¶ ನಾಮಾನನು ಇದನ್ನು ಕೇಳಿ ಕೋಪಗೊಂಡು, “ಇದೇನು? ಅವನು ಹೊರಗೆ ಬಂದು ತನ್ನ ದೇವರಾದ ಯೆಹೋವನ ಹೆಸರನ್ನು ಹೇಳಿ ನನ್ನ ಕುಷ್ಠದ ಮೇಲೆ ಕೈಯಾಡಿಸಿ ವಾಸಿಮಾಡುವನೆಂದು ನೆನಸಿದೆನು.
TSK
TSK · ಮತ್ತಾಯನು 9:18
مراجع Treasury of Scripture Knowledge في ಕನ್ನಡ IRV.
ಆ ಶತಾಧಿಪತಿಯು, “ಕರ್ತನೇ, ನೀನು ನನ್ನ ಮನೆಗೆ ಬರುವಷ್ಟು ಯೋಗ್ಯತೆ ನನ್ನಲ್ಲಿಲ್ಲ; ನೀನು ಒಂದು ಮಾತು ಹೇಳಿದರೆ ಸಾಕು, ನನ್ನ ಆಳಿಗೆ ಗುಣವಾಗುವುದು.
ಆಗ ದೋಣಿಯಲ್ಲಿದ್ದ ಶಿಷ್ಯರು “ನಿಜವಾಗಿ ನೀನು ದೇವಕುಮಾರನು” ಎಂದು ಹೇಳಿ ಆತನನ್ನು ಆರಾಧಿಸಿದರು.
¶ ಅವರು ಜನರ ಗುಂಪಿನ ಬಳಿಗೆ ಬಂದಾಗ ಒಬ್ಬನು ಆತನ ಹತ್ತಿರಕ್ಕೆ ಬಂದು ಆತನ ಮುಂದೆ ಮೊಣಕಾಲೂರಿ,
ಅವರು ಅಲ್ಲಿ ಯೇಸುವನ್ನು ಕಂಡು ಆತನನ್ನು ಆರಾಧಿಸಿದರು; ಆದರೆ ಕೆಲವರು ಸಂದೇಹಪಟ್ಟರು.
ಅಲ್ಲಿ ದಂಡಿನ ಶತಾಧಿಪತಿಗೆ ಇಷ್ಟನಾದ ಒಬ್ಬ ಆಳು ಕ್ಷೇಮವಿಲ್ಲದೆ ಸಾಯುವ ಹಾಗಿದ್ದನು.
ಆದರೆ ಆ ಸಭಾಮಂದಿರದ ಅಧಿಕಾರಿಯು ನಡೆದ ಸಂಗತಿಯನ್ನು ನೋಡಿ, ಸಬ್ಬತ್ ದಿನದಲ್ಲಿ ಯೇಸು ಸ್ವಸ್ಥ ಮಾಡಿದನಲ್ಲಾ ಎಂದು ಸಿಟ್ಟುಗೊಂಡು ಜನರಿಗೆ, “ಕೆಲಸ ಮಾಡುವುದಕ್ಕೆ ಆರು ದಿನಗಳು ಅವೆಯಷ್ಟೆ. ಆ ದಿನಗಳಲ್ಲಿ ಬಂದು ವಾಸಿಮಾಡಿಸಿಕೊಳ್ಳಿರಿ, ಸಬ್ಬತ್ ದಿನದಲ್ಲಿ ಮಾತ್ರ ಬೇಡ” ಎಂದು ಹೇಳಿದನು.
¶ ಒಬ್ಬ ಅಧಿಕಾರಿಯು ಬಂದು, “ಒಳ್ಳೆಯ ಬೋಧಕನೇ, ನಾನು ನಿತ್ಯಜೀವಕ್ಕೆ ಬಾಧ್ಯನಾಗುವಂತೆ ಏನು ಮಾಡಬೇಕು?” ಎಂದು ಆತನನ್ನು ಕೇಳಲಾಗಿ,
ಆಗ ಮಾರ್ಥಳು ಯೇಸುವಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ತಮ್ಮನು ಸಾಯುತ್ತಿರಲಿಲ್ಲ.
ಮರಿಯಳು ಯೇಸು ಇದ್ದಲ್ಲಿಗೆ ಬಂದು ಆತನನ್ನು ಕಂಡು ಆತನ ಪಾದಗಳಿಗೆ ಅಡ್ಡಬಿದ್ದು ಆತನಿಗೆ, “ಕರ್ತನೇ, ನೀನು ಇಲ್ಲಿ ಇದ್ದಿದ್ದರೆ ನನ್ನ ಸಹೋದರನು ಸಾಯುತ್ತಿರಲಿಲ್ಲ” ಎಂದಳು.
ಧರ್ಮಶಾಸ್ತ್ರ ಮತ್ತು ಪ್ರವಾದಿಗಳ ಗ್ರಂಥ ಇವುಗಳ ಪಾರಾಯಣವಾದ ಮೇಲೆ ಸಭಾಮಂದಿರದ ನಾಯಕರು; “ಸಹೋದರರೇ, ಜನರಿಗೆ ಹೇಳತಕ್ಕ ಬುದ್ಧಿಮಾತೇನಾದರೂ ನಿಮಗಿದ್ದರೆ ಹೇಳಿರಿ” ಎಂದು ಅವರಿಗೆ ಹೇಳಿ ಕಳುಹಿಸಿದರು.