ನಿನ್ನ ದೇವರಾದ ಯೆಹೋವನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತಬಾರದು. ಯೆಹೋವನು ತನ್ನ ಹೆಸರನ್ನು ಅಯೋಗ್ಯಕಾರ್ಯಕ್ಕಾಗಿ ಎತ್ತುವವನನ್ನು ಶಿಕ್ಷಿಸದೆ ಬಿಡುವುದಿಲ್ಲ.
TSK
TSK · ಮತ್ತಾಯನು 26:72
مراجع Treasury of Scripture Knowledge في ಕನ್ನಡ IRV.
¶ ಆಗ ದೂತನು ನನಗೆ, “ದೇಶದ ಮೇಲೆಲ್ಲಾ ಹೊರಟು ಬಂದಿರುವ ಶಾಪವು ಇದೇ. ಕಳ್ಳತನ ಮಾಡುವ ಪ್ರತಿಯೊಬ್ಬರೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವರು. ಇದಕ್ಕೆ ತಕ್ಕ ಹಾಗೆ ಪ್ರತಿಯೊಬ್ಬ ಸುಳ್ಳು ಸಾಕ್ಷಿಯೂ ದೇಶದಿಂದ ಹೊರಗೆ ತೆಗೆದುಹಾಕಲ್ಪಡುವನು.
“ನಾನು ನ್ಯಾಯತೀರಿಸುವುದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರನು, ವ್ಯಭಿಚಾರಿಯೂ, ಸುಳ್ಳುಸಾಕ್ಷಿ ಹೇಳುವವನು, ಕೂಲಿ ಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನು ಮತ್ತು ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು ಅಂತು ನನಗೆ ಹೆದರದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರವಾಗಿ ನ್ಯಾಯತೀರಿಸಿ ಸಾಕ್ಷಿಯಾಗಿರುವೆನು” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಅವನು, “ಶಾಪಹಾಕಿಕೊಳ್ಳುವುದಕ್ಕೆ ಪ್ರಾರಂಭಿಸಿ ಆಣೆಯಿಟ್ಟು, ಆ ಮನುಷ್ಯನನ್ನು ನಾನರಿಯೆನು” ಎಂದು ಹೇಳಿದನು. ಕೂಡಲೇ ಹುಂಜವೂ ಕೂಗಿತು.
ಆಗ ಪೇತ್ರನು; “ಅನನೀಯನೇ, ನೀನು ಆ ಹೊಲದ ಕ್ರಯದಲ್ಲಿ ಒಂದು ಭಾಗವನ್ನು ಬಚ್ಚಿಟ್ಟುಕೊಂಡು ಪವಿತ್ರಾತ್ಮನನ್ನು ವಂಚಿಸುವಂತೆ ಸೈತಾನನು ನಿನ್ನ ಹೃದಯದಲ್ಲಿ ಏಕೆ ತುಂಬಿಸಿಕೊಂಡಿ?