ಯೆಹೋವನ ಆಲಯದಲ್ಲಿ ಸಸಿಗಳಂತೆ ನೆಡಲ್ಪಟ್ಟವರು, ನಮ್ಮ ದೇವರ ಅಂಗಳದಲ್ಲಿ ಚೆನ್ನಾಗಿ ಬೆಳೆಯುವರು.
TSK
TSK · ಮತ್ತಾಯನು 7:17
مراجع Treasury of Scripture Knowledge في ಕನ್ನಡ IRV.
ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ, ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.”
¶ ಆ ಮೇಲೆ ಯೇಸು ಒಂದು ಸಾಮ್ಯವನ್ನು ಹೇಳಿದನು. ಅದೇನೆಂದರೆ, ‹“ಒಬ್ಬನು ತನ್ನ ದ್ರಾಕ್ಷಿಯ ತೋಟದಲ್ಲಿ ಒಂದು ಅಂಜೂರದ ಗಿಡವನ್ನು ನೆಡಿಸಿದನು. ಸ್ವಲ್ಪಕಾಲದ ನಂತರ ಅವನು ಆ ಮರದಲ್ಲಿ ಹಣ್ಣನ್ನು ಹುಡುಕುತ್ತಾ ಬಂದನು. ಸಿಕ್ಕಲಿಲ್ಲ.›
ಬೆಳಕಿನ ಫಲವು ಉಪಕಾರದಲ್ಲಿಯೂ ನೀತಿಯಲ್ಲಿಯೂ ಸತ್ಯದಲ್ಲಿಯೂ ಕಾಣಿಸಿಕೊಳ್ಳುತ್ತದೆ.
ಕರ್ತನಿಗೆ ಮೆಚ್ಚಿಕೆಯಾಗುವ ರೀತಿಯಲ್ಲಿ ನೀವು ಯೋಗ್ಯರಾಗಿ ಜೀವಿಸಬೇಕೆಂತಲೂ, ಸಕಲ ಸತ್ಕಾರ್ಯಗಳಲ್ಲಿ ಫಲವನ್ನು ಕೊಡುತ್ತಾ ದೈವಜ್ಞಾನದಲ್ಲಿ ವೃದ್ಧಿಯಾಗಬೇಕೆಂತಲೂ,
ಇವರು ಸಮುದ್ರದೊಳಗಿರುವ ಗುಪ್ತವಾದ ಬಂಡೆಗಳಂತಿದ್ದು, ನಿಮ್ಮ ಸ್ನೇಹಭೋಜನಗಳಲ್ಲಿ ಸೇರಿ ತಿಂದು ಕುಡಿಯುತ್ತಾರೆ. ನಿರ್ಭಯವಾಗಿ ಸ್ವಂತ ಹೊಟ್ಟೆಯನ್ನೇ ಪೋಷಿಸಿಕೊಳ್ಳುತ್ತಾರೆ. ಇವರು ಗಾಳಿಯಿಂದ ಬಡಿಸಿಕೊಂಡು ಹೋಗುವ ನೀರಿಲ್ಲದ ಮೋಡಗಳೂ, ಫಲಗಳನ್ನು ಬಿಡದ, ಸಂಪೂರ್ಣವಾಗಿ ಸತ್ತ, ಬೇರು ಸಹಿತ ಕಿತ್ತು ಬಿದ್ದ ಶರತ್ಕಾಲದ ಮರಗಳು.