¶ ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಸೇರಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.
TSK
TSK · ಮತ್ತಾಯನು 5:19
مراجع Treasury of Scripture Knowledge في ಕನ್ನಡ IRV.
ಇಸ್ರಾಯೇಲಿನ ದೇವರಾದ ಯೆಹೋವನು ಹೇಳುವುದೇನೆಂದರೆ, ‘ನಿನ್ನ ಗೋತ್ರದವರೂ, ಸಂತಾನದವರೂ ನಿರಂತರವೂ ನನ್ನ ಸನ್ನಿಧಿಯಲ್ಲಿ ಸೇವೆಮಾಡಬೇಕೆಂದು ವಾಗ್ದಾನಮಾಡಿದ್ದೆನು. ಆದರೆ ಈಗ ನಾನು ತಿಳಿಸುವುದೇನಂದರೆ, ಅದು ನನಗೆ ದೂರವಾಗಿರಲಿ; ನನ್ನನ್ನು ಸನ್ಮಾನಿಸುವವರನ್ನು ನಾನು ಸನ್ಮಾನಿಸುವೆನು; ನನ್ನನ್ನು ತಿರಸ್ಕರಿಸುವವರನ್ನು ನಾನು ತಿರಸ್ಕರಿಸುವೆನು.
ನಿಜವಾಗಿ ನಿನ್ನ ಎಲ್ಲಾ ನಿಯಮಗಳು ನ್ಯಾಯವಾಗಿವೆ ಎಂದು ಒಪ್ಪಿಕೊಂಡಿದ್ದೇನೆ, ಎಲ್ಲಾ ಸುಳ್ಳು ಮಾರ್ಗಗಳನ್ನು ದ್ವೇಷಿಸುತ್ತೇನೆ.
¶ “ನಿಮ್ಮ ಧರ್ಮೋಪದೇಶದಿಂದ ಬಹು ಜನರನ್ನು ಮುಗ್ಗರಿಸುವ ಹಾಗೆ ಮಾಡಿದ್ದೀರಿ; ಲೇವಿಯ ಒಡಂಬಡಿಕೆಯನ್ನು ಭಂಗಪಡಿಸಿದ್ದೀರಿ” ಇದು ಸೇನಾಧೀಶ್ವರನಾದ ಯೆಹೋವನ ನುಡಿ.
ಅದಕ್ಕೆ ಆತನು ಅವರಿಗೆ ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, ‹“ನೀವು ಸಹ ನಿಮ್ಮ ಸಂಪ್ರದಾಯದ ನಿಮಿತ್ತವಾಗಿ ದೇವರ ಆಜ್ಞೆಯನ್ನು ಏಕೆ ಉಲ್ಲಂಘಿಸುತ್ತೀರಿ?›
‹ಆದರೆ ನಿಮ್ಮಲ್ಲಿ ಹಾಗಿರಬಾರದು. ನಿಮ್ಮಲ್ಲಿ ದೊಡ್ಡವನಾಗಿರಲು ಬಯಸುವವನು ನಿಮ್ಮ ಸೇವಕನಾಗಿರಲಿ.›
‹ನಾನು ನಿಮಗೆ ಆಜ್ಞಾಪಿಸಿದ ಎಲ್ಲವನ್ನು ಅನುಸರಿಸುವುದಕ್ಕೆ ಅವರಿಗೆ ಉಪದೇಶ ಮಾಡಿರಿ. ಹಾಗು›‹ಇಗೋ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿನವೂ ನಿಮ್ಮ ಸಂಗಡ ಇರುತ್ತೇನೆ”› ಎಂದು ಹೇಳಿದನು.
ಅವರಿಗೆ, ‹“ಯಾವನಾದರೂ ನನ್ನ ಹೆಸರಿನಲ್ಲಿ ಈ ಚಿಕ್ಕ ಮಗುವನ್ನು ಸೇರಿಸಿಕೊಂಡರೆ ನನ್ನನ್ನು ಸೇರಿಸಿಕೊಂಡ ಹಾಗಾಯಿತು ಮತ್ತು ಯಾವನಾದರೂ ನನ್ನನ್ನು ಸೇರಿಸಿಕೊಂಡರೆ ನನ್ನನ್ನು ಕಳುಹಿಸಿಕೊಟ್ಟಾತನನ್ನೇ ಸೇರಿಸಿಕೊಂಡ ಹಾಗಾಯಿತು, ಏಕೆಂದರೆ ನಿಮ್ಮೆಲ್ಲರಲ್ಲಿ ಯಾವನು ಚಿಕ್ಕವನೋ ಅವನೇ ದೊಡ್ಡವನು”› ಎಂದು ಹೇಳಿದನು.
¶ ಇದಲ್ಲದೆ ತಮ್ಮಲ್ಲಿ ದೊಡ್ಡವನು ಯಾರು ಎಂಬ ವಿಷಯದಲ್ಲಿ ಅವರೊಳಗೆ ಚರ್ಚೆ ಹುಟ್ಟಿತು.
“ಒಳ್ಳೆಯದಾಗುವಂತೆ, ಕೆಟ್ಟದ್ದನ್ನೇ ಏಕೆ ಮಾಡಬಾರದು?” ಈ ರೀತಿ ಸ್ವತಃ ನಾನೇ ಬೋಧಿಸುತ್ತಿರುವುದಾಗಿ ಕೆಲವರು ನನ್ನನ್ನು ದೂಷಿಸಿ ನನ್ನ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ. ಅಂಥವರಿಗೆ ತಕ್ಕ ಶಿಕ್ಷೆಯಾಗುವುದು ನ್ಯಾಯಸಮ್ಮತವಾದುದು.
ಹಾಗಾದರೇನು? ನಾವು ಧರ್ಮಶಾಸ್ತ್ರಾಧೀನರಲ್ಲ, ಕೃಪೆಗೆ ಅಧೀನರಾಗಿದ್ದೇವೆಂದು ಪಾಪವನ್ನು ಮಾಡಬಹುದೋ? ಎಂದಿಗೂ ಮಾಡಬಾರದು.
¶ ಮೋಶೆಯ ಧರ್ಮಶಾಸ್ತ್ರದ ನೇಮನಿಷ್ಠೆಗಳನ್ನು ಆಧಾರಮಾಡಿಕೊಂಡಿರುವವರೆಲ್ಲರೂ ಶಾಪಾಗ್ರಸ್ತರಾಗಿದಾರೆ. ಹೇಗೆಂದರೆ, “ಧರ್ಮಶಾಸ್ತ್ರದಲ್ಲಿ ಬರೆದಿರುವವುಗಳೆಲ್ಲವನ್ನೂ ಪ್ರತಿನಿತ್ಯವೂ ಪಾಲಿಸದಿರುವ ಪ್ರತಿಯೊಬ್ಬನು ಶಾಪಗ್ರಸ್ತನೇ” ಎಂದು ಧರ್ಮಶಾಸ್ತ್ರದಲ್ಲಿ ಬರೆದಿದೆ.
¶ ಸಹೋದರರೇ, ನೀವೆಲ್ಲರು ನನ್ನೊಂದಿಗೆ ಸೇರಿ ನನ್ನನ್ನು ಅನುಸರಿಸುವವರಾಗಿರಿ ಮತ್ತು ನಾವು ತೋರಿಸಿದ ಮಾದರಿಯ ಪ್ರಕಾರ ನಡೆದುಕೊಳ್ಳುವವರನ್ನು ಲಕ್ಷ್ಯಕ್ಕೆ ತಂದುಕೊಳ್ಳಿರಿ.
ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ನಿರ್ಮಲರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬುದಕ್ಕೆ ನೀವು ಮತ್ತು ದೇವರೂ ಸಾಕ್ಷಿಗಳಾಗಿದ್ದೀರಿ.
¶ ಈ ಸಂಗತಿಗಳನ್ನು ನೀನು ಆಜ್ಞಾಪಿಸಬೇಕು ಮತ್ತು ಬೋಧಿಸಬೇಕು.
¶ ಎಲೈ, ದೇವರ ಮನುಷ್ಯನೇ, ನೀನಾದರೋ ಇವುಗಳಿಗೆ ದೂರವಾಗಿರು. ನೀತಿ, ಭಕ್ತಿ, ನಂಬಿಕೆ, ಪ್ರೀತಿ, ಸ್ಥಿರಚಿತ್ತ ಹಾಗೂ ಸಾತ್ವಿಕತ್ವ ಇವುಗಳನ್ನು ಸಂಪಾದಿಸುವುದಕ್ಕೆ ಪ್ರಯಾಸಪಡು.
ಇದು ನಂಬತಕ್ಕ ಮಾತಾಗಿದೆ; ದೇವರಲ್ಲಿ ನಂಬಿಕೆ ಇಟ್ಟಿರುವವರು ಸತ್ಕ್ರಿಯೆಗಳನ್ನು ಮಾಡುವುದರಲ್ಲಿ ಜಾಗರೂಕರಾಗಿರುವಂತೆ ನೀನು ಈ ಎಲ್ಲಾ ಮಾತುಗಳನ್ನು ದೃಢವಾಗಿ ಹೇಳಬೇಕೆಂದು ಅಪೇಕ್ಷಿಸುತ್ತೇನೆ. ಅದು ಉತ್ತಮವೂ, ಮನುಷ್ಯರಿಗೆ ಪ್ರಯೋಜನಕಾರಿಯೂ ಆಗಿವೆ.
ಪ್ರಧಾನ ಕುರುಬನು ಪ್ರತ್ಯಕ್ಷನಾಗುವಾಗ ನೀವು ಎಂದಿಗೂ ಬಾಡದ ಮಹಿಮೆಯ ಕಿರೀಟವನ್ನು ಹೊಂದುವಿರಿ.
‹ನಿನ್ನ ವಿರುದ್ಧ ನನಗೆ ಅಪಾದನೆ ಒಂದಿದೆ.›‹ಯೆಜೆಬೇಲೆಂಬ ಆ ಹೆಂಗಸು ತನ್ನನ್ನು ಪ್ರವಾದಿನಿಯೆಂದು ಹೇಳಿಕೊಂಡು,›‹ಜಾರತ್ವಮಾಡಬಹುದೆಂದೂ›‹ವಿಗ್ರಹಗಳಿಗೆ ನೈವೇದ್ಯ ಮಾಡಿದ ಪದಾರ್ಥಗಳನ್ನು ತಿನ್ನಬಹುದೆಂದೂ ನನ್ನ ದಾಸರಿಗೆ ಬೋಧಿಸುತ್ತಾ ಅವರನ್ನು ತಪ್ಪಾದ ಮಾರ್ಗದಲ್ಲಿ ನಡೆಸುತ್ತಿದ್ದರೂ ನೀನು ಅವಳನ್ನು ತಡೆಯದೆ ಅನುಮತಿಯನ್ನು ಕೊಟ್ಟಿರುವಿ.›