ಹಿರಿಯನು ಮತ್ತು ಘನವುಳ್ಳವನು ತಲೆಯಾಗಿರುವನು. ಸುಳ್ಳು ಬೋಧನೆ ಮಾಡುವ ಪ್ರವಾದಿಯು ಬಾಲವಾಗಿರುವನು.
TSK
TSK · ಮತ್ತಾಯನು 7:15
مراجع Treasury of Scripture Knowledge في ಕನ್ನಡ IRV.
ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.
ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.
ನಾನು ಆ ನೆಹೆಲಾಮ್ಯನಾದ ಶೆಮಾಯನನ್ನೂ ಮತ್ತು ಅವನ ಸಂತತಿಯವರನ್ನೂ ದಂಡಿಸುವೆನು; ಅವನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಈ ಜನರ ಮಧ್ಯದಲ್ಲಿ ವಾಸಿಸಲು ಅವನಿಗೆ ಯಾವ ಸಂತಾನವೂ ಇರದು; ನಾನು ನನ್ನ ಜನರಿಗೆ ಉಂಟುಮಾಡಬೇಕೆಂದಿರುವ ಮೇಲನ್ನು ಅವನು ನೋಡದೆ ಹೋಗುವನು; ಇದು ಯೆಹೋವನ ನುಡಿ” ಎಂಬುದೇ.
ನಾನು ಎದೆಗುಂದಿಸದ ಶಿಷ್ಟನ ಮನಸ್ಸನ್ನು ನೀವು ಸುಳ್ಳಾಡಿ ಕುಂದಿಸಿದ್ದೀರಿ, ದುಷ್ಟನು ತನ್ನ ದುರ್ಮಾರ್ಗವನ್ನು ಬಿಟ್ಟು ತನ್ನ ಪ್ರಾಣವನ್ನು ಉಳಿಸಿಕೊಳ್ಳದಂತೆ ನೀವು ಅವನ ಕೈಗಳನ್ನು ಬಲಪಡಿಸಿದ್ದೀರಿ.
ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.
ಮುಖಂಡರು ಲಂಚಕ್ಕೆ ನ್ಯಾಯತೀರಿಸುತ್ತಾರೆ. ಯಾಜಕರು ಸಂಬಳಕ್ಕಾಗಿ ಉಪದೇಶಿಸುತ್ತಾರೆ. ಪ್ರವಾದಿಗಳು ಹಣಕ್ಕೋಸ್ಕರ ಕಣಿಹೇಳುತ್ತಾರೆ. ಆದರೂ ಯೆಹೋವನ ಮೇಲೆ ಭಾರ ಹಾಕಿ, “ಯೆಹೋವನು ನಮ್ಮ ಮಧ್ಯದಲ್ಲಿ ಇದ್ದಾನಲ್ಲಾ, ನಮಗೆ ಯಾವ ಕೇಡೂ ಸಂಭವಿಸದು” ಅಂದುಕೊಳ್ಳುತ್ತಾರೆ.
¶ “ಆ ದಿನದಲ್ಲಿ ಯಾವ ಪ್ರವಾದಿಯೇ ಆಗಲಿ ಪ್ರವಾದನೆ ಮಾಡಬೇಕೆಂದಿರುವಾಗ ತನಗಾದ ದರ್ಶನವನ್ನು ಪ್ರಕಟಿಸಲು ನಾಚಿಕೆಪಡುವನು; ಯಾವನೂ ಮೋಸಕ್ಕಾಗಿ ಕಂಬಳಿಯನ್ನು ಹೊದ್ದುಕೊಳ್ಳನು;
ಯೇಸು ಅವರಿಗೆ ‹“ಎಚ್ಚರಿಕೆ! ಫರಿಸಾಯರ ಮತ್ತು ಸದ್ದುಕಾಯರ›‹ಹುಳಿಹಿಟ್ಟಿನ ವಿಷಯದಲ್ಲಿ ಜಾಗರೂಕರಾಗಿರಿ”› ಎಂದು ಹೇಳಿದನು.
ಯೇಸು ಅವರಿಗೆ ಉತ್ತರವಾಗಿ ಹೇಳಿದ್ದೇನೆಂದರೆ, ‹“ಯಾರೊಬ್ಬರೂ ನಿಮ್ಮನ್ನು ಮೋಸಗೊಳಿಸದಂತೆ ಎಚ್ಚರಿಕೆಯಿಂದಿರಿ.›
‹ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಸಹ ಮೋಸಗೊಳಿಸುವುದಕ್ಕೋಸ್ಕರ ಮಹಾ ಸೂಚಕ ಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.›
‹ಏಕೆಂದರೆ ಸುಳ್ಳು ಕ್ರಿಸ್ತರೂ, ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರು ಆರಿಸಿಕೊಂಡವರನ್ನು ಮೋಸಗೊಳಿಸುವುದಕ್ಕೋಸ್ಕರ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.›
ಜನರಿಗೆ, ‹“ಎಲ್ಲಾ ದುರಾಶೆಗಳಿಂದಲು ಎಚ್ಚರಿಕೆಯಾಗಿದ್ದು ನಿಮ್ಮನ್ನು ಕಾಪಾಡಿಕೊಳ್ಳಿರಿ. ಒಬ್ಬನಿಗೆ ಎಷ್ಟು ಆಸ್ತಿಯಿದ್ದರೂ ಅದು ಅವನಿಗೆ ಜೀವಾಧಾರವಾಗುವುದಿಲ್ಲ”› ಎಂದು ಹೇಳಿ, ಒಂದು ಸಾಮ್ಯವನ್ನು ಹೇಳಿದನು.
ಅವರು ದ್ವೀಪದಲ್ಲೆಲ್ಲಾ ಸಂಚಾರಮಾಡಿ ಪಾಫೋಸ್ ಎಂಬ ಊರಿನ ತನಕ ಬಂದು ಅಲ್ಲಿ ಸುಳ್ಳುಪ್ರವಾದಿಯೂ, ಮಂತ್ರವಾದಿಯೂ ಆಗಿದ್ದ ‘ಬಾರ್ಯೇಸು’ ಎಂಬ ಒಬ್ಬ ಯೆಹೂದ್ಯ ಮನುಷ್ಯನನ್ನು ಕಂಡರು.
ನಾನು ಹೋದ ಮೇಲೆ ಕ್ರೂರವಾದ ತೋಳಗಳು ನಿಮ್ಮೊಳಗೆ ಬರುವುದೆಂದು ನಾನು ಬಲ್ಲೆನು; ಅವು ಹಿಂಡನ್ನು ಕನಿಕರಿಸುವುದಿಲ್ಲ.
ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.
ಆದ್ದರಿಂದ ನಾವು ಇನ್ನು ಮೇಲೆ ಕೂಸುಗಳಾಗಿರದೇ, ದುರ್ಜನರ ವಂಚನೆಗಳಿಗೂ, ಕುಯುಕ್ತಿಗೂ ಒಳಬಿದ್ದು, ನಾನಾ ಉಪದೇಶಗಳಿಂದ ಕಂಗೆಟ್ಟು ಗಾಳಿಯಿಂದ ಅತ್ತಿತ್ತ ಓಲಾಡುವವರ ಹಾಗಿರದೇ,
ಆ ನಾಯಿಗಳಿಗೆ ಎಚ್ಚರವಾಗಿರಿ, ದುಷ್ಕರ್ಮಿಗಳಿಗೆ ಎಚ್ಚರಿಕೆಯಾಗಿರಿ. ಸುನ್ನತಿಯೆಂದು ಹೇಳಿಕೊಂಡು ಅಂಗಚ್ಛೇದನ ಮಾಡುವವರಿಂದ ಎಚ್ಚರಿಕೆಯಾಗಿರಿ.
¶ ಆದರೂ ಮುಂಬರುವ ದಿನಗಳಲ್ಲಿ ಕೆಲವರು ವಂಚಿಸುವ ಆತ್ಮಗಳ ನುಡಿಗಳಿಗೂ, ದೆವ್ವಗಳ ಬೋಧನೆಗಳಿಗೂ ಲಕ್ಷ್ಯಕೊಟ್ಟು ಕ್ರಿಸ್ತ ನಂಬಿಕೆಯಿಂದ ಭ್ರಷ್ಟರಾಗುವರೆಂದು ದೇವರಾತ್ಮನು ಸ್ಪಷ್ಟವಾಗಿ ಹೇಳುತ್ತಿದ್ದಾನೆ.
ಆದರೆ ದುಷ್ಟರೂ, ವಂಚಕರೂ ಇತರರನ್ನು ಮೋಸಮಾಡುತ್ತಾ ತಾವೇ ಮೋಸಹೋಗುತ್ತಾ ಹೆಚ್ಚಾದ ಕೆಟ್ಟತನಕ್ಕೆ ಹೋಗುವರು.
¶ ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.
ಆದಕಾರಣ ಪ್ರಿಯರೇ, ನೀವು ಈ ಸಂಗತಿಗಳನ್ನು ಮುಂಚಿತವಾಗಿ ತಿಳಿದುಕೊಂಡಿರುವುದರಿಂದ ದುಷ್ಟರ ವಂಚನೆಯಲ್ಲಿ ಸಿಕ್ಕಿ ನಿಮ್ಮ ಸ್ಥಿರವಾದ ನಂಬಿಕೆಯನ್ನು ಬಿಟ್ಟು ಭ್ರಷ್ಟರಾಗದಂತೆಯೂ ಎಚ್ಚರಿಕೆಯಾಗಿರಿ.
ಏಕೆಂದರೆ ಭಕ್ತಿಹೀನರೂ, ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ಕಾಮಾಭಿಲಾಷೆಯ ಕೃತ್ಯಗಳನ್ನು ನಡಿಸುವವರೂ, ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅಲ್ಲಗಳೆಯುವ ಕೆಲವು ಜನರು ರಹಸ್ಯವಾಗಿ ಸಭೆಯ ಒಳಗೆ ಹೊಕ್ಕಿದ್ದಾರೆ. ಇವರು ದಂಡನೆಗಾಗಿ ಪೂರ್ವದಲ್ಲಿಯೇ ನೇಮಕವಾಗಿದ್ದಾರೆ ಎಂದು ಬರೆದದೆ.
ಆಗ ಘಟಸರ್ಪದ ಬಾಯಿಂದ, ಮೃಗದ ಬಾಯಿಂದ ಮತ್ತು ಸುಳ್ಳುಪ್ರವಾದಿಯ ಬಾಯಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವುದನ್ನು ಕಂಡೆನು.
ಆಗ ಆ ಮೃಗವನ್ನು ಸೆರೆಹಿಡಿಯಲಾಯಿತು. ಇದಲ್ಲದೆ ಮೃಗದ ಪರವಾಗಿ ಮಹತ್ಕಾರ್ಯಗಳನ್ನು ಮಾಡಿ, ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ಆರಾಧಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರೊಂದಿಗೆ ಸೆರೆಸಿಕ್ಕಿದನು. ಇವರಿಬ್ಬರನ್ನೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಗೆ ಹಾಕಲಾಯಿತು.