ಆದರೆ ರಾತ್ರಿಯಲ್ಲಿ ದೇವರು ಅರಾಮ್ಯನಾದ ಲಾಬಾನನ ಕನಸಿನಲ್ಲಿ ಬಂದು, “ನೀನು ಯಾಕೋಬನ ಸಂಗಡ ಒಳ್ಳೆಯದನ್ನಾಗಲಿ ಕೆಟ್ಟದ್ದನ್ನಾಗಲಿ ಮಾತನಾಡದಂತೆ ಎಚ್ಚರಿಕೆಯಾಗಿರು” ಎಂದನು.
TSK
TSK · ಮತ್ತಾಯನು 27:19
مراجع Treasury of Scripture Knowledge في ಕನ್ನಡ IRV.
¶ ಯೆಹೋವನು ಅವರಿಗೆ, “ನನ್ನ ಮಾತನ್ನು ಕೇಳಿರಿ. ನಿಮ್ಮಲ್ಲಿ ಪ್ರವಾದಿಯಿದ್ದರೆ ನಾನು ಅವನಿಗೆ ಜ್ಞಾನದೃಷ್ಟಿಯಲ್ಲಿ ಪ್ರಕಟಿಸುವೆನು, ಮತ್ತು ಕನಸಿನಲ್ಲಿ ಅವನ ಸಂಗಡ ಮಾತನಾಡುವೆನು.
ಬಹಳವಾಗಿ ಗದರಿಸಿದರೂ ತಗ್ಗದವನು, ಏಳದ ಹಾಗೆ ಫಕ್ಕನೆ ಮುರಿದು ಬೀಳುವನು.
¶ ಚೀಯೋನ್ ನಗರಿಯೇ, ಬಹು ಸಂತೋಷಪಡು; ಯೆರೂಸಲೇಮ್ ಪುರಿಯೇ, ಹರ್ಷಧ್ವನಿಗೈ! ನೋಡು, ನಿನ್ನ ಅರಸನು ನಿನ್ನ ಬಳಿಗೆ ಬರುತ್ತಾನೆ; ಆತನು ನ್ಯಾಯವಂತನೂ, ರಕ್ಷಿಸುವಾತನೂ, ಶಾಂತಗುಣವುಳ್ಳವನಾಗಿಯೂ ಕತ್ತೆಯನ್ನು, ಹೌದು, ಪ್ರಾಯದ ಕತ್ತೆ ಮರಿಯನ್ನು ಹತ್ತಿದವನಾಗಿಯೂ ಬರುತ್ತಾನೆ.
ದೇವರು ಕನಸಿನಲ್ಲಿ ಅವರಿಗೆ, ನೀವು ಹೆರೋದನ ಬಳಿಗೆ ಹಿಂದಿರುಗಿ ಹೋಗಬಾರದೆಂದು ಆಜ್ಞೆ ನೀಡಿದ್ದರಿಂದ ಅವರು ಮತ್ತೊಂದು ದಾರಿಯಿಂದ ತಮ್ಮ ದೇಶಕ್ಕೆ ಹೊರಟುಹೋದರು.
ಆದರೆ ಅರ್ಖೆಲಾಯನು ತನ್ನ ತಂದೆಯಾದ ಹೆರೋದನಿಗೆ ಬದಲಾಗಿ ಯೂದಾಯವನ್ನು ಆಳುತ್ತಿದ್ದಾನೆ ಎಂದು ಕೇಳಿ ಅಲ್ಲಿಗೆ ಹೋಗುವುದಕ್ಕೆ ಅಂಜಿದನು. ಆಗ ಅವನು ಕನಸಿನಲ್ಲಿ ದೇವರ ಅಪ್ಪಣೆಯನ್ನು ಹೊಂದಿ ಗಲಿಲಾಯ ಸೀಮೆಗೆ ಹೋದನು.
ಆಗ ಪಿಲಾತನು ತನ್ನ ಯತ್ನ ನಡೆಯುವುದಿಲ್ಲ ಗದ್ದಲ ಮಾತ್ರ ಹೆಚ್ಚಾಗುತ್ತದೆ ಎಂದು ತಿಳಿದು ನೀರನ್ನು ತೆಗೆದುಕೊಂಡು ಜನರ ಮುಂದೆ ಕೈ ತೊಳೆದುಕೊಂಡು, “ಈ ನೀತಿವಂತನನ್ನು ಕೊಲ್ಲಿಸುವುದರಲ್ಲಿ ನಾನು ನಿರಪರಾಧಿ, ನೀವೇ ನೋಡಿಕೊಳ್ಳಿರಿ” ಎನ್ನಲು
¶ ಶತಾಧಿಪತಿಯು ನಡೆದ ಸಂಗತಿಯನ್ನು ನೋಡಿ, “ಈ ಮನುಷ್ಯನು ನಿಜವಾಗಲೂ ನೀತಿವಂತನೇ” ಆಗಿದ್ದನು ಎಂದು ದೇವರನ್ನು ಕೊಂಡಾಡಿದನು.
ಆತನು ಯಾವ ಪಾಪವನ್ನೂ ಮಾಡಲಿಲ್ಲ, ಆತನ ಬಾಯಲ್ಲಿ ಯಾವ ವಂಚನೆಯೂ ಸಿಕ್ಕಲಿಲ್ಲ.