ವ್ಯಾಜ್ಯವಾಡಿದವನ ಸಂಗಡಲೇ ಅದನ್ನು ಚರ್ಚಿಸು, ಒಬ್ಬನ ಗುಟ್ಟನ್ನೂ ಬಯಲುಮಾಡಬೇಡ.
TSK
TSK · ಮತ್ತಾಯನು 5:24
مراجع Treasury of Scripture Knowledge في ಕನ್ನಡ IRV.
‹ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ನೀವು ಪುದೀನ, ಮರುಗಪತ್ರೆ, ಸಬಸಿಗೆಸೊಪ್ಪು, ಜೀರಿಗೆಗಳಲ್ಲಿ ದಶಮ ಭಾಗವನ್ನು ಕೊಡುತ್ತೀರಿ ಸರಿ, ಆದರೆ ಧರ್ಮಶಾಸ್ತ್ರದಲ್ಲಿ ಮುಖ್ಯವಾದುದನ್ನು ಅಂದರೆ ನ್ಯಾಯವನ್ನೂ, ಕರುಣೆಯನ್ನೂ ನಂಬಿಕೆಯನ್ನೂ ಬಿಟ್ಟುಬಿಟ್ಟಿದ್ದೀರಿ. ಇವುಗಳನ್ನು ಮಾಡಬೇಕು; ಅವುಗಳನ್ನೂ ಬಿಡಬಾರದು.›
¶ ಯಾರಿಗೂ ಅಪಕಾರಕ್ಕೆ ಅಪಕಾರವನ್ನು ಮಾಡಬೇಡಿರಿ. ಎಲ್ಲರ ದೃಷ್ಟಿಯಲ್ಲಿ ಯಾವುದು ಗೌರವವಾದದ್ದೋ ಯುಕ್ತವಾದದ್ದೋ ಅದನ್ನೇ ಯೋಚಿಸಿ ಒಳ್ಳೆಯದನ್ನು ಮಾಡಿರಿ.
ಪ್ರತಿ ಮನುಷ್ಯನು ತನ್ನನ್ನು ಪರೀಕ್ಷಿಸಿಕೊಂಡವನಾಗಿ ಆ ರೊಟ್ಟಿಯನ್ನು ತೆಗೆದುಕೊಂಡು ತಿನ್ನಲಿ, ಆ ಪಾನಪಾತ್ರೆಯಲ್ಲಿ ಕುಡಿಯಲಿ.
¶ ನಿಮ್ಮಲ್ಲಿ ಜ್ಞಾನಿಯೂ, ಬುದ್ಧಿವಂತನೂ ಯಾರು? ಅಂಥವನು ಒಳ್ಳೆಯ ನಡತೆಯಿಂದ, ಜ್ಞಾನದ ಲಕ್ಷಣವಾದ ವಿನಯಶೀಲತೆಯ ಕ್ರಿಯೆಗಳಿಂದ ಅದನ್ನು ತೋರಿಸಲಿ.
¶ ಅದೇ ರೀತಿಯಾಗಿ ಪತಿಯರೇ, ಸ್ತ್ರೀಯು ನಿಮ್ಮಗಿಂತ ಬಲಹೀನಳೆಂಬುದನ್ನು ತಿಳಿದುಕೊಂಡು, ನಿಮ್ಮ ಪತ್ನಿಯರ ಸಂಗಡ ವಿವೇಕದಿಂದ ನಡೆದುಕೊಳ್ಳಿರಿ, ಅವರು ನಿತ್ಯಜೀವ ವರಕ್ಕೆ ನಿಮ್ಮೊಂದಿಗೆ ಬಾಧ್ಯರಾಗಿದ್ದಾರೆಂದು ತಿಳಿದು ಅವರಿಗೆ ಗೌರವವನ್ನು ಸಲ್ಲಿಸಿರಿ. ಹೀಗೆ ಮಾಡಿದರೆ ನಿಮ್ಮ ಪ್ರಾರ್ಥನೆಗಳಿಗೆ ಅಡಚಣೆ ಉಂಟಾಗುವುದಿಲ್ಲ.