TSK

TSK · ಮತ್ತಾಯನು 27:63

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಅಂದಿನಿಂದ ಯೇಸು ಕ್ರಿಸ್ತನು ತಾನು ಯೆರೂಸಲೇಮಿಗೆ ಹೋಗಿ ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ಬಹು ಕಷ್ಟಗಳನ್ನನುಭವಿಸಿ ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಎಬ್ಬಿಸಲ್ಪಡುವುದು ಅಗತ್ಯವೆಂದು ತನ್ನ ಶಿಷ್ಯರಿಗೆ ಹೇಳುವುದಕ್ಕೆ ಪ್ರಾರಂಭಿಸಿದನು.

‹ಆತನನ್ನು ಅಪಹಾಸ್ಯ ಮಾಡುವುದಕ್ಕಾಗಿಯೂ ಚಾಟಿಗಳಿಂದ ಹೊಡೆಯುವುದಕ್ಕಾಗಿಯೂ ಶಿಲುಬೆಗೆ ಹಾಕುವುದಕ್ಕಾಗಿಯೂ ಅನ್ಯಜನರ ಕೈಗೆ ಒಪ್ಪಿಸುವರು. ಆದರೆ ಆತನು›‹ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡುವನು”› ಎಂದು ಹೇಳಿದನು.

¶ ಇದಲ್ಲದೆ ಆತನು, ಮನುಷ್ಯಕುಮಾರನು ಬಹು ಕಷ್ಟಗಳನ್ನು ಅನುಭವಿಸಿ ಹಿರಿಯರಿಂದಲೂ, ಮುಖ್ಯಯಾಜಕರಿಂದಲೂ, ಶಾಸ್ತ್ರಿಗಳಿಂದಲೂ ತಿರಸ್ಕರಿಸಲ್ಪಟ್ಟವನಾಗಿ ಕೊಲ್ಲಲ್ಪಟ್ಟು ಮೂರು ದಿನಗಳ ನಂತರ ಜೀವಿತನಾಗಿ ಎದ್ದು ಬರಬೇಕಾಗಿದೆ ಎಂದು ಉಪದೇಶಮಾಡುವುದಕ್ಕೆ ಪ್ರಾರಂಭಿಸಿದನು.

ಯೇಸು ಅವರಿಗೆ, ‹“ಮನುಷ್ಯಕುಮಾರನು ಬಹು ಕಷ್ಟಗಳನ್ನನುಭವಿಸಿ, ಹಿರಿಯರಿಂದಲೂ ಮುಖ್ಯಯಾಜಕರಿಂದಲೂ ಶಾಸ್ತ್ರಿಗಳಿಂದಲೂ ನಿರಾಕರಿಸಲ್ಪಟ್ಟು ಕೊಲ್ಲಲ್ಪಟ್ಟು ಮೂರನೆಯ ದಿನದಲ್ಲಿ ಜೀವಿತನಾಗಿ ಎಬ್ಬಿಸಲ್ಪಡಬೇಕಾಗಿದೆ”› ಎಂದು ಹೇಳಿದನು.

“ಇವನು ತಾನೇ ಕ್ರಿಸ್ತನು, ಅರಸನಾಗಿದ್ದೇನೆಂದು ಹೇಳುತ್ತಾ, ಕೈಸರನಿಗೆ ಸುಂಕ ಕೊಡಬಾರದೆಂದು ಬೋಧಿಸುತ್ತಾ, ನಮ್ಮ ದೇಶದವರ ಮನಸ್ಸು ಕೆಡಿಸುವುದನ್ನು ನಾವು ಕಂಡಿದ್ದೇವೆ” ಎಂಬುದಾಗಿ ಆತನ ಮೇಲೆ ದೂರು ಹೇಳುವುದಕ್ಕೆ ತೊಡಗಿದರು.

ಅದಕ್ಕೆ ಯೇಸು ‹“ಈ ದೇವಾಲಯವನ್ನು ಕೆಡವಿರಿ, ನಾನು ಮೂರು ದಿನಗಳಲ್ಲಿ ಅದನ್ನು ಎಬ್ಬಿಸುವೆನು”› ಎಂದು ಉತ್ತರಕೊಟ್ಟನು.

ಆಗ ಫರಿಸಾಯರು ಅವರಿಗೆ “ನೀವೂ ಸಹ ಆತನ ಮಾತಿಗೆ ಮರುಳಾದೀರಾ?