TSK

TSK · ಮತ್ತಾಯನು 5:4

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನೇ, ನೀನು ಇನ್ನೆಷ್ಟರವರೆಗೆ ನನ್ನನ್ನು ಸಂಪೂರ್ಣವಾಗಿ ಮರೆತಿರುವಿ? ಇನ್ನೆಲ್ಲಿಯ ತನಕ ನನಗೆ ವಿಮುಖನಾಗಿರುವಿ?

ನಾನು ನನ್ನ ಪಾಪವನ್ನು ಅರಿಕೆಮಾಡದೆ ಇದ್ದಾಗ, ದಿನವೆಲ್ಲಾ ನರಳುವುದರಿಂದ ನನ್ನ ಎಲುಬುಗಳು ಸವೆದುಹೋಗುತ್ತಿದ್ದವು.

ದೇವರೇ, ನೊಂದು ಕುಗ್ಗಿದವನಾದ ನನ್ನನ್ನಾದರೋ, ನಿನ್ನ ರಕ್ಷಣೆಯು ಭದ್ರಸ್ಥಳದಲ್ಲಿರಿಸುವುದು.

ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ.

ಯೆಹೋವನು ವಿಮೋಚಿಸಿದವರು ಹಿಂದಿರುಗಿ, ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಅವರು ಹರ್ಷಾನಂದಗಳನ್ನು ಅನುಭವಿಸುವರು, ದುಃಖವೂ, ನಿಟ್ಟುಸಿರೂ ಓಡಿಹೋಗುವವು.

ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು. ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.

ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,

ಅವರು ತಮ್ಮ ವಿಜ್ಞಾಪನೆಗಳಿಂದ ಅಳುತ್ತಾ ನಡೆದು ಬರುವರು, ನಾನು ಅವರನ್ನು ಸಂತೈಸಿ ಮುನ್ನಡೆಸುವೆನು. ಎಡವದ ಸಮಮಾರ್ಗದಲ್ಲಿ ನಡೆಸುತ್ತಾ ತುಂಬಿದ ತೊರೆಗಳ ಬಳಿಗೆ ಬರಮಾಡುವೆನು. ನಾನು ಇಸ್ರಾಯೇಲಿಗೆ ತಂದೆ, ಎಫ್ರಾಯೀಮು ನನ್ನ ಹಿರಿಯ ಮಗನಲ್ಲವೆ.

ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು, ತಮ್ಮ ಅಧರ್ಮದಲ್ಲಿಯೇ ಇದ್ದು, ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಗೋಳಾಡುತ್ತಿರುವರು.

¶ ದಾವೀದ ವಂಶದವರಲ್ಲಿಯೂ, ಯೆರೂಸಲೇಮಿನವರಲ್ಲಿಯೂ ದೇವರ ದಯೆಯನ್ನು ಹಂಬಲಿಸಿ ಬೇಡುವ ಭಾವವನ್ನು ಸುರಿಸುವೆನು; ತಾವು ಇರಿದವನನ್ನು ದಿಟ್ಟಿಸಿ ನೋಡುವರು; ಇದ್ದ ಒಬ್ಬ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಚೊಚ್ಚಲ ಮಗನ ವಿಯೋಗಕ್ಕೋಸ್ಕರ ದುಃಖಪಟ್ಟಂತೆ ಅವನಿಗಾಗಿ ದುಃಖಿಸುವರು.

‹ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ!› ‹ನೀವು ಹಸಿಯುವಿರಿ.› ‹ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ!› ‹ನೀವು ದುಃಖಪಟ್ಟು ಅಳುವಿರಿ.›

ಆದರೆ ಆತನು ಆ ಹೆಂಗಸಿಗೆ, ‹“ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು”› ಎಂದು ಹೇಳಿದನು.

‹ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ.›‹ನೀವು ಅಳುತ್ತಾ ಗೋಳಾಡುತ್ತಾ ಇರುವಿರಿ. ಆದರೆ ಲೋಕವು ಸಂತೋಷಿಸುವುದು. ನಿಮಗೆ ದುಃಖವಾಗುವುದು ಆದರೆ›‹ನಿಮ್ಮ ದುಃಖವು ಹೋಗಿ ಆನಂದ ಬರುವುದು.›

ನಿಮಗೆ ಯಾತನೆಯಾಯಿತೆಂದು ನಾನು ಈಗ ಸಂತೋಷಪಡದೆ ನೀವು ದುಃಖಪಟ್ಟು ಪಶ್ಚಾತ್ತಾಪಪಟ್ಟು ಮಾನಸಾಂತರ ಹೊಂದಿದ್ದಕ್ಕಾಗಿ ಸಂತೋಷಪಡುತ್ತೇನೆ. ನೀವು ದೇವರ ಚಿತ್ತಾನುಸಾರವಾಗಿ ದುಃಖಿಸಿದ್ದರಿಂದ ನಮ್ಮಿಂದಾಗಿ ಯಾವುದರಲ್ಲಿಯೂ ನಿಮಗೆ ನಷ್ಟವಾಗಲಿಲ್ಲವಲ್ಲಾ.

ಅವನು ನನಗೆ, “ಇವರು ಆ ಮಹಾಸಂಕಟದಿಂದ ಹೊರಬಂದವರು, ಯಜ್ಞದ ಕುರಿಮರಿಯಾದಾತನ ರಕ್ತದಲ್ಲಿ ತಮ್ಮ ನಿಲುವಂಗಿಗಳನ್ನು ತೊಳೆದು ಶುಭ್ರಮಾಡಿಕೊಂಡಿದ್ದಾರೆ.