TSK

TSK · ಮತ್ತಾಯನು 7:22

مراجع Treasury of Scripture Knowledge في ಕನ್ನಡ IRV.

العودة إلى المقطع

ಖಡ್ಗದಿಂದ ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ಮಿದ್ಯಾನ್ಯರ ಐದು ಮಂದಿ ರಾಜರು ಇದ್ದರು. ಅದಲ್ಲದೆ ಬೆಯೋರನ ಮಗನಾದ ಬಿಳಾಮನನ್ನು ಕೊಂದುಬಿಟ್ಟರು.

ಮನುಷ್ಯನ ಗರ್ವದೃಷ್ಟಿಯು ತಗ್ಗಿಹೋಗುವುದು, ಮನುಷ್ಯರ ಅಹಂಕಾರವು ತಗ್ಗುವುದು. ಯೆಹೋವನೊಬ್ಬನೇ ಆ ದಿನದಲ್ಲಿ ಉನ್ನತೋನ್ನತನಾಗಿರುವನು.

ನಾನು ಸಮಾರ್ಯದ ಪ್ರವಾದಿಗಳಲ್ಲಿ ಅನೈತಿಕತೆಯನ್ನು ನೋಡಿದ್ದೇನೆ; ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ, ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದ್ದಾರೆ.

¶ ‹“ನನ್ನನ್ನು ಕರ್ತನೇ, ಕರ್ತನೇ ಅನ್ನುವವರೆಲ್ಲರು ಪರಲೋಕ ರಾಜ್ಯವನ್ನು ಪ್ರವೇಶಿಸುವುದಿಲ್ಲ; ಪರಲೋಕದಲ್ಲಿರುವ ನನ್ನ ತಂದೆಯ ಚಿತ್ತದಂತೆ ನಡೆಯುವವನು ಮಾತ್ರ ಪರಲೋಕ ರಾಜ್ಯಕ್ಕೆ ಪ್ರವೇಶಿಸುವನು.›

‹ನ್ಯಾಯವಿಚಾರಣೆಯ ದಿನದಲ್ಲಿ ಅಂಥ ಊರಿನ ಗತಿಯು ಸೊದೋಮ್ ಗೊಮೋರಗಳ ಸೀಮೆಯ ಗತಿಗಿಂತಲೂ ಕಠಿಣವಾಗಿರುವುದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ.›

‹ಅನಂತರ ಉಳಿದ ಕನ್ನಿಕೆಯರು ಸಹ ಬಂದು, ‘ಕರ್ತನೇ, ಕರ್ತನೇ, ನಮಗೆ ಬಾಗಿಲು ತೆರೆಯಿರಿ’ ಅಂದರು.›

‹ಮನೆ ಯಜಮಾನನು ಎದ್ದು ಬಾಗಿಲು ಮುಚ್ಚಿದ ಮೇಲೆ ನೀವು ಹೊರಗೆ ನಿಂತುಕೊಂಡು ಬಾಗಿಲು ತಟ್ಟಿ, ‘ಕರ್ತನೇ ನಮಗೆ ಬಾಗಿಲು ತೆರೆಯಿರಿ’ ಎಂದು ಬಾಗಿಲು ಬಡಿಯುವುದಕ್ಕೆ ತೊಡಗುವಾಗ ಅವನು, ‘ನೀವು ಎಲ್ಲಿಯವರೋ? ನಿಮ್ಮ ಗುರುತು ನನಗಿಲ್ಲ’ ಅಂದಾನು›

ದುರಾತ್ಮಗಳನ್ನೂ ಬಿಡಿಸುವವರೆನಿಸಿಕೊಂಡು, ದೇಶಸಂಚಾರಿಗಳಾದ ಯೆಹೂದ್ಯರಿದ್ದರು. ಅವರಲ್ಲಿ ಕೆಲವರು ದುರಾತ್ಮ ಪೀಡಿತರ ಮೇಲೆ; “ಪೌಲನು ಸಾರುವ ಯೇಸುವಿನ ಆಣೆ” ಎಂದು ಹೇಳಿ ಕರ್ತನಾದ ಯೇಸುವಿನ ಹೆಸರನ್ನು ಪ್ರಯೋಗಮಾಡುವುದಕ್ಕೆ ತೊಡಗಿದರು.

ಆದರೆ ಸಹೋದರರೇ, ಆ ದಿನವು ಕಳ್ಳನಂತೆ ನಿಮ್ಮ ಮೇಲೆ ಬರತಕ್ಕದ್ದಲ್ಲ, ಯಾಕೆಂದರೆ ನೀವು ಕತ್ತಲೆಯಲ್ಲಿರುವವರಲ್ಲ.

ಅದರ ನಿಮಿತ್ತದಿಂದಲೇ ಈ ಕಷ್ಟಗಳನ್ನು ಅನುಭವಿಸುತ್ತಾ ಇದ್ದೇನೆ. ಆದರೂ ನಾನು ನಾಚಿಕೆಪಡುವುದಿಲ್ಲ. ನಾನು ನಂಬಿರುವಾತನನ್ನು ಬಲ್ಲೆನು. ಆತನು ನನಗೆ ಒಪ್ಪಿಸಿಕೊಟ್ಟಿರುವುದನ್ನು ಆತನು ಆ ದಿನದವರೆಗೆ ಕಾಪಾಡುವುದಕ್ಕೆ ಶಕ್ತನಾಗಿದ್ದಾನೆಂದು ದೃಢವಾಗಿ ನಂಬಿದ್ದೇನೆ.

ನೀತಿವಂತರಿಗೆ ದೊರಕುವ ಜಯಮಾಲೆಯು ಮುಂದೆ ನನಗಾಗಿ ಸಿದ್ಧವಾಗಿದೆ, ಅದನ್ನು ನೀತಿವಂತನಾದ ನ್ಯಾಯಾಧಿಪತಿಯಾಗಿರುವ ಕರ್ತನು ಆ ದಿನದಲ್ಲಿ ನನಗೆ ಕೊಡುವನು, ನನಗೆ ಮಾತ್ರವಲ್ಲದೆ ತನ್ನ ಪ್ರತ್ಯಕ್ಷತೆಯನ್ನು ಪ್ರೀತಿಸುವವರೆಲ್ಲರಿಗೂ ಕೊಡುವನು.