TSK

TSK · ಮಿಕ 2:11

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.

ಯೆಹೋವನು ತನ್ನ ಹತ್ತಿರ ನಿಂತವರನ್ನು, ‘ಇಸ್ರಾಯೇಲರ ಅರಸನಾದ ಅಹಾಬನು ಹತನಾಗಿ ಬೀಳುವಂತೆ ಅವನನ್ನು ರಾಮೋತ್ ಗಿಲ್ಯಾದಿನ ಯುದ್ಧಕ್ಕೆ ಹೋಗಲು ಯಾರು ಪ್ರೇರೇಪಿಸ ಬಲ್ಲಿರಿ?’ ಎಂದು ಕೇಳಿದಾಗ, ಒಬ್ಬನು ಒಂದು ವಿಧವಾಗಿಯೂ ಇನ್ನೊಬ್ಬನು ಇನ್ನೊಂದು ವಿಧವಾಗಿಯೂ ಉತ್ತರಕೊಟ್ಟರು.

ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.

ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರೂ ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲುಗೊಂಡು ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.

ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.

ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ. ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ.

ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ.

“ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ಬಾಬೆಲಿನ ಅರಸರು ನಿಮಗೆ ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.

ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ತನ್ನ ಹೆಸರೆತ್ತಿ ಸುಳ್ಳನ್ನು ಸಾರುವ ಕೊಲಾಯನ ಮಗನಾದ ಅಹಾಬ, ಮಾಸೇಯನ ಮಗನಾದ ಚಿದ್ಕೀಯ ಇವರ ವಿಷಯವಾಗಿ ಇಂತೆನ್ನುತ್ತಾನೆ, “ಇಗೋ, ನಾನು ಇವರನ್ನು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಕೈಗೆ ಕೊಡುವೆನು; ಅವನು ನಿಮ್ಮ ಕಣ್ಣೆದುರಿಗೆ ಇವರನ್ನು ಕೊಲ್ಲಿಸುವನು.

ಕರ್ತನಾದ ಯೆಹೋವನು ಇಂತೆನ್ನುತ್ತಾನೆ, ಯಾವ ಸಾಕ್ಷಾತ್ಕಾರವೂ ಇಲ್ಲದೆ ಸ್ವಬುದ್ಧಿಯನ್ನೇ ಅನುಸರಿಸುವ ಮೂರ್ಖ ಪ್ರವಾದಿಗಳ ಗತಿಯನ್ನು ಏನೆಂದು ಹೇಳಲಿ!

ನನ್ನ ಜನರನ್ನು ಸನ್ಮಾರ್ಗದಿಂದ ತಪ್ಪಿಸುವವರೂ, ತಿನ್ನುವುದಕ್ಕೆ ಕೊಡುವಂಥವರಿಗೆ, “ಸಮಾಧಾನವಿರುವುದು” ಎಂದು ಪ್ರಕಟಿಸುವರು ಮತ್ತು ತಮ್ಮ ಬಾಯಿಗೆ ರುಚಿಯಾದ ತಿಂಡಿಯನ್ನು ಕೊಡದವನ ಮೇಲೆ ಯುದ್ಧವನ್ನು ನಿರ್ಧರಿಸುವ ಪ್ರವಾದಿಗಳ ವಿಷಯವಾಗಿ ಯೆಹೋವನು ಇಂತೆನ್ನುತ್ತಾನೆ,

ಅಂಥವರು ನಮ್ಮ ಕರ್ತನಾದ ಕ್ರಿಸ್ತನ ಸೇವೆಯನ್ನು ಮಾಡದೆ ತಮ್ಮ ಹೊಟ್ಟೆಯ ಸೇವೆಯನ್ನೇ ಮಾಡುವವರಾಗಿ ನಯದ ನುಡಿಗಳಿಂದಲೂ ಮತ್ತು ಹೊಗಳಿಕೆಯ ಮಾತುಗಳಿಂದಲೂ ನಿಷ್ಕಪಟಿಗಳ ಹೃದಯಗಳನ್ನು ಮೋಸಗೊಳಿಸುತ್ತಾರೆ.

ನಾಶನವೇ ಅವರ ಅಂತ್ಯಾವಸ್ಥೆ, ಹೊಟ್ಟೆಯೇ ಅವರ ದೇವರು, ನಾಚಿಕೆಪಡಿಸುವ ಕೆಲಸಗಳಲ್ಲಿಯೇ ಅವರಿಗೆ ಘನತೆ, ಅವರು ಪ್ರಪಂಚದ ಕಾರ್ಯಗಳ ಕುರಿತು ಚಿಂತಿಸುವವರು.

¶ ಆದರೆ ಇಸ್ರಾಯೇಲ್ ಜನರೊಂದಿಗೆ ಸುಳ್ಳುಪ್ರವಾದಿಗಳೂ ಸಹ ಇದ್ದರು. ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳುಬೋಧಕರು ಇರುವರು. ಅವರು ಹಾನಿಕರವಾದ ದುರ್ಬೋಧನೆಗಳನ್ನು ರಹಸ್ಯವಾಗಿ ಒಳಗೆತರುವವರೂ ತಮ್ಮನ್ನು ಕೊಂಡುಕೊಂಡ ಒಡೆಯನನ್ನೂ ಕೂಡ ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ ಮೇಲೆ ನಾಶನವನ್ನು ಬರಮಾಡಿಕೊಳ್ಳುವರು.

¶ ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.