ಅದನ್ನು ಇಟ್ಟುಕೊಂಡು ರಾತ್ರಿ ಮಲಗಬಾರದು; ಅವನು ಅದನ್ನು ಹೊದ್ದುಕೊಂಡೇ ಮಲಗಿಕೊಳ್ಳಬೇಕಲ್ಲಾ; ಅದಲ್ಲದೆ ಅವನು ನಿಮ್ಮನ್ನು ಹರಸುವನು, ಮತ್ತು ನೀವು ಮಾಡಿದ್ದು ಧರ್ಮಕಾರ್ಯವೆಂದು ನಿಮ್ಮ ದೇವರಾದ ಯೆಹೋವನು ತಿಳಿದುಕೊಳ್ಳುವನು.
TSK
TSK · ಮತ್ತಾಯನು 6:1
مراجع Treasury of Scripture Knowledge في ಕನ್ನಡ IRV.
ಆದರೆ ಯೇಹುವು ಇಸ್ರಾಯೇಲರ ದೇವರಾದ ಯೆಹೋವನ ಧರ್ಮನಿಯಮಗಳನ್ನು ಪೂರ್ಣಮನಸ್ಸಿನಿಂದ ಕೈಕೊಳ್ಳುವುದಕ್ಕೆ ಮನಸ್ಸುಮಾಡಲು ಪ್ರಯತ್ನಿಸಲಿಲ್ಲ. ಇಸ್ರಾಯೇಲರನ್ನು ಪಾಪಕ್ಕೆ ಪ್ರೇರೇಪಿಸಿದ ಯಾರೊಬ್ಬಾಮನ ಮಾರ್ಗವನ್ನು ಬಿಡಲೂ ಇಲ್ಲ.
ಶ್ರದ್ಧೆ ಇರುವ ನನ್ನ ಭಕ್ತರಂತೆ ಅವರು ನಿನ್ನ ಬಳಿಗೆ ಬಂದು, ನಿನ್ನ ಮುಂದೆ ಕುಳಿತುಕೊಂಡು ನಿನ್ನ ಮಾತುಗಳನ್ನು ಕೇಳುತ್ತಾರೆ, ಆದರೆ ಕೈಗೊಳ್ಳುವುದಿಲ್ಲ; ಬಾಯಿಂದ ಬಹುಪ್ರೀತಿಯನ್ನು ತೋರಿಸುತ್ತಾರೆ. ಅವರ ಮನಸ್ಸೋ ತಾವು ದೋಚಿಕೊಂಡದರ ಮೇಲೆ ಇರುತ್ತದೆ.
“ನೀನು ಯಾಜಕರಿಗೂ ದೇಶದ ಸಕಲ ಜನರಿಗೂ ಹೀಗೆ ನುಡಿ, ‘ನೀವು ಈ ಎಪ್ಪತ್ತು ವರ್ಷಗಳಿಂದಲೂ ಐದನೆಯ ಮತ್ತು ಏಳನೆಯ ತಿಂಗಳುಗಳಲ್ಲಿ ಉಪವಾಸಮಾಡಿ ಗೋಳಾಡುತ್ತಿದ್ದಾಗ, ಆ ನಿಮ್ಮ ಉಪವಾಸವು ನನಗಾಗಿಯೇ ಮಾಡಿದ್ದೋ?
‹ಅದರಂತೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ. ಆಗ ಅವರು ನಿಮ್ಮ ಒಳ್ಳೆಯ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಕೊಂಡಾಡುವರು.›
‹ಆದುದರಿಂದ ಪರಲೋಕದಲ್ಲಿರುವ ನಿಮ್ಮ ತಂದೆಯು ಪರಿಪೂರ್ಣನಾಗಿರುವ ಹಾಗೆಯೇ ನೀವೂ ಪರಿಪೂರ್ಣರಾಗಿರಿ.›
‹ಆದುದರಿಂದ ನೀವು ಹೀಗೆ ಪ್ರಾರ್ಥನೆಮಾಡಬೇಕು,›
‹ಪ್ರವಾದಿಯನ್ನು ಪ್ರವಾದಿಯೆಂದು ಸ್ವೀಕರಿಸಿಕೊಳ್ಳುವವನು ಪ್ರವಾದಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು; ನೀತಿವಂತನನ್ನು ನೀತಿವಂತನೆಂದು ಸ್ವೀಕರಿಸಿಕೊಳ್ಳುವವನು ನೀತಿವಂತನಿಗೆ ಬರತಕ್ಕ ಪ್ರತಿಫಲವನ್ನು ಹೊಂದುವನು.›
‹ಮನುಷ್ಯಕುಮಾರನು ತನ್ನ ತಂದೆಯ ಮಹಿಮೆಯೊಡನೆ ತನ್ನ ದೂತರ ಸಮೇತವಾಗಿ ಬರುವನು. ಆಗ ಆತನು ಒಬ್ಬೊಬ್ಬನಿಗೆ ಅವನು ಮಾಡಿದ ಕೆಲಸಕ್ಕೆ ತಕ್ಕಂತೆ ಪ್ರತಿಫಲವನ್ನು ಕೊಡುವನು.›
¶ ‹“ಅಯ್ಯೋ, ಕಪಟಿಗಳಾದ ಶಾಸ್ತ್ರಿಗಳೇ, ಫರಿಸಾಯರೇ, ಪರಲೋಕ ರಾಜ್ಯದ ಬಾಗಿಲನ್ನು ಮನುಷ್ಯರ ಎದುರಿಗೆ ಮುಚ್ಚಿಬಿಡುತ್ತೀರಿ. ನೀವಂತೂ ಒಳಕ್ಕೆ ಪ್ರವೇಶಿಸುವುದಿಲ್ಲ, ಒಳಕ್ಕೆ ಪ್ರವೇಶಿಸಬೇಕೆಂದಿರುವವರನ್ನೂ ಪ್ರವೇಶಿಸಗೊಡಿಸುವುದೂ ಇಲ್ಲ.›
‹ಅದಕ್ಕೆ ಉತ್ತರವಾಗಿ ಅರಸನು,›‹‘ಈ ನನ್ನ ಸಹೋದರರಲ್ಲಿ ಕೇವಲ ಅಲ್ಪನಾದವನೊಬ್ಬನಿಗೆ ಏನೇನು ಮಾಡಿದಿರೋ ಅದನ್ನು ನನಗೂ ಮಾಡಿದ ಹಾಗಾಯಿತು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ’ ಅನ್ನುವನು.›
‹ಆದುದರಿಂದ ನಿನ್ನೊಳಗಿರುವ ಬೆಳಕೇ ಕತ್ತಲಾಗಿದೆಯೋ ಏನೋ ನೋಡು.›
ಜನರಿಗೆ, ‹“ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ”› ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.
‹ಒಬ್ಬನೇ ದೇವರಿಂದ ಬರುವ ಮಹಿಮೆಯನ್ನು ಅಪೇಕ್ಷಿಸದೇ ನಿಮ್ಮ ನಿಮ್ಮೊಳಗೇ ಪ್ರಶಂಸೆಯನ್ನು ಸ್ವೀಕರಿಸುವವರಾದ ನೀವು ಅದನ್ನು ನಂಬಲು ಹೇಗೆ ಸಾಧ್ಯ?›
ನಾನು ಸ್ವಂತ ಇಷ್ಟದಿಂದ ಈ ಕೆಲಸವನ್ನು ಮಾಡಿದರೆ ನನಗೆ ಪ್ರತಿಫಲ ದೊರೆಯುವುದು; ಇಲ್ಲದಿದ್ದರೂ ಈ ಕರ್ತವ್ಯ ನನ್ನ ವಶಕ್ಕೆ ಒಪ್ಪಿಸಿಕೊಡಲ್ಪಟ್ಟಿದೆ.
ದೈಹಿಕವಾಗಿ ಪ್ರಶಂಸೆಯನ್ನು ಹೊಂದಬೇಕೆಂದಿರುವವರು ಸುನ್ನತಿ ಮಾಡಿಸಿಕೊಳ್ಳಿರಿ ಎಂಬುದಾಗಿ ನಿಮ್ಮನ್ನು ಒತ್ತಾಯಿಸುತ್ತಾರೆ. ಏಕೆಂದರೆ ಕ್ರಿಸ್ತನ ಶಿಲುಬೆಯ ದೆಸೆಯಿಂದ ತಮಗೆ ಹಿಂಸೆಯಾಗಬಾರದೆಂಬುದೇ ಅವರ ಉದ್ದೇಶ.
ನೀವು ದೇವಜನರಿಗೆ ಉಪಚಾರ ಮಾಡಿದ್ದೀರಿ, ಇನ್ನೂ ಮಾಡುತ್ತಾ ಇದ್ದಿರಿ. ಈ ಕೆಲಸವನ್ನು ಮತ್ತು ಇದರಲ್ಲಿ ನೀವು ಆತನ ನಾಮದ ಕಡೆಗೆ ತೋರಿಸಿದ ಪ್ರೀತಿಯನ್ನು ಆತನು ಮರೆಯುವುದಿಲ್ಲ, ಯಾಕೆಂದರೆ ದೇವರು ಅನೀತಿಯುಳ್ಳವನಲ್ಲ.
ನೀವು ಪ್ರಯಾಸಪಟ್ಟು ಮಾಡಿದವುಗಳನ್ನು, ಕಳೆದುಕೊಳ್ಳದೆ ಪೂರ್ಣ ಪ್ರತಿಫಲವನ್ನು ಹೊಂದುವಂತೆ ಜಾಗರೂಕರಾಗಿರಿ.