ಅವುಗಳಿಗೆ ಅಡ್ಡ ಬೀಳಬಾರದು, ಪೂಜೆ ಮಾಡಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಬಿಟ್ಟುಕೊಡುವುದಿಲ್ಲ. ಆದುದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ, ಮೂರು ನಾಲ್ಕು ತಲೆಗಳವರೆಗೆ ಬರಮಾಡುವೆನು.
TSK
TSK · ಮತ್ತಾಯನು 27:25
مراجع Treasury of Scripture Knowledge في ಕನ್ನಡ IRV.
ನಿಮ್ಮ ದೇವರಾದ ಯೆಹೋವನು ನಿಮಗೆ ಸ್ವದೇಶವಾಗುವುದಕ್ಕೆ ಕೊಡುವ ದೇಶದಲ್ಲಿ ನಿರಪರಾಧಿಗೆ ಮರಣಶಿಕ್ಷೆಯಾಗದಂತೆ; ಆ ದೋಷವು ನಿಮ್ಮದಾಗದಂತೆ ನೀವು ಹೀಗೆ ಮಾಡಬೇಕು.
ಅವರಲ್ಲಿ ಯಾರಾದರೂ ಮನೆಬಿಟ್ಟು ಬೀದಿಗೆ ಬಂದರೆ ಅವರ ಮರಣಕ್ಕೆ ಅವರೇ ಕಾರಣರು; ಅದಕ್ಕೆ ನಾವು ಹೊಣೆಗಾರರಲ್ಲ. ಆದರೆ ನಿನ್ನೊಡನೆ ಮನೆಯಲ್ಲಿದ್ದವರ ಮೇಲೆ ಯಾರಾದರೂ ಕೈ ಮಾಡಿದ್ದಾದರೆ ಆ ರಕ್ತಾಪರಾಧವು ನಮ್ಮ ತಲೆಯ ಮೇಲೆ ಇರುವುದು.
¶ ಸ್ವಲ್ಪ ಹೊತ್ತಾದ ಮೇಲೆ ಈ ವರ್ತಮಾನವು ದಾವೀದನಿಗೆ ಮುಟ್ಟಿತು. ಆಗ ಅವನು, “ನೇರನ ಮಗನಾದ ಅಬ್ನೇರನ ರಕ್ತಾಪರಾಧಕ್ಕೆ ನಾನೂ, ನನ್ನ ರಾಜ್ಯವೂ ಯೆಹೋವನ ಮುಂದೆ ಸದಾ ನಿರ್ದೋಷಿಗಳು.
ಯೆಹೂದ ರಾಜ್ಯದ ನಿರಪರಾಧಿಗಳ ರಕ್ತದಿಂದ ಯೆರೂಸಲೇಮನ್ನು ತುಂಬಿಸಿದ ಮನಸ್ಸೆಯ ದುಷ್ಕೃತ್ಯಗಳನ್ನು ಯೆಹೋವನು ಕ್ಷಮಿಸದೆ ಹೋದನು.
¶ “ಇಗೋ, ಇವನು ಪಡೆದ ಮಗನು, ತನ್ನ ತಂದೆಯು ಮಾಡಿದ ಪಾಪಗಳನ್ನೆಲ್ಲಾ ಕಂಡು ಭಯಪಟ್ಟು ಇಂಥಾ ಕಾರ್ಯಗಳನ್ನು ನಡೆಸದೆ,
¶ “ಯೆರುಸಲೇಮ್ ನಗರ ಸುರಿಸಿದ ರಕ್ತವು ಅದರ ಮಧ್ಯದಲ್ಲಿದೆ; ಅದು ಅದನ್ನು ಬಂಡೆಯ ತುದಿಯಲ್ಲಿ ಇಟ್ಟಿದ್ದಾರೆ. ಧೂಳು ಮುಚ್ಚುವ ಹಾಗೆ ನೆಲದ ಮೇಲೆ ಚೆಲ್ಲಲಿಲ್ಲ.
‹‘ನಾವು ನಮ್ಮ ಹಿರಿಯರ ಕಾಲದಲ್ಲಿ ಇದ್ದಿದ್ದರೆ ಪ್ರವಾದಿಗಳನ್ನು ಕೊಂದ ಪಾಪದಲ್ಲಿ ಪಾಲುಗಾರರಾಗುತ್ತಿರಲಿಲ್ಲ’ ಅನ್ನುತ್ತೀರಿ.›
ಪ್ರವಾದಿಗಳಲ್ಲಿ ನಿಮ್ಮ ಪೂರ್ವಿಕರು ಹಿಂಸೆಪಡಿಸದವರು ಯಾರಿದ್ದಾರೆ? ಅವರು ಆ ನೀತಿಸ್ವರೂಪನಾದ ಕರ್ತನ ಆಗಮನದ ವಿಷಯದಲ್ಲಿ ಮುಂತಿಳಿಸಿದವರನ್ನು ಕೊಂದರು, ನೀವು ಈಗ ಆತನನ್ನು ಹಿಡಿದುಕೊಟ್ಟು ಕೊಲ್ಲಿಸಿದ್ದೀರಿ.
ಮೋಶೆಯ ಧರ್ಮಶಾಸ್ತ್ರವನ್ನು ತಿರಸ್ಕಾರ ಮಾಡಿದವನಿಗೆ ಇಬ್ಬರ ಇಲ್ಲವೆ ಮೂವರ ಸಾಕ್ಷ್ಯಧಾರದ ಮೇಲೆ ಕರುಣೆಯಿಲ್ಲದೆ ಮರಣದಂಡನೆ ಆಗುತ್ತಿತಷ್ಟೆ.