‹ನೀವು ಹೋಗಿ, ‘ನಾನು ಯಜ್ಞವನ್ನಲ್ಲ,›‹ಕರುಣೆಯನ್ನೇ ಅಪೇಕ್ಷಿಸುತ್ತೇನೆ’ ಎಂಬ ಮಾತಿನ ಅರ್ಥವನ್ನು ಕಲಿತುಕೊಳ್ಳಿರಿ. ನಾನು ನೀತಿವಂತರನ್ನು ಕರೆಯುವುದಕ್ಕೆ ಬಂದವನಲ್ಲ, ಆದರೆ ಪಾಪಿಗಳನ್ನು ಕರೆಯುವುದಕ್ಕೆ ಬಂದವನು” ಅಂದನು.›
TSK
TSK · ಮತ್ತಾಯನು 4:17
مراجع Treasury of Scripture Knowledge في ಕನ್ನಡ IRV.
‹ಸ್ನಾನಿಕ ಯೋಹಾನನ ಕಾಲದಿಂದ ಈ ವರೆಗೂ ಪರಲೋಕ ರಾಜ್ಯವು ಬಲವಂತಕ್ಕೆ ಗುರಿಯಾಗುತ್ತಿದೆ. ಬಲಾತ್ಕಾರಿಗಳು ಒತ್ತಾಯದಿಂದ ಅದನ್ನು ಸ್ವಾಧೀನಮಾಡಿಕೊಳ್ಳುತ್ತಿದ್ದಾರೆ.›
ಅದಕ್ಕಾತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, ‹“ಪರಲೋಕ ರಾಜ್ಯದ ಮರ್ಮಗಳನ್ನು ತಿಳಿಯುವ ಭಾಗ್ಯವು ನಿಮಗೆ ಕೊಟ್ಟಿದೆ ಅವರಿಗೆ ಕೊಟ್ಟಿಲ್ಲ.›
¶ ‹“ಪರಲೋಕ ರಾಜ್ಯವು ಸಮುದ್ರದಲ್ಲಿ ಎಲ್ಲಾ ತರವಾದ ಮೀನುಗಳನ್ನು ಹಿಡಿಯುವ ಒಂದು ಬಲೆಗೆ ಹೋಲಿಕೆಯಾಗಿದೆ.›
ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,
ದೇವರ ರಾಜ್ಯದ ವಿಷಯವನ್ನು ಸಾರುವುದಕ್ಕೂ ಅಸ್ವಸ್ಥರಾದವರನ್ನು ಸ್ವಸ್ಥಮಾಡುವುದಕ್ಕೂ ಅವರನ್ನು ಕಳುಹಿಸಿದನು.
‹ಅದರಂತೆ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಶ್ಯವಿಲ್ಲದ ತೊಂಬತ್ತೊಂಬತ್ತು ಮಂದಿ ನೀತಿವಂತರಿಗಿಂತ ಪಶ್ಚಾತ್ತಾಪಪಟ್ಟು ದೇವರ ಕಡೆಗೆ ತಿರುಗಿಕೊಳ್ಳುವ ಒಬ್ಬ ಪಾಪಿಯ ವಿಷಯವಾಗಿ ಪರಲೋಕದಲ್ಲಿ ಹೆಚ್ಚು ಸಂತೋಷವುಂಟಾಗುವುದೆಂದು ನಿಮಗೆ ಹೇಳುತ್ತೇನೆ.›
‹ಅದಲ್ಲದೆ ಜನರು ಪಾಪಕ್ಷಮಾಪಣೆಗೋಸ್ಕರ ಪಶ್ಚಾತ್ತಾಪಟ್ಟು, ದೇವರ ಕಡೆಗೆ ತಿರುಗಿಕೊಳ್ಳಬೇಕೆಂಬ ಈ ಸುವಾರ್ತೆಯು ಯೆರೂಸಲೇಮ್ ಮೊದಲುಗೊಂಡು ಸಮಸ್ತ ದೇಶದವರಿಗೂ ಆತನ ಹೆಸರಿನಲ್ಲಿ ಸಾರಲ್ಪಡಬೇಕು’ ಎಂದು ಬರೆದದೆ.›
ಆದುದರಿಂದ ನಿಮ್ಮ ಪಾಪಗಳನ್ನು ಅಳಿಸಿಬಿಡುವ ಹಾಗೆ ನೀವು ಪಶ್ಚಾತ್ತಾಪಪಟ್ಟು ಆತನ ಕಡೆಗೆ ತಿರುಗಿಕೊಳ್ಳಿರಿ. ಹಾಗೆ ತಿರುಗಿದರೆ ಕರ್ತನ, ಸನ್ನಿಧಾನದಿಂದ
ಆ ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.
ಆಮೇಲೆ ಯೆರೂಸಲೇಮಿನಲ್ಲಿಯೂ, ಯೂದಾಯದ ಎಲ್ಲಾ ಸೀಮೆಯಲ್ಲಿಯೂ ಇರುವವರಿಗೆ ಮತ್ತು ಅನ್ಯಜನರಿಗೆ ಸಹ; ನೀವು ದೇವರ ಕಡೆಗೆ ತಿರುಗಿಕೊಳ್ಳಬೇಕೆಂತಲೂ, ಮಾನಸಾಂತರಕ್ಕೆ ಯೋಗ್ಯವಾದ ಕೃತ್ಯಗಳನ್ನು ಮಾಡಬೇಕೆಂತಲೂ ಸಾರಿದೆನು.
¶ ಆದುದರಿಂದ ಕ್ರಿಸ್ತನ ವಿಷಯವಾದ ಪ್ರಾಥಮಿಕ ಉಪದೇಶವನ್ನು ಬಿಟ್ಟು, ನಿರ್ಜೀವ ಕ್ರಿಯೆಗಳಿಂದ ಮಾನಸಾಂತರವೂ, ದೇವರಲ್ಲಿ ನಂಬಿಕೆಯೂ, ದೀಕ್ಷಾಸ್ನಾನಗಳ ಬೋಧನೆಯೂ, ಹಸ್ತಾರ್ಪಣೆಯೂ, ಸತ್ತವರಿಗೆ ಪುನರುತ್ಥಾನವೂ ಮತ್ತು ನಿತ್ಯವಾದ ನ್ಯಾಯತೀರ್ಪೂ ಉಂಟೆಂಬುದರ ಕುರಿತು ಪದೇಪದೇ ಅಸ್ತಿವಾರವನ್ನೆ ಹಾಕುತಿರದೆ ನಾವು ಪರಿಪಕ್ವತೆಯೆಡೆಗೆ ಸಾಗೋಣ.