ಆತನು ನಿನ್ನ ಎಲ್ಲಾ ಅಪರಾಧಗಳನ್ನು ಕ್ಷಮಿಸುವವನೂ, ಸಮಸ್ತ ರೋಗಗಳನ್ನು ವಾಸಿಮಾಡುವವನೂ,
TSK
TSK · ಮತ್ತಾಯನು 4:23
مراجع Treasury of Scripture Knowledge في ಕನ್ನಡ IRV.
¶ ಸಂಜೆಯಾಗಲು ದೆವ್ವಹಿಡಿದ ಬಹಳ ಜನರನ್ನು ಆತನ ಬಳಿಗೆ ಕರೆತಂದರು; ಆತನು ಮಾತು ಮಾತ್ರದಿಂದಲೇ ದೆವ್ವಗಳನ್ನು ಬಿಡಿಸಿದ್ದಲ್ಲದೆ ಅಸ್ವಸ್ಥರಾದವರೆಲ್ಲರನ್ನು ವಾಸಿಮಾಡಿದನು.
‹‘ಪರಲೋಕ ರಾಜ್ಯವು ಸಮೀಪವಾಯಿತೆಂದು’ ಸಾರಿಹೇಳುತ್ತಾ ಹೋಗಿರಿ.›
¶ ಆತನು ಅಲ್ಲಿಂದ ಹೊರಟು ಅವರ ಸಭಾಮಂದಿರಕ್ಕೆ ಹೋದನು.
¶ ತರುವಾಯ ಆತನು ತನ್ನ ಸ್ವಂತ ಊರಿಗೆ ಬಂದು ಅವರ ಸಭಾಮಂದಿರದಲ್ಲಿ ಜನರಿಗೆ ಉಪದೇಶಮಾಡುತ್ತಿದ್ದನು. ಅವರು ಅದನ್ನು ಕೇಳಿ ಆಶ್ಚರ್ಯ ಪಟ್ಟು, “ಇವನಿಗೆ ಈ ಜ್ಞಾನವೂ ಈ ಮಹತ್ಕಾರ್ಯಗಳೂ ಎಲ್ಲಿಂದ ಬಂದಿದ್ದಾವು?
ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.
ಯೋಹಾನನು ಬಂಧಿತನಾದ ತರುವಾಯ ಯೇಸು ಗಲಿಲಾಯಕ್ಕೆ ಬಂದು ದೇವರ ಸುವಾರ್ತೆಯನ್ನು ಹೀಗೆ ಸಾರಿ ಹೇಳಿದನು,
¶ ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.
ಏಕೆಂದರೆ ಆತನು ಅನೇಕರನ್ನು ಸ್ವಸ್ಥಮಾಡಿದ್ದರಿಂದ ರೋಗಪೀಡಿತರಾಗಿದ್ದವರೆಲ್ಲರೂ ಯೇಸುವನ್ನು ಮುಟ್ಟಬೇಕೆಂದು ಮೇಲೆ ಬೀಳುತ್ತಿದ್ದರು.
ಅವರ ಅಪನಂಬಿಕೆಗೆ ಆತನು ಆಶ್ಚರ್ಯಪಟ್ಟನು. ಆ ನಂತರ ಯೇಸು ಸುತ್ತಮುತ್ತಲಿನ ಊರುಗಳಲ್ಲಿ ಬೋಧಿಸಿದನು.
¶ ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.
¶ ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.
ಹೀಗಿರಲು ಯೇಸು ಅವರಿಗೆ ಪ್ರತ್ಯುತ್ತರವಾಗಿ, ‹“ನೀವು ಹೋಗಿ ಕಂಡು ಕೇಳಿದವುಗಳನ್ನು ಯೋಹಾನನಿಗೆ ತಿಳಿಸಿರಿ; ಕುರುಡರು ನೋಡುತ್ತಾರೆ, ಕುಂಟರು ನಡೆಯುತ್ತಾರೆ, ಕುಷ್ಠರೋಗಿಗಳು ಶುದ್ಧರಾಗುತ್ತಾರೆ, ಕಿವುಡರು ಕೇಳುತ್ತಾರೆ, ಸತ್ತವರು ಜೀವದಿಂದ ಎಬ್ಬಿಸಲ್ಪಡುತ್ತಾರೆ, ಬಡವರಿಗೆ ಸುವಾರ್ತೆಯು ಸಾರಲ್ಪಡುತ್ತಿದೆ.›
ಜನರ ಗುಂಪು ಇದನ್ನು ತಿಳಿದು ಯೇಸುವಿನ ಹಿಂದೆ ಬರಲು ಆತನು ಅವರನ್ನು ಪ್ರೀತಿಯಿಂದ ಸೇರಿಸಿಕೊಂಡು ದೇವರ ರಾಜ್ಯದ ವಿಷಯವಾಗಿ ಅವರ ಸಂಗಡ ಮಾತನಾಡಿ, ಸ್ವಸ್ಥತೆ ಅಗತ್ಯವಿದ್ದವರನ್ನು ಗುಣಪಡಿಸಿದನು.
¶ ಒಂದು ಸಬ್ಬತ್ ದಿನದಲ್ಲಿ ಯೇಸು ಒಂದು ಸಭಾಮಂದಿರದೊಳಗೆ ಉಪದೇಶಮಾಡುತ್ತಾ ಇದ್ದನು.
ಈ ವಿಷಯಗಳನ್ನು ಕಪೆರ್ನೌಮಿನ ಸಭಾಮಂದಿರದಲ್ಲಿ ಉಪದೇಶ ಮಾಡುವಾಗ ಹೇಳಿದನು.
ಅದಕ್ಕೆ ಯೇಸು, ‹“ನಾನು ಬಹಿರಂಗವಾಗಿ ಲೋಕದ ಮುಂದೆ ಮಾತನಾಡಿದ್ದೇನೆ. ಯೆಹೂದ್ಯರೆಲ್ಲರು ಕೂಡಿ ಬರುವ ಸಭಾಮಂದಿರಗಳಲ್ಲಿಯೂ, ದೇವಾಲಯದಲ್ಲಿಯೂ ನಾನು ಯಾವಾಗಲೂ ಉಪದೇಶಿಸಿದ್ದೇನೆ, ಗುಪ್ತವಾಗಿ ಯಾವುದನ್ನೂ ನಾನು ಮಾತನಾಡಲಿಲ್ಲ.›
ಅದಕ್ಕೆ ಅನನೀಯನು, “ಕರ್ತನೇ, ಆ ಮನುಷ್ಯನು ಯೆರೂಸಲೇಮಿನಲ್ಲಿ ನಿನ್ನನ್ನು ನಂಬಿದ ದೇವಜನರಿಗೆ ಎಷ್ಟೋ ಕೇಡನ್ನುಂಟುಮಾಡಿದನೆಂದು ಅವನ ವಿಷಯವಾಗಿ ಅನೇಕರಿಂದ ಕೇಳಿದ್ದೇನೆ.
ಅವನು ಪ್ರತಿ ಸಬ್ಬತ್ ದಿನವೂ ಸಭಾಮಂದಿರದಲ್ಲಿ ಚರ್ಚಿಸಿ ಯೆಹೂದ್ಯರನ್ನೂ ಗ್ರೀಕರನ್ನೂ ಒಡಂಬಡಿಸುತ್ತಿದ್ದನು.
ಇದಕ್ಕೆ ಸರಿಯಾಗಿ “ಶುಭದ ಸುವಾರ್ತೆಯನ್ನು ಸಾರುವವರ ಪಾದಗಳು ಎಷ್ಟೋ ಮನೋಹರವಾಗಿವೆ” ಎಂದು ಬರೆದಿದೆ.