ನಾನು ಹಿಡಿದಿರುವ ದಾರಿಯು ನೀತಿಯೇ, ನ್ಯಾಯಮಾರ್ಗಗಳಲ್ಲಿ ನಡೆಯುತ್ತೇನೆ.
TSK
TSK · ಮತ್ತಾಯನು 7:14
مراجع Treasury of Scripture Knowledge في ಕನ್ನಡ IRV.
ಅಲ್ಲಿ ರಾಜಮಾರ್ಗವಿರುವುದು. ಅದು ಪರಿಶುದ್ಧ ಮಾರ್ಗ ಎನಿಸಿಕೊಳ್ಳುವುದು. ಯಾವ ಅಶುದ್ಧನೂ ಅದರ ಮೇಲೆ ಹಾದುಹೋಗನು. ಆದರೆ ಅದು ದೇವಜನರಿಗಾಗಿಯೇ ಇರುವುದು. ಅಲ್ಲಿ ಹೋಗುವ ಮೂಢನೂ ದಾರಿತಪ್ಪನು.
ಯೆಹೋವನು, “ದಾರಿಗಳು ಕೂಡುವ ಸ್ಥಳದಲ್ಲಿ ನಿಂತುಕೊಂಡು ನೋಡಿ ಪುರಾತನ ಮಾರ್ಗಗಳು ಯಾವುವು. ಆ ಸನ್ಮಾರ್ಗವು ಎಲ್ಲಿ? ಎಂದು ವಿಚಾರಿಸಿ ಅದರಲ್ಲೇ ನಡೆಯಿರಿ; ಇದರಿಂದ ನಿಮ್ಮ ಆತ್ಮಗಳಿಗೆ ವಿಶ್ರಾಂತಿ ಸಿಕ್ಕುವುದು ಎಂದು ಅಪ್ಪಣೆಕೊಟ್ಟಾಗ ಅವರು ‘ಅದರಲ್ಲಿ ನಾವು ನಡೆಯುವುದೇ ಇಲ್ಲ’ ಎಂದರು.
‹ಹೀಗೆ›‹ಕಡೆಯವರು ಮೊದಲಿನವರಾಗುವರು ಮೊದಲಿನವರು ಕಡೆಯವರಾಗುವರು”› ಎಂದು ಹೇಳಿದನು.
¶ ‹“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು›‹ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.›
‹ಚಿಕ್ಕ ಹಿಂಡೇ, ಹೆದರಬೇಡ; ಆ ರಾಜ್ಯವನ್ನು ನಿಮಗೆ ದಯಪಾಲಿಸುವುದಕ್ಕೆ ನಿಮ್ಮ ತಂದೆಯು ಸಂತೋಷವುಳ್ಳವನಾಗಿದ್ದಾನೆ.›
¶ ‹“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.›
‹ನೀವು ನನ್ನಲ್ಲಿದ್ದು ಸಮಾಧಾನವನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮ್ಮೊಂದಿಗೆ ಹೇಳಿದ್ದೇನೆ.›‹ಲೋಕದಲ್ಲಿ ನಿಮಗೆ ಸಂಕಟಗಳುಂಟು. ಆದರೆ ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ”› ಎಂದು ಹೇಳಿದನು.
¶ ಇದಲ್ಲದೆ ಯೆಶಾಯನು ಇಸ್ರಾಯೇಲ್ ಜನರ ವಿಷಯದಲ್ಲಿ ಹೀಗೆಂದು ಘೋಷಿಸಿದ್ದಾನೆ: “ಇಸ್ರಾಯೇಲರ ಸಂಖ್ಯೆಯು ಸಮುದ್ರದ ಉಸುಬಿನಂತಿದ್ದರೂ ಅವರಲ್ಲಿ ಕೆಲವರು ಮಾತ್ರ ರಕ್ಷಿಸಲ್ಪಡುವರು” “ಕರ್ತನು ಭೂಮಿಯಲ್ಲಿ ತನ್ನ ವಚನವನ್ನು ಕ್ಷಣದಲ್ಲಿ ನೆರವೆರಿಸಿಮುಗಿಸುವನು” ಎಂದು ಕೂಗಿ ಹೇಳುತ್ತಾನೆ.
ಅದರಂತೆ ಈಗಿನ ಕಾಲದಲ್ಲಿಯೂ ದೇವರ ಕೃಪೆಯಿಂದ ಆರಿಸಿಕೊಂಡವರಾದ ಒಂದು ಭಾಗವು ಉಳಿದಿದ್ದಾರೆ.
ಪೂರ್ವದಲ್ಲಿ ನೀವು ಇಹಲೋಕದ ಪದ್ಧತಿಗೆ ಅನುಸಾರವಾಗಿಯೂ, ವಾಯುಮಂಡಲದಲ್ಲಿ ಅಧಿಕಾರ ನಡಿಸುವ ಅಧಿಪತಿಗೆ ಅಂದರೆ ಅವಿಧೇಯತೆಯ ಮಕ್ಕಳಲ್ಲಿ ಈಗ ಕೆಲಸ ನಡೆಸುವ ಆತ್ಮನಿಗನುಸಾರವಾಗಿ ಜೀವನ ನಡಿಸಿದ್ದೀರಿ.
ಅಂದರೆ ಪೂರ್ವಕಾಲದಲ್ಲಿ ನೋಹನು ನಾವೆಯನ್ನು ಕಟ್ಟುತ್ತಿರಲು ದೇವರು ದೀರ್ಘಶಾಂತಿಯಿಂದ ಕಾದಿದ್ದಾಗ ಅವರು ಆತನಿಗೆ ಅವಿಧೇಯರಾಗಿದ್ದರು. ಆ ನಾವೆಯೊಳಗೆ ಸೇರಿದ ಎಂಟು ಜನರು ಮಾತ್ರ ನೀರಿನೊಳಗಿನಿಂದ ರಕ್ಷಿಸಲ್ಪಟ್ಟರು.