್ನೂ ನಿನ್ನೊಳಗಿರುವ ನಿನ್ನ ಜನರನ್ನೂ ನಿರ್ಮೂಲಮಾಡಿ, ನಿನ್ನಲ್ಲಿ ಕಲ್ಲಿನ ಮೇಲೆ ಕಲ್ಲು ನಿಲ್ಲದಂತೆ ಮಾಡುವ ದಿನಗಳು ನಿನ್ನ ಮೇಲೆ ಬರುವವು”› ಅಂದನು.

ಅನ್ಯಜನರಿಗೆ ರಕ್ಷಣೆಯಾಗುವಂತೆ ಸುವಾರ್ತೆಯನ್ನು ಹೇಳುವ ನಮಗೂ ಅಡ್ಡಿಮಾಡುತ್ತಾರೆ. ಹೀಗೆ ತಮ್ಮ ಪಾಪಕೃತ್ಯಗಳನ್ನು ಎಲ್ಲಾ ಕಾಲಗಳಲ್ಲಿಯೂ ಸಂಪೂರ್ಣಮಾಡುತ್ತಾರೆ. ಕಡೆಗೆ ದೇವರ ಕೋಪವು ಅವರ ಮೇಲೆ ಬರುತ್ತದೆ.