TSK

TSK · ಮತ್ತಾಯನು 3:6

مراجع Treasury of Scripture Knowledge في ಕನ್ನಡ IRV.

العودة إلى المقطع

ಅವನು ಅದರ ತಲೆಯ ಮೇಲೆ ಎರಡು ಕೈಗಳನ್ನು ಇಟ್ಟು, ಇಸ್ರಾಯೇಲರ ಎಲ್ಲಾ ಪಾಪಗಳನ್ನು, ದ್ರೋಹಗಳನ್ನು ಮತ್ತು ಅಪರಾಧಗಳನ್ನು ಯೆಹೋವನಿಗೆ ಅರಿಕೆಮಾಡಿ ಆ ಹೋತದ ತಲೆಯ ಮೇಲೆ ಹೊರಿಸಿ, ಅದನ್ನು ಆ ಕೆಲಸಕ್ಕೆ ನೇಮಕವಾದವನ ಕೈಯಿಂದ ಅರಣ್ಯಕ್ಕೆ ಕಳುಹಿಸಿಬಿಡಬೇಕು.

ಅಂಥವರು ತಮ್ಮ ಅಪರಾಧವನ್ನು ಅರಿಕೆಮಾಡಬೇಕು. ಅದಲ್ಲದೆ ಅಪರಾಧ ಮಾಡಿದವನು ನಷ್ಟಪಟ್ಟವನಿಗೆ ಮೂಲದ್ರವ್ಯದ ಬೆಲೆಗೆ ಐದನೆಯ ಒಂದು ಭಾಗವನ್ನು ಹೆಚ್ಚಾಗಿ ಸೇರಿಸಿ ಕೊಡಬೇಕು.

ಅವನು ಮನುಷ್ಯರ ಮುಂದೆ ನಿಂತು, ‘ನಾನು ಪಾಪ ಮಾಡಿ ನ್ಯಾಯವನ್ನು ಕೆಡಿಸಿದ್ದರೂ, ಆತನು ಮುಯ್ಯಿತೀರಿಸಲಿಲ್ಲ.

ದೋಷಗಳನ್ನು ಮುಚ್ಚಿಕೊಳ್ಳುವವನಿಗೆ ಶುಭವಾಗದು, ಅವುಗಳನ್ನು ಒಪ್ಪಿಕೊಂಡು ಬಿಟ್ಟುಬಿಡುವವನಿಗೆ ಕರುಣೆ ದೊರೆಯುವುದು.

ನನ್ನ ದೇವರಾದ ಯೆಹೋವನಿಗೆ ಹೀಗೆ ಪಾಪವನ್ನು ಅರಿಕೆ ಮಾಡಿ ಬಿನ್ನವಿಸಿದೆನು, “ಓ ಕರ್ತನೇ, ಮಹೋನ್ನತನೂ, ಭಯಂಕರನೂ ಆದ ದೇವರೇ, ನಿನ್ನನ್ನು ಪ್ರೀತಿಸಿ ನಿನ್ನ ಆಜ್ಞೆಗಳನ್ನು ಅನುಸರಿಸುವವರಿಗೆ ಮಾಡಿದ ಕೃಪಾ ವಾಗ್ದಾನಗಳನ್ನು ನೆರವೇರಿಸುವವನೇ,

¶ ಆ ಕಾಲದಲ್ಲಿ ಯೇಸು ಯೋಹಾನನಿಂದ ದೀಕ್ಷಾಸ್ನಾನ ಮಾಡಿಸಿಕೊಳ್ಳಬೇಕೆಂದು ಗಲಿಲಾಯದಿಂದ ಯೊರ್ದನ್ ಹೊಳೆಯ ಬಳಿ ಬಂದನು.

ನಾನು ನಿಮಗೆ ನೀರಿನಿಂದ ದೀಕ್ಷಾಸ್ನಾನ ಕೊಡುತ್ತಿದ್ದೇನೆ; ಆತನಾದರೋ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನ ಕೊಡುತ್ತಾನೆ” ಎಂದು ಸಾರಿ ಹೇಳಿದನು.

‹ನಾನು ಎದ್ದು ನನ್ನ ತಂದೆಯ ಬಳಿಗೆ ಹೋಗಿ ಅವನಿಗೆ, ಅಪ್ಪಾ, ಪರಲೋಕಕ್ಕೆ ವಿರೋಧವಾಗಿಯೂ ನಿನ್ನ ಮುಂದೆಯೂ ನಾನು ಪಾಪ ಮಾಡಿದ್ದೇನೆ.›

ನನಗೂ ಆತನ ಗುರುತಿರಲಿಲ್ಲ. ಆದರೆ ಆತನನ್ನು ಇಸ್ರಾಯೇಲ್ಯರಿಗೆ ಪ್ರಕಟಪಡಿಸುವುದಕ್ಕೊಸ್ಕರ ನಾನು ನೀರಿನಲ್ಲಿ ದೀಕ್ಷಾಸ್ನಾನವನ್ನು ಮಾಡಿಸುವವನಾಗಿ ಬಂದೆನು.”

‹ಏಕೆಂದರೆ, ಯೋಹಾನನಂತೂ ನೀರಿನಿಂದ ದೀಕ್ಷಾಸ್ನಾನ ಮಾಡಿಸುತ್ತಿದ್ದನು ಆದರೆ ಇನ್ನು ಕೆಲವೇ ದಿನಗಳಲ್ಲಿ ನಿಮಗೆ ಪವಿತ್ರಾತ್ಮನಿಂದ ದೀಕ್ಷಾಸ್ನಾನವಾಗುವುದು”› ಎಂದು ಅಪ್ಪಣೆ ಕೊಟ್ಟನು.

ಎಲ್ಲಾ ಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ಮೂಲಕ ದೇವರು ಸಮಾಧಾನದ ಶುಭಸಮಾಚಾರವನ್ನು ಪ್ರಕಟಿಸುತ್ತಾ ಇಸ್ರಾಯೇಲ್ ಜನರಿಗೆ ಅನುಗ್ರಹಿಸಿದ ವಾಕ್ಯವು ನಿಮಗೇ ತಿಳಿದಿದೆ.

ಅದಕ್ಕೆ ಪೌಲನು; “ಯೋಹಾನನು ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಂಡವರಿಗೆ ದೀಕ್ಷಾಸ್ನಾನ ಮಾಡಿಸಿ ತನ್ನ ಹಿಂದೆ ಬರುವ ಯೇಸುವಿನಲ್ಲಿ ನಂಬಿಕೆಯಿಡಬೇಕೆಂಬುದಾಗಿ ಜನರಿಗೆ ಹೇಳಿದನು” ಎಂದು ಹೇಳಲು,

ಈಗ ನೀನೇಕೆ ತಡಮಾಡುತ್ತೀ? ಎದ್ದು ಕರ್ತನ ಹೆಸರನ್ನು ಹೇಳಿಕೊಳ್ಳುವವನಾಗಿ, ದೀಕ್ಷಾಸ್ನಾನ ಮಾಡಿಸಿಕೊಂಡು ನಿನ್ನ ಪಾಪಗಳನ್ನು ತೊಳೆದುಕೋ’ ಅಂದನು.

ನೀವು ದೀಕ್ಷಾಸ್ನಾನದಲ್ಲಿ ಕ್ರಿಸ್ತನೊಂದಿಗೆ ಹೂಣಲ್ಪಟ್ಟಿದ್ದೀರಿ, ಮತ್ತು ಆತನನ್ನು ಸತ್ತವರೊಳಗಿಂದ ಎಬ್ಬಿಸಿದ ದೇವರ ಶಕ್ತಿಯಲ್ಲಿ ನಂಬಿಕೆಯಿಡುವುದರ ಮೂಲಕ ಆತನ ಜೊತೆಯಲ್ಲಿ ನೀವು ಎದ್ದು ಬಂದಿದ್ದೀರಿ.

ಹೀಗಿರಲು ನೀವು ಸ್ವಸ್ಥವಾಗಬೇಕಾದರೆ ನಿಮ್ಮ ಪಾಪಗಳನ್ನು ಒಬ್ಬರಿಗೊಬ್ಬರು ಅರಿಕೆ ಮಾಡಿ,, ಒಬ್ಬರಿಗೋಸ್ಕರ ಒಬ್ಬರು ಪ್ರಾರ್ಥಿಸಿರಿ. ನೀತಿವಂತನ ಅತ್ಯಾಸಕ್ತಿಯುಳ್ಳ ಪ್ರಾರ್ಥನೆಯು ಬಹು ಸಾಮರ್ಥ್ಯವುಳ್ಳದಾಗಿರುತ್ತದೆ.

ನಾವು ನಮ್ಮ ಪಾಪಗಳನ್ನು ಒಪ್ಪಿಕೊಂಡು ಅರಿಕೆಮಾಡಿದರೆ ಆತನು ನಂಬಿಗಸ್ತನೂ ನೀತಿವಂತನೂ ಆಗಿರುವುದರಿಂದ ನಮ್ಮ ಪಾಪಗಳನ್ನು ಕ್ಷಮಿಸಿ ಸಕಲ ಅನೀತಿಯಿಂದ ನಮ್ಮನ್ನು ಶುದ್ಧಿಮಾಡುವನು.