¶ ಆಗ ಅವರು ತಮ್ಮ ತಮ್ಮೊಳಗೆ ಮಾತನಾಡಿಕೊಂಡು, “ನಾವು ನಮ್ಮ ತಮ್ಮನಿಗೆ ಮಾಡಿದ್ದು ಅಪರಾಧವೇ ಸರಿ. ಅವನು ನಮ್ಮನ್ನು ಬೇಡಿಕೊಂಡಾಗ ನಾವು ಅವನ ಪ್ರಾಣಸಂಕಟವನ್ನು ತಿಳಿದರೂ ಅವನ ಮೊರೆಗೆ ಕಿವಿಗೊಡಲಿಲ್ಲ. ಆ ಕಾರಣದಿಂದಲೇ ಈ ಸಂಕಟವು ನಮಗೆ ಪ್ರಾಪ್ತವಾಗಿದೆ” ಎಂದು ಮಾತನಾಡಿಕೊಂಡರು.
TSK
TSK · ಮತ್ತಾಯನು 5:23
مراجع Treasury of Scripture Knowledge في ಕನ್ನಡ IRV.
“ಯಾವನಾದರೂ ಪಾಪಮಾಡಿ, ಯೆಹೋವನಿಗೆ ವಿರುದ್ಧವಾಗಿ, ಮತ್ತೊಬ್ಬನಿಂದ ತನ್ನ ವಶಕ್ಕೆ ಕೊಡಲ್ಪಟ್ಟ ವಸ್ತುವಿನ ವಿಷಯದಲ್ಲಾಗಲಿ ಅಥವಾ ತನ್ನ ಬಳಿಯಲ್ಲಿ ಇಡಲ್ಪಟ್ಟ ಅಡವಿಟ್ಟ ವಸ್ತುಗಳ ವಿಷಯದಲ್ಲಾಗಲಿ ಸುಳ್ಳಾಡುವುದರಿಂದ, ಮತ್ತೊಬ್ಬನನ್ನು ಮೋಸಗೊಳಿಸಿದ್ದರಿಂದ,
¶ ಹುಳಿಯಿಲ್ಲದ ರೊಟ್ಟಿಗಳ ಹಬ್ಬದಲ್ಲಿಯೂ, ಪಂಚಾಶತ್ತಮ ದಿನದ ಹಬ್ಬದಲ್ಲಿಯೂ ಮತ್ತು ಪರ್ಣಶಾಲೆಗಳ ಹಬ್ಬದಲ್ಲಿಯೂ ಅಂತು ವರ್ಷಕ್ಕೆ ಮೂರಾವರ್ತಿ ನಿಮ್ಮಲ್ಲಿರುವ ಗಂಡಸರೆಲ್ಲರೂ ನಿಮ್ಮ ದೇವರಾದ ಯೆಹೋವನ ಸನ್ನಿಧಿಯಲ್ಲಿ ಆತನು ಆರಿಸಿಕೊಳ್ಳುವ ಸ್ಥಳದಲ್ಲಿ ಕಾಣಿಸಿಕೊಳ್ಳಬೇಕು. ಒಬ್ಬರೂ ಕೈಯಲ್ಲಿ ಕಾಣಿಕೆಯಿಲ್ಲದೆ ಆತನ ಸನ್ನಿಧಿಗೆ ಬರಬಾರದು.
ಇದಲ್ಲದೆ ಅರಸನು ಶಿಮ್ಮೀಗೆ ನೀನು ನನ್ನ ತಂದೆಯಾದ ದಾವೀದನಿಗೆ ವಿರುದ್ಧವಾಗಿ ಮಾಡಿದ ಪಾಪಕ್ಕೆ ನಿನ್ನ ಮನವೇ ಸಾಕ್ಷಿ. ಯೆಹೋವನು ಅದರ ಫಲವನ್ನು ನಿನ್ನ ತಲೆಯ ಮೇಲೆ ಬರಮಾಡುವನು.
ನನ್ನ ಆತ್ಮವು ಇವುಗಳನ್ನು ನಿತ್ಯವೂ ಜ್ಞಾಪಿಸಿಕೊಳ್ಳುತ್ತಾ ನನ್ನೊಳಗೆ ಕುಗ್ಗಿದೆ.
ನನಗೆ ಯಜ್ಞವು ಬೇಡ, ಕರುಣೆಯೇ ಬೇಕು; ಹೋಮಗಳಿಗಿಂತ ದೇವಜ್ಞಾನವೇ ಇಷ್ಟ.
‹ನಿನ್ನ ಕಾಣಿಕೆಯನ್ನು ಆ ಯಜ್ಞವೇದಿಯ ಮುಂದೆಯೇ ಬಿಟ್ಟು ಹೋಗಿ ಮೊದಲು ನಿನ್ನ ಸಹೋದರನ ಸಂಗಡ ಒಂದಾಗು; ಆ ಮೇಲೆ ಬಂದು ನಿನ್ನ ಕಾಣಿಕೆಯನ್ನು ಕೊಡು.›
‹ಕುರುಡರೇ, ಮೂರ್ಖರೇ, ಯಾವುದು ಹೆಚ್ಚಿನದು? ಕಾಣಿಕೆಯೋ, ಆ ಕಾಣಿಕೆಯನ್ನು ಪ್ರತಿಷ್ಠೆ ಮಾಡುವ ಯಜ್ಞವೇದಿಯೋ?›
ಆದರೆ ಜಕ್ಕಾಯನು ನಿಂತುಕೊಂಡು “ಕರ್ತನಿಗೆ, ಕರ್ತನೇ, ನೋಡು, ನನ್ನ ಆಸ್ತಿಯಲ್ಲಿ ಅರ್ಧವನ್ನು ಬಡವರಿಗೆ ಕೊಡುತ್ತೇನೆ ಮತ್ತು ನಾನು ಅನ್ಯಾಯವಾಗಿ ಯಾರಿಂದ ಏನಾದರೂ ಕಿತ್ತುಕೊಂಡಿದ್ದೇಯಾದರೆ ನಾಲ್ಕರಷ್ಟು ಹಿಂದಕ್ಕೆ ಕೊಡುತ್ತೇನೆ” ಎಂದು ಹೇಳಿದನು.