ಅಭಿಷಿಕ್ತನಾದ ಯಾಜಕನೇ ದೋಷಿಯಾಗಿ ಜನರೆಲ್ಲರನ್ನು ಅಪರಾಧಕ್ಕೆ ಒಳಪಡಿಸಿದರೆ, ತನ್ನ ದೋಷಪರಿಹಾರಕ್ಕಾಗಿ ಅವನು ಪೂರ್ಣಾಂಗವಾದ ಹೋರಿಯನ್ನು ಯೆಹೋವನಿಗೆ ಸಮರ್ಪಿಸಬೇಕು.
TSK
TSK · ಮತ್ತಾಯನು 27:32
مراجع Treasury of Scripture Knowledge في ಕನ್ನಡ IRV.
ಆ ಮೊದಲನೆಯ ಹೋರಿಯನ್ನು ಪಾಳೆಯದ ಹೊರಗೆ ತೆಗೆದುಕೊಂಡು ಹೋಗಿ ಸುಡಿಸಿಬಿಟ್ಟ ಪ್ರಕಾರ ಈ ಹೋರಿಯನ್ನು ಸುಡಿಸಿಬಿಡಬೇಕು. ಇದು ಜನಸಮೂಹದ ದೋಷಪರಿಹಾರಕ ಯಜ್ಞ.
ಅವನು ದೇವರನ್ನೂ ಮತ್ತು ಅರಸನನ್ನೂ ಶಪಿಸಿದನು ಎಂಬುದಾಗಿ ಇಬ್ಬರ ಸಾಕ್ಷಿ ಹೇಳಿಸಿ, ಅವನನ್ನು ಹೊರಗೆ ಒಯ್ದು ಕಲ್ಲೆಸೆದು ಕೊಲ್ಲಿರಿ” ಎಂದು ಬರೆದಿದ್ದಳು.
‹ಒಬ್ಬನು ಒಂದು ಮೈಲು ದೂರ ಬಾ ಎಂದು ನಿನ್ನನ್ನು ಒತ್ತಾಯಿಸಿದರೆ ಅವನ ಸಂಗಡ ಎರಡು ಮೈಲು ದೂರ ಹೋಗು.›
¶ ಆಗ ಹೊಲದಿಂದ ಹೊರಟು ಆ ಮಾರ್ಗವಾಗಿ ಬರುತ್ತಿದ್ದ ಒಬ್ಬನನ್ನು ಆತನ ಶಿಲುಬೆಯನ್ನು ಹೊರುವುದಕ್ಕೆ ಒತ್ತಾಯಪಡಿಸಿದರು. ಅವನು ಯಾರೆಂದರೆ, ಅಲೆಕ್ಸಾಂದ್ರ ಹಾಗೂ ರೂಫ ಎಂಬುವರ ತಂದೆಯಾದ ಕುರೇನೆ ಪಟ್ಟಣದ ಸೀಮೋನನು.
¶ ಆತನು ತನ್ನ ಶಿಲುಬೆಯನ್ನು ತಾನೇ ಹೊತ್ತುಕೊಂಡು “ಕಪಾಲಸ್ಥಳ” ಎಂಬ ಸ್ಥಳಕ್ಕೆ ಹೋದನು. ಇದನ್ನು ಇಬ್ರಿಯ ಭಾಷೆಯಲ್ಲಿ “ಗೊಲ್ಗೊಥಾ” ಎಂದು ಕರೆಯುತ್ತಾರೆ.
ಆದರೆ ಲಿಬೆರ್ತೀನರೆಂಬವರ ಸಮಾಜಕ್ಕೆ ಸೇರಿದ ಕುರೇನ್ಯದವರು ಮತ್ತು ಅಲೆಕ್ಸಾಂದ್ರಿಯದವರು, ಕಿಲಿಕ್ಯ ಮತ್ತು ಆಸ್ಯ ಸೀಮೆಗಳಿಂದ ಬಂದವರಲ್ಲಿ ಕೆಲವರು ಎದ್ದು ಸ್ತೆಫನನ ಸಂಗಡ ತರ್ಕಮಾಡುತ್ತಾ ಇದ್ದರು.
ಅವರಲ್ಲಿ ಕುಪ್ರದ್ವೀಪದವರು ಕೆಲವರೂ, ಕುರೇನ್ಯದವರು ಕೆಲವರೂ, ಅಂತಿಯೋಕ್ಯಕ್ಕೆ ಬಂದು, ಗ್ರೀಕರೊಂದಿಗೆ ಮಾತನಾಡಿ ಕರ್ತನಾದ ಯೇಸುವಿನ ವಿಷಯವಾದ ಸುವಾರ್ತೆಯನ್ನು ಸಾರಿದರು.
ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.