¶ “‘ನ್ಯಾಯಾಧಿಕಾರಿಯು ತಿಳಿಸಬೇಕೆಂದು ಆಣೆ ಇಟ್ಟರೂ, ಯಾವನಾದರೂ ತಾನು ಕಂಡು ಕೇಳಿದ್ದನ್ನು ತಿಳಿಸದೆಹೋದರೆ ಅವನು ಪಾಪಕ್ಕೆ ಗುರಿಯಾಗುವನು.
TSK
TSK · ಮತ್ತಾಯನು 26:63
مراجع Treasury of Scripture Knowledge في ಕನ್ನಡ IRV.
¶ ಆ ದಿನ ಸೌಲನು ಇಸ್ರಾಯೇಲರನ್ನು ಕುರಿತು, “ಶತ್ರುಗಳಿಗೆ ಮುಯ್ಯಿತೀರಿಸುವುದಕ್ಕೋಸ್ಕರ ನಿಮ್ಮಲ್ಲಿ ಒಬ್ಬನಾದರೂ ಸಾಯಂಕಾಲದವರೆಗೆ ಊಟಮಾಡಬಾರದು; ಮಾಡಿದವನು ಶಾಪಗ್ರಸ್ತನಾಗಲಿ” ಎಂದು ಆಣೆಯಿಟ್ಟಿದ್ದರಿಂದ ಅಂದು ಅವರೆಲ್ಲರೂ ಬಹುವಾಗಿ ಬಳಲಿಹೋಗಿದ್ದರೂ ಒಬ್ಬನಾದರೂ ಆಹಾರ ಪಧಾರ್ಥವನ್ನು ರುಚಿಸಿ ನೋಡಿರಲಿಲ್ಲ.
ಕೂಡಲೆ ಒಬ್ಬನು ಅವನಿಗೆ, “ಈ ಹೊತ್ತು ಊಟಮಾಡುವಂಥವರು ಶಾಪಗ್ರಸ್ತರಾಗುವರೆಂದು ನಿನ್ನ ತಂದೆಯು ಆಣೆಯಿಟ್ಟು ಹೇಳಿದ್ದಾನೆ” ಎಂದು ತಿಳಿಸಿದನು.
ಆಗ ಅರಸನು ಅವನಿಗೆ, “ಸತ್ಯವನ್ನೇ ತಿಳಿಸಬೇಕೆಂದು ಯೆಹೋವನ ಹೆಸರಿನಲ್ಲಿ ನಾನು ನಿನ್ನಿಂದ ಎಷ್ಟು ಸಾರಿ ಪ್ರಮಾಣ ಮಾಡಿಸಬೇಕು?” ಎಂದನು
ನನ್ನ ಪ್ರಾಣವನ್ನು ತೆಗೆಯಬೇಕೆನ್ನುವವರು ನನಗೆ ಉರುಲುಗಳನ್ನು ಒಡ್ಡಿದ್ದಾರೆ; ನನ್ನ ವಿಪತ್ತನ್ನು ಕೋರುವವರು ನನಗೆ ನಾಶನವನ್ನೇ ನಿಶ್ಚಯಿಸಿಕೊಂಡು, ಯಾವಾಗಲೂ ಮೋಸವನ್ನು ಕಲ್ಪಿಸುತ್ತಿದ್ದಾರೆ.
ಒಂದು ಮಗು ನಮಗಾಗಿ ಹುಟ್ಟಿದೆಯಷ್ಟೆ, ವರದ ಮಗನು ನಮಗೆ ದೊರೆತನು; ಆಡಳಿತವು ಅವನ ಬಾಹುವಿನ ಮೇಲಿರುವುದು; ಅದ್ಭುತ ಸ್ವರೂಪನು, ಆಲೋಚನಾ ಕರ್ತನು, ಪರಾಕ್ರಮಿಯಾದ ದೇವರೂ, ನಿತ್ಯನಾದ ತಂದೆ, ಸಮಾಧಾನದ ಪ್ರಭು ಎಂಬುದು ಆತನ ಹೆಸರು.
¶ ಇದನ್ನು ಕೇಳಿ ಶದ್ರಕ್ ಮೇಶಕ್, ಅಬೇದ್ನೆಗೋ ಎಂಬುವವರು ರಾಜನಿಗೆ, “ನೆಬೂಕದ್ನೆಚ್ಚರನೇ, ಈ ವಿಷಯದಲ್ಲಿ ನಾವು ನಿನಗೆ ಏನೂ ಹೇಳಬೇಕಾಗಿಲ್ಲ.
ಮಹಾಯಾಜಕನು ಯೇಸುವಿಗೆ, “ನಿನಗೆ ಜೀವಸ್ವರೂಪನಾದ ದೇವರ ಮೇಲೆ ಆಣೆಯಿಟ್ಟು ಕೇಳುತ್ತಿದ್ದಾನೆ; ನೀನು ದೇವಕುಮಾರನಾದ ಕ್ರಿಸ್ತನಾದರೆ ನಮಗೆ ಹೇಳಬೇಕು” ಅಂದನು.
ಆತನು ಅವನ ಯಾವ ಮಾತುಗಳಿಗೂ ಉತ್ತರಕೊಡಲಿಲ್ಲ. ಅದನ್ನು ನೋಡಿ ದೇಶಾಧಿಪತಿಯು ತುಂಬಾ ಆಶ್ಚರ್ಯಪಟ್ಟನು.
ಅವನು ದೇವರಲ್ಲಿ ಭರವಸವಿಟ್ಟಿದ್ದಾನೆ, ದೇವರಿಗೆ ಇಷ್ಟವಿದ್ದರೆ ಈಗ ಅವನನ್ನು ಬಿಡಿಸಲಿ; ‘ತಾನು ದೇವರ ಮಗನಾಗಿದ್ದೇನೆಂದು ಹೇಳಿದನಲ್ಲಾ’” ಎಂದು ಅಣಕಿಸಿ ಮಾತನಾಡುತ್ತಿದ್ದರು.
ಆದರೆ ಯೇಸು ಏನೂ ಉತ್ತರ ಕೊಡದೆ ಮೌನವಾಗಿದ್ದನು. ಪುನಃ ಮಹಾಯಾಜಕನು, “ನೀನು ಕ್ರಿಸ್ತನೋ, ಸ್ತುತಿಗೆ ಪಾತ್ರನಾದ ದೇವರ ಕುಮಾರನೋ?” ಎಂದು ಆತನನ್ನು ಕೇಳಿದನು.
ನಾನು ಅದನ್ನು ನೋಡಿದ್ದೇನೆ ಮತ್ತು ಈತನೇ ದೇವಕುಮಾರನೆಂದು ಸಾಕ್ಷಿ ಕೊಟ್ಟಿದ್ದೇನೆ” ಎಂದು ಹೇಳಿದನು.
¶ ‹“ದೇವರು ಲೋಕದ ಮೇಲೆ ಎಷ್ಟೋ ಪ್ರೀತಿಯನ್ನಿಟ್ಟು ತನ್ನ ಒಬ್ಬನೇ ಮಗನನ್ನು ಕೊಟ್ಟನು ಆತನನ್ನು ನಂಬುವ ಒಬ್ಬನಾದರೂ ನಾಶವಾಗದೆ ಎಲ್ಲರೂ ನಿತ್ಯಜೀವವನ್ನು ಪಡೆಯಬೇಕೆಂದು ಆತನನ್ನು ಕೊಟ್ಟನು.›
ನೀನು ದೇವರಿಂದ ಬಂದ ಅತಿಪರಿಶುದ್ಧನೆಂದು ನಾವು ನಂಬಿದ್ದೇವೆ ಮತ್ತು ತಿಳಿದಿದ್ದೇವೆ” ಎಂದನು.
ಯೆಹೂದ್ಯರು ಆತನನ್ನು ಸುತ್ತುವರೆದು ಆತನಿಗೆ, “ಇನ್ನು ಎಷ್ಟು ಕಾಲ ನಮ್ಮನ್ನು ಸಂದಿಗ್ಧದಲ್ಲಿ ಇಡುತ್ತಿ? ನೀನು ಕ್ರಿಸ್ತನಾಗಿದ್ದರೆ ಅದನ್ನು ನಮಗೆ ಸ್ಪಷ್ಟವಾಗಿ ಹೇಳು” ಎಂದರು.
‹ತಂದೆಯು ಪ್ರತಿಷ್ಠೆಮಾಡಿ ಲೋಕಕ್ಕೆ ಕಳುಹಿಸಿಕೊಟ್ಟವನಾದ ‘ನಾನು ದೇವರ ಮಗನಾಗಿದ್ದೇನೆಂದು’ ಹೇಳಿದ್ದಕ್ಕೆ ‘ನೀನು ದೇವದೂಷಣೆ ಮಾಡುತ್ತೀ ಎಂದು ನೀವು ನನಗೆ ಹೇಳುತ್ತಿರಲ್ಲಾ?’›
ಯೆಹೂದ್ಯರು ಅವನಿಗೆ, “ನಮಗೆ ಒಂದು ನೇಮ ಉಂಟು. ಆ ನೇಮದ ಪ್ರಕಾರ ಆತನು ಸಾಯಲೇಬೇಕು. ಏಕೆಂದರೆ ಆತನು ತನ್ನನ್ನು ದೇವರ ಮಗನಾಗಿ ಮಾಡಿಕೊಂಡಿದ್ದಾನೆ” ಎಂದರು.
ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.
ಬಯ್ಯುವವರನ್ನು ಆತನು ಪ್ರತಿಯಾಗಿ ಬಯ್ಯಲಿಲ್ಲ, ಆತನು ಬಾಧೆಯನ್ನನುಭವಿಸಿದಾಗ ಯಾರನ್ನೂ ಬೆದರಿಸದೆ, ನ್ಯಾಯವಾಗಿ ತೀರ್ಪು ಮಾಡುವಾತನಿಗೆ ತನ್ನ ಕಾರ್ಯವನ್ನು ಒಪ್ಪಿಸಿದನು.