TSK

TSK · ಮತ್ತಾಯನು 24:31

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ಮೋಶೆಯ ಸಂಗಡ ಮಾತನಾಡಿ, ಆಜ್ಞಾಪಿಸಿದ್ದೇನೆಂದರೆ,

ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.

ಅಮಾವಾಸ್ಯೆಯಲ್ಲಿಯೂ, ನಮ್ಮ ಉತ್ಸವದಿನವಾಗಿರುವ ಹುಣ್ಣಿಮೆಯಲ್ಲಿಯೂ ಕೊಂಬನ್ನು ಊದಿರಿ.

ಯೆಹೋವನು ತಾನು ನ್ಯಾಯ ತೀರಿಸುವ ಆಯುಧಗಳೊಡನೆ ದೂರ ದೇಶದಿಂದ ಅಂದರೆ, ಆಕಾಶ ಮಂಡಲದ ಕಟ್ಟಕಡೆಯಿಂದ ಭೂಮಿಯನ್ನೆಲ್ಲಾ ಹಾಳುಮಾಡುವುದಕ್ಕಾಗಿ ಬರುತ್ತಾನೆ.

ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ.

ಎಲ್ಲಾ ದಿಗಂತಗಳವರೇ, ನನ್ನ ಕಡೆಗೆ ತಿರುಗಿಕೊಳ್ಳಿರಿ, ರಕ್ಷಣೆಯನ್ನು ಹೊಂದಿಕೊಳ್ಳಿರಿ. ಏಕೆಂದರೆ ನಾನೇ ದೇವರು, ನನ್ನ ಹೊರತು ಯಾರೂ ಇಲ್ಲ.

ಕಣ್ಣೆತ್ತಿ ಸುತ್ತಲು ನೋಡು, ನಿನ್ನ ಮಕ್ಕಳೆಲ್ಲರೂ ಗುಂಪುಕೂಡಿ ನಿನ್ನ ಬಳಿಗೆ ಸೇರಿಬರುತ್ತಾರೆ; ಗಂಡುಮಕ್ಕಳು ದೂರದಿಂದ ಸಮೀಪಿಸುತ್ತಾರೆ, ಹೆಣ್ಣುಮಕ್ಕಳು ಕಂಕುಳಿನಲ್ಲಿ ಕುಳಿತು ಬರುತ್ತಾರೆ.

¶ ಎಲೈ, ಎಲೈ ಉತ್ತರದೇಶದಿಂದ ಓಡಿ ಬನ್ನಿರಿ; ಇದು ಯೆಹೋವನ ನುಡಿ; ಚತುರ್ದಿಕ್ಕಿನ ಗಾಳಿಗಳಂತೆ ನಿಮ್ಮನ್ನು ಚದುರಿಸಿದ್ದೆನಲ್ಲಾ; ಇದು ಯೆಹೋವನ ನುಡಿ.

ಯೆಹೋವನು ಸ್ವಜನರಿಗಾಗಿ ಅವರ ಮೇಲೆ ಕಾಣಿಸಿಕೊಳ್ಳುವನು; ಆತನ ಬಾಣವು ಸಿಡಿಲಿನಂತೆ ಹಾರುವುದು; ಕರ್ತನಾದ ಯೆಹೋವನು ತುತ್ತೂರಿಯನ್ನು ಊದಿ ದಕ್ಷಿಣ ಪ್ರಾಂತ್ಯದ ಬಿರುಗಾಳಿಗಳೊಡನೆ ನುಗ್ಗುವನು.

‹ಮನುಷ್ಯಕುಮಾರನು ತನ್ನ ದೂತರನ್ನು ಕಳುಹಿಸುವನು. ಅವರು ಆತನ ರಾಜ್ಯದೊಳಗಿಂದ ಪಾಪಕ್ಕೆ ಕಾರಣವಾದವರೆಲ್ಲರನ್ನೂ ಅಧರ್ಮಿಗಳನ್ನೂ ಕೂಡಿಸಿ ಬೆಂಕಿ ಕೊಂಡದಲ್ಲಿ ಹಾಕುವರು.›

¶ ‹“ಇದಲ್ಲದೆ ಮನುಷ್ಯಕುಮಾರನು ತನ್ನ ಮಹಿಮೆಯಿಂದ ಸಮಸ್ತ ದೇವದೂತರೊಂದಿಗೆ ಬರುವಾಗ ತನ್ನ ಮಹಿಮೆಯ ಸಿಂಹಾಸನದಲ್ಲಿ ಕುಳಿತುಕೊಳ್ಳುವನು;›

‹ಮತ್ತು ಆತನು ತನ್ನ ದೂತರನ್ನು ಕಳುಹಿಸಿ ಭೂಮಿಯ ಕಟ್ಟಕಡೆಯಿಂದ ಆಕಾಶದ ಕಟ್ಟಕಡೆಯವರೆಗೆ ತಾನು ಆರಿಸಿಕೊಂಡವರನ್ನು ನಾಲ್ಕುದಿಕ್ಕುಗಳಿಂದ ಒಟ್ಟುಗೂಡಿಸುವನು.”›

‹ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.›

ಆದಕಾರಣ ಅಗ್ರಿಪ್ಪರಾಜನೇ, ಪರಲೋಕದಿಂದ ನನಗೆ ಉಂಟಾದ ಆ ದರ್ಶನಕ್ಕೆ ನಾನು ಅವಿಧೇಯನಾಗದೆ ಮೊದಲು ದಮಸ್ಕದವರಿಗೆ,

ಕಡೆ ತುತ್ತೂರಿಯ ಧ್ವನಿಯು ಮೊಳಗುವಲ್ಲಿ, ಕ್ಷಣಮಾತ್ರದಲ್ಲಿ, ರೆಪ್ಪೆಬಡಿಯುವಷ್ಟರೊಳಗಾಗಿ ನಾವೆಲ್ಲರೂ ಮಾರ್ಪಡುವೆವು. ಹೌದು, ತುತ್ತೂರಿಯು ಮೊಳಗಿ ಸತ್ತವರು ನಿರ್ಲಯರಾಗಿ ಎಬ್ಬಿಸಲ್ಪಡುವರು, ನಾವು ರೂಪಾಂತರ ಹೊಂದುವೆವು.

ಯಾಕೆಂದರೆ ಕರ್ತನು ತಾನೇ ಆಜ್ಞಾಘೋಷದೊಡನೆಯೂ, ಪ್ರಧಾನದೂತನ ಶಬ್ದದೊಡನೆಯೂ, ದೇವರ ತುತ್ತೂರಿ ಧ್ವನಿಯೊಡನೆಯೂ ಆಕಾಶದಿಂದ ಇಳಿದುಬರುವನು. ಆಗ ಕ್ರಿಸ್ತನಲ್ಲಿ ಸತ್ತವರು ಮೊದಲು ಎದ್ದು ಬರುವರು.

‹ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ. ಆ ಏಳು ನಕ್ಷತ್ರಗಳು ಅಂದರೆ ಏಳು ಸಭೆಗಳ›‹ದೂತರು, ಆ ಏಳು ದೀಪಸ್ತಂಭಗಳು ಅಂದರೆ›‹ಆ ಏಳು ಸಭೆಗಳು.” ›

ಆಗ ದೇವರ ಸನ್ನಿಧಿಯಲ್ಲಿ ನಿಂತಿರುವ ಏಳು ದೇವದೂತರನ್ನು ಕಂಡೆನು. ಅವರಿಗೆ ಏಳು ತುತ್ತೂರಿಗಳು ಕೊಡಲ್ಪಟ್ಟವು.

¶ ಮತ್ತೊಬ್ಬ ದೇವದೂತನು ಆಕಾಶಮಧ್ಯದಲ್ಲಿ ಹಾರಾಡುತ್ತಿರುವುದನ್ನು ಕಂಡೆನು. ಭೂನಿವಾಸಿಗಳಾಗಿರುವ ಸಕಲ ಜನಾಂಗ, ಕುಲ, ಭಾಷೆ, ಜನಗಳೆಲ್ಲರಿಗೆ ಸಾರಿಹೇಳುವುದಕ್ಕಾಗಿ ನಿತ್ಯವಾದ ಶುಭವರ್ತಮಾನವು ಆತನಲ್ಲಿತ್ತು.