TSK

TSK · ಮತ್ತಾಯನು 26:29

مراجع Treasury of Scripture Knowledge في ಕನ್ನಡ IRV.

العودة إلى المقطع

ಧಾನ್ಯದ್ರಾಕ್ಷಿಗಳು ಸಮೃದ್ಧಿಯಾಗಿ ಬೆಳೆದ ಸುಗ್ಗಿ ಕಾಲದಲ್ಲಿ ಜನರಿಗಾಗುವ ಸಂತೋಷಕ್ಕಿಂತಲೂ ನೀನು ನನ್ನ ಹೃದಯದಲ್ಲಿ ಹೆಚ್ಚಾದ ಆನಂದವನ್ನು ಉಂಟುಮಾಡಿದ್ದೀ.

ಹೃದಯಾನಂದಕರವಾದ ದ್ರಾಕ್ಷಾರಸವನ್ನು, ಮುಖಕ್ಕೆ ಕಾಂತಿಯನ್ನು ಉಂಟುಮಾಡುವ ಎಣ್ಣೆಯನ್ನು, ಪ್ರಾಣಾಧಾರವಾದ ರೊಟ್ಟಿಯನ್ನು ಸಂಪಾದಿಸಿಕೊಳ್ಳುತ್ತಾರೆ.

ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಮದ್ಯವು ಕುಡಿಯುವವರಿಗೆ ಕಹಿಯಾಗುವುದು.

ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು.

ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.

¶ ‹“ನಿಮಗೆ ನಿಜವಾಗಿ ಹೇಳುತ್ತೇನೆ ಇಲ್ಲಿ ನಿಂತವರಲ್ಲಿ ಕೆಲವರು ಮನುಷ್ಯಕುಮಾರನು ತನ್ನ ರಾಜ್ಯದಲ್ಲಿ ಬರುವುದನ್ನು ನೋಡುವ ತನಕ ಮರಣಹೊಂದುವುದಿಲ್ಲ”› ಅಂದನು.

‹ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ, ‘ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವತ್ತಾಗಿ ಪಡೆದುಕೊಳ್ಳಿರಿ.›

‹ನಿಮಗೆ ಸತ್ಯವಾಗಿ ಹೇಳುತ್ತೇನೆ; ನಾನು ದೇವರ ರಾಜ್ಯದಲ್ಲಿ ದ್ರಾಕ್ಷಾರಸವನ್ನು ಹೊಸದಾಗಿ ಕುಡಿಯುವ ದಿನದವರೆಗೂ ಅದನ್ನು ಇನ್ನು ಕುಡಿಯುವುದೇ ಇಲ್ಲ”› ಎಂದನು.

‹ಸಿಕ್ಕಿದ ಮೇಲೆ ಅವನು ಸಂತೋಷದಿಂದ ಅದನ್ನು ತನ್ನ ಹೆಗಲಿನ ಮೇಲೆ ಹೊತ್ತುಕೊಂಡು,›

‹ಆದರೆ ಉಲ್ಲಾಸಪಡುವುದೂ ಸಂತೋಷಗೊಳ್ಳುವುದೂ ನ್ಯಾಯವಾದದ್ದೇ, ಏಕೆಂದರೆ ಈ ನಿನ್ನ ತಮ್ಮ ಸತ್ತವನಾಗಿದ್ದನು, ತಿರುಗಿ ಬದುಕಿ ಬಂದಿದ್ದಾನೆ; ಪೋಲಿಹೋಗಿದ್ದನು, ಸಿಕ್ಕಿದನು’” ಎಂದು ಹೇಳಿದನು.›

‹ಆದುದರಿಂದ ನನ್ನ ತಂದೆಯು ನನಗೆ ರಾಜ್ಯವನ್ನು ನೇಮಿಸಿರುವ ಪ್ರಕಾರ ನಾನು ನಿಮಗೂ ನೇಮಿಸುತ್ತೇನೆ;›

‹ಹಾಗೆಯೇ, ನಿಮಗೂ ಈಗ ದುಃಖವಿದ್ದರೂ ನಾನು ನಿಮ್ಮನ್ನು ತಿರುಗಿ ನೋಡುವೆನು, ಆಗ ನಿಮ್ಮ ಹೃದಯಕ್ಕೆ ಆನಂದವಾಗುವುದು, ಮತ್ತು ನಿಮ್ಮ ಆನಂದವನ್ನು ಯಾರು ನಿಮ್ಮಿಂದ ತೆಗೆದು ಹಾಕಲು ಸಾಧ್ಯವಿಲ್ಲ.›

ಆತನು ಎಲ್ಲರಿಗೂ ಪ್ರತ್ಯಕ್ಷನಾಗದೆ, ದೇವರು ಮುಂಚಿತವಾಗಿ ಆರಿಸಿಕೊಂಡಿದ್ದ ಸಾಕ್ಷಿಗಳಾದ ನಮಗೆ ಪ್ರತ್ಯಕ್ಷನಾದನು. ಆತನು ಸತ್ತವರೊಳಗಿಂದ ಜೀವಿತನಾಗಿ ಎದ್ದು ಬಂದ ಮೇಲೆ ನಾವು ಆತನ ಸಂಗಡ ಊಟ ಮಾಡಿದೆವು.

ಅದನ್ನು ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ನಾಲ್ಕು ಮಂದಿ ಹಿರಿಯರೂ ಕುರಿಮರಿಯಾದಾತನ ಪಾದಕ್ಕೆ ಅಡ್ಡ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.

ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದಿಂದ ಕೊಂಡುಕೊಳ್ಳಲ್ಪಟ್ಟ ಆ ಒಂದು ಲಕ್ಷದ ನಲವತ್ತನಾಲ್ಕು ಸಾವಿರ ಜನರ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.