ದುಷ್ಟರು ಹುಲ್ಲಿನಂತೆ ಬೆಳೆಯುವುದೂ, ಕೆಡುಕರು ಹೂವಿನಂತೆ ಮೆರೆಯುವುದೂ ತೀರಾ ಹಾಳಾಗುವುದಕ್ಕಾಗಿಯೇ.
TSK
TSK · ಮತ್ತಾಯನು 6:30
مراجع Treasury of Scripture Knowledge في ಕನ್ನಡ IRV.
ಆತನು ಅವರಿಗೆ, ‹“ಅಲ್ಪ ವಿಶ್ವಾಸಿಗಳೇ, ಏಕೆ ಹೆದರುತ್ತೀರಿ?”› ಎಂದು ಹೇಳಿ, ಎದ್ದು ಗಾಳಿಯನ್ನೂ ಸಮುದ್ರವನ್ನೂ ಗದರಿಸಿದನು; ಆಗ ಅಲ್ಲಿ ಸಂಪೂರ್ಣವಾಗಿ ಶಾಂತವಾಯಿತು.
ಯೇಸು ಅದನ್ನು ತಿಳಿದು, ‹“ಅಲ್ಪ ವಿಶ್ವಾಸಿಗಳೇ, ರೊಟ್ಟಿ ಬುತ್ತಿಯನ್ನು ತಂದಿಲ್ಲವೆಂದು ನಿಮ್ಮಲ್ಲೇ ಏಕೆ ಚರ್ಚೆಮಾಡುತ್ತಿದ್ದೀರಿ?›
ತರುವಾಯ ಆತನು ಅವರನ್ನು, ‹“ಯಾಕೆ ಭಯಪಡುತ್ತೀರಿ? ಇನ್ನೂ ನಿಮಗೆ ನಂಬಿಕೆಯಿಲ್ಲವೇ?”› ಎಂದು ಕೇಳಲು
ಅದಕ್ಕೆ ಯೇಸು, ‹“ಎಲಾ ಅಪನಂಬಿಕೆಯುಳ್ಳಂಥ ಮೂರ್ಖಸಂತಾನವೇ, ನಾನು ಇನ್ನೆಷ್ಟು ದಿನ ನಿಮ್ಮ ಸಂಗಡ ಇದ್ದು ನಿಮ್ಮನ್ನು ಸಹಿಸಿಕೊಳ್ಳಲಿ?”› ಎಂದು ಹೇಳಿದನು. ಮತ್ತು ಆ ಮನುಷ್ಯನಿಗೆ ‹“ನಿನ್ನ ಮಗನನ್ನು ಇಲ್ಲಿಗೆ ಕರೆದುಕೊಂಡು ಬಾ”› ಅಂದನು.
ಆ ಮೇಲೆ ತೋಮನಿಗೆ, ‹“ನಿನ್ನ ಬೆರಳನ್ನು ಈ ಕಡೆ ಚಾಚಿ ನನ್ನ ಕೈಗಳನ್ನು ಮುಟ್ಟಿ ನೋಡು, ನಿನ್ನ ಕೈ ಚಾಚಿ ನನ್ನ ಪಕ್ಕೆಯಲ್ಲಿ ಹಾಕು. ಅಪನಂಬಿಕೆಯಳ್ಳವನಾಗಿರಬೇಡ, ನಂಬುವವನಾಗು”› ಎಂದು ಹೇಳಿದನು.
ಐಶ್ವರ್ಯವಂತನಾದ ಸಹೋದರನು ತಾನು ದೀನಸ್ಥಿತಿಗೆ ಬಂದೆನೆಂದು ಉಲ್ಲಾಸಪಡಲಿ; ಏಕೆಂದರೆ ಐಶ್ವರ್ಯವಂತನು ಹುಲ್ಲಿನ ಹೂವಿನಂತೆ ಗತಿಸಿ ಹೋಗುವನು.