TSK

TSK · ಮತ್ತಾಯನು 6:19

مراجع Treasury of Scripture Knowledge في ಕನ್ನಡ IRV.

العودة إلى المقطع

ಒಂದು ವೇಳೆ ನಾನು ಬಂಗಾರದಲ್ಲಿ ಭರವಸವಿಟ್ಟು, ಅಪರಂಜಿಗೆ, ‘ನಿನ್ನನ್ನೇ ನಂಬಿದ್ದೇನೆ’ ಎಂದು ಹೇಳಿದ್ದರೆ,

ಅನ್ಯಾಯದಿಂದ ಸಂಪಾದಿಸಿದ್ದನ್ನು ನೆಚ್ಚಬೇಡಿರಿ; ಸುಲಿಗೆಯಿಂದ ಗಳಿಸಿ ಅಹಂಕಾರಪಡಬೇಡಿರಿ; ಹೆಚ್ಚಿದ ಆಸ್ತಿಯಲ್ಲಿ ಮನಸ್ಸಿಡಬೇಡಿರಿ.

ಬಂಗಾರಕ್ಕಿಂತಲೂ ಜ್ಞಾನವನ್ನು ಪಡೆಯುವುದು ಎಷ್ಟೋ ಮೇಲು, ಬೆಳ್ಳಿಗಿಂತಲೂ ವಿವೇಕವನ್ನು ಹೊಂದುವುದು ಲೇಸು.

ದೇವರು ತಾನು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳಿವಳಿಕೆಯನ್ನೂ, ಸಂತೋಷವನ್ನೂ ದಯಪಾಲಿಸುತ್ತಾನೆ. ಆದರೆ ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವುದಕ್ಕಾಗಿ ಕೂಡಿಸಿ ಒದಗಿಸುವಂತೆ ಪಾಪಿಗಾದರೋ ಪ್ರಯಾಸವನ್ನೇ ಕೊಡುತ್ತಾನೆ. ಇದು ಗಾಳಿಯನ್ನು ಹಿಂದಟ್ಟಿದ ಹಾಗೆ ವ್ಯರ್ಥವೇ.

ಯೆಹೋವನ ರೌದ್ರದ ದಿನದಲ್ಲಿ ಅವರ ಬೆಳ್ಳಿ, ಬಂಗಾರಗಳೂ ಕೂಡಾ ಅವರನ್ನು ರಕ್ಷಿಸಲಾರವು; ಆತನ ರೋಷಾಗ್ನಿಯು ದೇಶವನ್ನೆಲ್ಲಾ ನುಂಗಿಬಿಡುವುದು; ಆತನು ದೇಶನಿವಾಸಿಗಳೆಲ್ಲರನ್ನೂ ಕೊನೆಗಾಣಿಸುವನು, ಹೌದು, ಘೋರವಾಗಿ ನಿರ್ಮೂಲಮಾಡುವನು!

‹ತನಗೋಸ್ಕರ ಹಣವನ್ನು ಸಂಗ್ರಹಿಸಿಟ್ಟುಕೊಂಡು ದೇವರ ವಿಷಯಗಳಲ್ಲಿ ಐಶ್ವರ್ಯವಂತನಾಗದೆ ಇರುವವನು ಅವನಂತೆಯೇ ಇದ್ದಾನೆ”› ಅಂದನು.

¶ ಯೇಸು ಅದನ್ನು ಕೇಳಿ ಅವನಿಗೆ, ‹“ಇನ್ನೂ ನಿನಗೆ ಒಂದು ಕೊರತೆಯಿದೆ. ನಿನಗಿರುವುದನ್ನೆಲ್ಲಾ ಮಾರಿ ಬಡವರಿಗೆ ಹಂಚಿಕೊಡು, ಪರಲೋಕದಲ್ಲಿ ನಿನಗೆ ಸಂಪತ್ತುಂಟಾಗುವುದು. ತರುವಾಯ ನೀನು ಬಂದು ನನ್ನನ್ನು ಹಿಂಬಾಲಿಸು”› ಎಂದು ಹೇಳಿದನು.

ಹಣದಾಸೆಯಿಂದ ದೂರವಿರಿ. ನಿಮಗಿರುವವುಗಳಲ್ಲಿ ತೃಪ್ತರಾಗಿರಿ. “ನಾನು ನಿಮ್ಮನ್ನು ಎಂದಿಗೂ ಕೈಬಿಡುವುದಿಲ್ಲ, ಎಂದಿಗೂ ತೊರೆಯುವುದಿಲ್ಲ” ಎಂದು ದೇವರು ತಾನೇ ಹೇಳಿದ್ದಾನೆ.

¶ ಲೋಕವನ್ನಾಗಲಿ ಲೋಕದಲ್ಲಿರುವವುಗಳನ್ನಾಗಲಿ ಪ್ರೀತಿಸಬೇಡಿರಿ. ಯಾವನಾದರೂ ಲೋಕವನ್ನು ಪ್ರೀತಿಸಿದರೆ ತಂದೆಯ ಮೇಲಿನ ಪ್ರೀತಿಯು ಅವನಲ್ಲಿಲ್ಲ.