¶ ಬಳಿಕ ಯೇಸು ಗಲಿಲಾಯದಲ್ಲೆಲ್ಲಾ ಸಂಚರಿಸಿ ಅಲ್ಲಿಯವರ ಸಭಾಮಂದಿರಗಳಲ್ಲಿ ಉಪದೇಶ ಮಾಡುತ್ತಾ, ದೇವರ ರಾಜ್ಯದ ಸುವಾರ್ತೆಯನ್ನು ಸಾರಿ ಹೇಳುತ್ತಾ ಜನರ ಎಲ್ಲಾ ತರದ ರೋಗಗಳನ್ನೂ ಎಲ್ಲಾ ತರದ ಬೇನೆಗಳನ್ನೂ ವಾಸಿಮಾಡುತ್ತಾ ಬಂದನು.
TSK
TSK · ಮತ್ತಾಯನು 8:16
مراجع Treasury of Scripture Knowledge في ಕನ್ನಡ IRV.
¶ ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, ‹“ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ”› ಎಂದು ಹೇಳಿದನು.
ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
¶ ಸಂಜೆಯಾಗಿ ಹೊತ್ತು ಮುಳುಗಿದ ಮೇಲೆ ಜನರು ಅಸ್ವಸ್ಥರಾದವರನ್ನೂ, ದೆವ್ವಹಿಡಿದವರನ್ನೂ ಆತನ ಬಳಿಗೆ ಕರತಂದರು.
ಏಕೆಂದರೆ ಯೇಸು, ‹“ಅಶುದ್ಧಾತ್ಮವೇ ಇವನನ್ನು ಬಿಟ್ಟುಹೋಗು”› ಎಂದು ಆಜ್ಞಾಪಿಸಿದ್ದನು.
¶ ಸಂಜೆಯಾದಂತೆ ಜನರು ವಿವಿಧ ರೋಗಗಳಿಂದ ಅಸ್ವಸ್ಥವಾದವರನ್ನೆಲ್ಲಾ ಆತನ ಹತ್ತಿರಕ್ಕೆ ಕರತರಲು; ಆತನು ಪ್ರತಿಯೊಬ್ಬರ ಮೇಲೆಯೂ ಕೈಯಿಟ್ಟು ಅವರನ್ನು ವಾಸಿಮಾಡಿದನು.
ಹೀಗಿರುವುದರಿಂದ ಜನರು ರೋಗಿಗಳನ್ನು ದೋಲಿಗಳ ಮೇಲೆಯೂ, ಹಾಸಿಗೆಗಳ ಮೇಲೆಯೂ ಇಟ್ಟು ಪೇತ್ರನು ಹಾದು ಹೋಗುವಾಗ, ಅವನ ನೆರಳಾದರೂ ಕೆಲವರ ಮೇಲಾದರೂ ಬೀಳಲಿ ಎಂದು ಅವರನ್ನು ಬೀದಿಗೆ ತೆಗೆದುಕೊಂಡು ಬರುತ್ತಿದ್ದರು.