“ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.
TSK
TSK · ಮತ್ತಾಯನು 5:6
مراجع Treasury of Scripture Knowledge في ಕನ್ನಡ IRV.
ದೇವರೇ, ಬಾಯಾರಿದ ಜಿಂಕೆಯು ನೀರಿನ ತೊರೆಗಳನ್ನು ಹೇಗೋ, ಹಾಗೆಯೇ ನನ್ನ ಮನಸ್ಸು ನಿನ್ನನ್ನು ಬಯಸುತ್ತದೆ.
ಮೃಷ್ಟಭೋಜನದಿಂದಲೋ ಎಂಬಂತೆ, ನನ್ನ ಮನಸ್ಸು ಸಂತುಷ್ಟವಾಗಿರುವುದು; ನನ್ನ ಬಾಯಿ ಉತ್ಸಾಹಧ್ವನಿ ಮಾಡುತ್ತಾ ನಿನ್ನನ್ನು ಕೊಂಡಾಡುವುದು.
ಯೆಹೋವನ ಆಲಯದ ಅಂಗಳಗಳಲ್ಲಿ ಸೇರಬೇಕೆಂದು, ನನ್ನ ಆತ್ಮವು ಹಂಬಲಿಸುತ್ತಾ ಕುಂದಿಹೋಗಿತ್ತು. ಆದರೆ ಈಗ ಚೈತನ್ಯಸ್ವರೂಪನಾದ ದೇವರಿಗೆ ನನ್ನ ತನುಮನಗಳಿಂದ ಹರ್ಷಧ್ವನಿಮಾಡುತ್ತೇನೆ.
ತನ್ನಲ್ಲಿ ಭಯಭಕ್ತಿಯುಳ್ಳವರ ಇಷ್ಟವನ್ನು ನೆರವೇರಿಸುತ್ತಾನೆ, ಅವರ ಕೂಗನ್ನು ಕೇಳಿ ರಕ್ಷಿಸುತ್ತಾನೆ.
ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು.
ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು.
“ಎಲೈ, ಬಾಯಾರಿದ ಸಕಲಜನರೇ, ನೀರಿನ ಬಳಿಗೆ ಬನ್ನಿರಿ, ಹಣವಿಲ್ಲದವನು ಸಹ ಬರಲಿ! ಬನ್ನಿರಿ, ಕೊಂಡುಕೊಳ್ಳಿರಿ, ಊಟ ಮಾಡಿರಿ! ಬಂದು ದ್ರಾಕ್ಷಾರಸವನ್ನೂ, ಹಾಲನ್ನೂ ಹಣಕೊಡದೆ, ಕ್ರಯವಿಲ್ಲದೆ ತೆಗೆದುಕೊಳ್ಳಿರಿ.
ಆಕೆಯ ನಿಮಿತ್ತ ದುಃಖಿಸುವವರೇ, ನೀವೆಲ್ಲರೂ, ಆಕೆಯ ಸಮಾಧಾನದ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು ಎಂದುಕೊಳ್ಳುವಿರಿ. ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ.
ಹಸಿದವರನ್ನು ಮೃಷ್ಟಾನ್ನದಿಂದ ತೃಪ್ತಿಪಡಿಸಿ, ಸಿರಿವಂತರನ್ನು ಬರಿಗೈಯಲ್ಲಿ ಕಳುಹಿಸಿಬಿಟ್ಟಿದ್ದಾನೆ.
‹ಈಗ ಹೊಟ್ಟೆತುಂಬಿದವರೇ, ನಿಮ್ಮ ಗತಿಯನ್ನು ಏನು ಹೇಳಲಿ!› ‹ನೀವು ಹಸಿಯುವಿರಿ.› ‹ಈಗ ನಗುವವರೇ, ನಿಮ್ಮ ಗತಿಯನ್ನು ಏನು ಹೇಳಲಿ!› ‹ನೀವು ದುಃಖಪಟ್ಟು ಅಳುವಿರಿ.›
‹ನಾಶವಾಗುವ ಆಹಾರಕ್ಕಾಗಿ ದುಡಿಯಬೇಡಿರಿ. ನಿತ್ಯಜೀವಕ್ಕಾಗಿ ಉಳಿಯುವ ಆಹಾರಕ್ಕಾಗಿ ದುಡಿಯಿರಿ, ಇಂಥಾ ಆಹಾರವನ್ನು ಮನುಷ್ಯಕುಮಾರನು ನಿಮಗೆ ಕೊಡುವನು. ಇದಕ್ಕಾಗಿ ತಂದೆಯಾದ ದೇವರು ಆತನ ಮೇಲೆ ಮುದ್ರೆ ಹಾಕಿ ನೇಮಿಸಿದ್ದಾನೆ”› ಎಂದನು.
¶ ಜಾತ್ರೆಯ ಮಹಾದಿನವಾದ ಕಡೆಯ ದಿನದಲ್ಲಿ ಯೇಸು ನಿಂತುಕೊಂಡು ‹“ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.›