TSK

TSK · ಮತ್ತಾಯನು 24:6

مراجع Treasury of Scripture Knowledge في ಕನ್ನಡ IRV.

العودة إلى المقطع

ದೇವರು ನಮಗೆ ಆಶ್ರಯದುರ್ಗವಾಗಿದ್ದಾನೆ; ಆತನು ಇಕ್ಕಟ್ಟಿನಲ್ಲಿ ನಮಗೆ ವಿಶೇಷ ಸಹಾಯಕನು.

“ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ.

ಸ್ಥಿರಚಿತ್ತನನ್ನು ಶಾಂತಿಯಲ್ಲಿ ನೆಲೆಗೊಳಿಸಿ ಕಾಯುವಿ; ಅವನಿಗೆ ನಿನ್ನಲ್ಲಿ ಭರವಸವಿದೆ.

¶ ಹಾ, ನನ್ನ ಕರುಳು! ಕರುಳು! ಯಾತನೆಪಡುತ್ತದೆ; ಆಹಾ, ನನ್ನ ಗುಂಡಿಗೆಯ ಪಕ್ಕಗಳು! ನನ್ನ ಹೃದಯವು ನನ್ನೊಳಗೆ ತಳಮಳಗೊಂಡಿದೆ! ನಾನು ಬಾಯಿಮುಚ್ಚಿಕೊಂಡಿರಲಾರೆ; ನನ್ನ ಆತ್ಮವೇ, ನೀನು ತುತ್ತೂರಿಯ ಶಬ್ದವನ್ನೂ, ಯುದ್ಧದ ಘೋಷವನ್ನೂ ಕೇಳುತ್ತಿಯಲ್ಲಾ.

ನಾವು ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!

ಹೀಗಿರಲು ನಾನು ಅತಿ ದುಷ್ಟ ಜನಾಂಗಗಳನ್ನು ಬರಮಾಡುವೆನು, ಅವು ನನ್ನ ಜನರ ಮನೆಗಳನ್ನು ವಶಮಾಡಿಕೊಳ್ಳುವುದು; ನಾನು ಬಲಿಷ್ಠರ ಸೊಕ್ಕನ್ನು ಅಡಗಿಸುವೆನು, ಅವರ ಪವಿತ್ರ ಸ್ಥಾನಗಳು ಹೊಲೆಗೆಡುವವು.

“ನರಪುತ್ರನೇ, ಕರ್ತನು ಇಂತೆನ್ನುತ್ತಾನೆ ಎಂಬುದಾಗಿ ನುಡಿದು ಹೀಗೆ ಸಾರು, ‘ಆಹಾ, ಖಡ್ಗ, ಸಾಣೆ ಹಿಡಿದ ಖಡ್ಗ, ಮಸೆದ ಖಡ್ಗ!

ಅಧರ್ಮವನ್ನು ಕೊನೆಗಾಣಿಸುವುದು, ಪಾಪಗಳನ್ನು ತೀರಿಸುವುದು, ಅಪರಾಧವನ್ನು ನಿವಾರಿಸುವುದು, ಸನಾತನ ಧರ್ಮವನ್ನು ಸ್ಥಾಪಿಸುವುದು, ಕನಸನ್ನೂ ಮತ್ತು ಪ್ರವಾದಿಯ ನುಡಿಯನ್ನೂ ಮುದ್ರೆಹಾಕಿ ಯಥಾರ್ಥಮಾಡುವುದಕ್ಕೆ, ಅತಿಪರಿಶುದ್ಧವಾದದ್ದನ್ನು ಅಭಿಷೇಕಿಸುವುದು, ಇವೆಲ್ಲಾ ನೆರವೇರುವುದಕ್ಕೆ ಮೊದಲು ನಿನ್ನ ಜನಕ್ಕೂ, ನಿನ್ನ ಪರಿಶುದ್ಧ ಪುರಕ್ಕೂ ಎಪ್ಪತ್ತು ವಾರಗಳು ಕಳೆಯಬೇಕು ಎಂದು ನಿಷ್ಕರ್ಷೆಯಾಗಿದೆ.

ಅದು ನನಗೆ ಕೇಳಿಸಲು ನನ್ನ ಒಡಲು ನಡುಗಿತು, ಆ ಶಬ್ದಕ್ಕೆ ನನ್ನ ತುಟಿಗಳು ಅದರಿದವು. ಕ್ಷಯವು ನನ್ನ ಎಲುಬುಗಳಲ್ಲಿ ಸೇರಿತು. ನಾನು ನಿಂತ ಹಾಗೆಯೇ ನಡುಗಿದೆನು. ವಿಪತ್ಕಾಲವು ನಮ್ಮನ್ನು ಹಿಂಸಿಸುವ ಜನರನ್ನು ಎದುರಾಯಿಸಿ ಅವರ ಮೇಲೆ ಬೀಳುವವರೆಗೂ ನಾನು ಅದಕ್ಕಾಗಿ ತಾಳ್ಮೆಯಿಂದ ಎದುರುನೋಡುವೆನು.

‹ಕಳುಹಿಸಿಕೊಟ್ಟರೆ ನನಗೆ ಹೀಗೀಗೆ ಆಗಬೇಕೆಂಬ ಶಾಸ್ತ್ರದ ಮಾತುಗಳು ನೆರವೇರುವುದಾದರೂ ಹೇಗೆ?”› ಎಂದು ಹೇಳಿದನು.

‹ಇದಲ್ಲದೆ ಯುದ್ಧಗಳೂ ಗಲಭೆಗಳೂ ಆಗುವುದನ್ನು ನೀವು ಕೇಳುವಾಗ, ನೋಡುವಾಗ ಭಯಭೀತರಾಗಬೇಡಿರಿ, ಏಕೆಂದರೆ ಇದೆಲ್ಲಾ ಮೊದಲು ಆಗುವುದು ಅಗತ್ಯ. ಆದರೂ ಕೂಡಲೆ ಅಂತ್ಯ ಬರುವುದಿಲ್ಲ”› ಅಂದನು.

‹ಏಕೆಂದರೆ, ‘ಆತನು ಅಪರಾಧಿಗಳಲ್ಲಿ ಒಬ್ಬನಂತೆ ಎಣಿಸಲ್ಪಟ್ಟನು’ ಎಂದು ಬರೆದಿರುವ ಮಾತು ನನ್ನಲ್ಲಿ ನೆರವೇರಬೇಕಾಗಿದೆ ಎಂದು ನಿಮಗೆ ಹೇಳುತ್ತೇನೆ. ನನ್ನ ವಿಷಯದಲ್ಲಿ ಬರೆಯಲ್ಪಟ್ಟಿರುವ ಎಲ್ಲವು ನೆರವೇರಬೇಕು”› ಎಂದು ಹೇಳಿದನು.

¶ ‹“ನಾನು ನನ್ನ›‹ಸಮಾಧಾನವನ್ನು ನಿಮಗೆ ಕೊಟ್ಟು ಹೋಗುತ್ತಿದ್ದೇನೆ. ನನ್ನಲ್ಲಿರುವಂಥ ಸಮಾಧಾನವನ್ನು ನಾನು ನಿಮಗೆ ಕೊಡುತ್ತೇನೆ. ಲೋಕವು ಕೊಡುವಂತೆ ನಾನು ನಿಮಗೆ ಕೊಡುವುದಿಲ್ಲ. ನಿಮ್ಮ ಹೃದಯವು ಕಳವಳಗೊಳ್ಳದಿರಲಿ, ಹೆದರದಿರಲಿ.›

ಕರ್ತನ ಆಗಮನದ ದಿನವು ಈಗಾಗಲೇ ಬಂದಿದೆಯೆಂಬುದಾಗಿ ಆತ್ಮದಿಂದಾಗಲಿ ಮಾತಿನಿಂದಾಗಲಿ ಅಥವಾ ನಮ್ಮ ಪತ್ರದಿಂದಾಗಲಿ ನೀವು ಬೇಗನೆ ಮನದಲ್ಲಿ ಚಂಚಲರಾಗಿ ಕಳವಳಪಡಬೇಡಿರಿ.