ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ.
TSK
TSK · ಮಿಕ 2:6
مراجع Treasury of Scripture Knowledge في ಕನ್ನಡ IRV.
ಸಮಾಧಾನವಿಲ್ಲದ್ದಿದ್ದರೂ, ‘ಸಮಾಧಾನ’ ಎಂದು ಹೇಳಿ ನನ್ನ ಪ್ರಜೆಯೆಂಬಾಕೆಯ ಗಾಯವನ್ನು ಮೇಲೆ ಮೇಲೆ ವಾಸಿಮಾಡಿದ್ದಾರೆ.
¶ ಅದೇ ಸಮಯದಲ್ಲಿ ಶಮಾಯನ ಮಗನೂ ಕಿರ್ಯತ್ ಯಾರೀಮ್ ಊರಿನವನೂ ಆದ ಊರೀಯನೆಂಬ ಒಬ್ಬ ಮನುಷ್ಯನು ಯೆಹೋವನ ಹೆಸರಿನಲ್ಲಿ ಪ್ರವಾದಿಸುವವನಾಗಿದ್ದು ಯೆರೆಮೀಯನು ನುಡಿದಂತೆಯೇ ಈ ಪಟ್ಟಣಕ್ಕೂ ಈ ದೇಶಕ್ಕೂ ಅಹಿತವನ್ನು ನುಡಿಯುತ್ತಿದ್ದನು.
“ನರಪುತ್ರನೇ, ನೀನು ದಕ್ಷಿಣಾಭಿಮುಖನಾಗಿ ಆ ಕಡೆಗೆ ಮಾತನಾಡುತ್ತಾ ದಕ್ಷಿಣ ಸೀಮೆಯ ವನದ ಪ್ರಸ್ತಾಪವನ್ನೆತ್ತಿ,
“ಆದರೆ ನೀವೋ ಪ್ರತಿಷ್ಠಿತರಿಗೆ ದ್ರಾಕ್ಷಾರಸವನ್ನು ಕುಡಿಯಲು ಕೊಟ್ಟಿರಿ ಮತ್ತು ಪ್ರವಾದಿಗಳಿಗೆ ಪ್ರವಾದಿಸಬೇಡಿರೆಂದು ಆಜ್ಞಾಪಿಸಿದ್ದಿರಿ.
ಇಗೋ, ಆ ದಿನಗಳು ಬರುವವು.” ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನಾನು ದೇಶಕ್ಕೆ ಕ್ಷಾಮವನ್ನು ಉಂಟುಮಾಡುವ ದಿನಗಳು ಬರುತ್ತವೆ, ಅದು ಅನ್ನದ ಕ್ಷಾಮವಲ್ಲ, ನೀರಿನ ಕ್ಷಾಮವಲ್ಲ, ಯೆಹೋವನ ವಾಕ್ಯಗಳ ಕ್ಷಾಮವೇ.
ಆದರೆ ಇದು ಜನರಲ್ಲಿ ಇನ್ನೂ ಹರಡದಂತೆ ಮುಂದೆ ಆ ಯೇಸುವಿನ ಹೆಸರನ್ನು ಎತ್ತಿ ಇನ್ನು ಮೇಲೆ ಯಾರ ಸಂಗಡಲೂ ಮಾತನಾಡಬಾರದೆಂದು ಅವರನ್ನು ಬೆದರಿಸೋಣ ಎಂಬುದಾಗಿ ಅವರು ಪರಸ್ಪರ ಆಲೋಚನೆ ಮಾಡಿಕೊಂಡರು.”
¶ ಅವರು ಅವನ ಮಾತಿಗೆ ಒಪ್ಪಿ ಅಪೊಸ್ತಲರನ್ನು ಕರೆಯಿಸಿ, ಹೊಡಿಸಿ ಯೇಸುವಿನ ಹೆಸರನ್ನು ಹೇಳಿ ಮಾತನಾಡಲೇಬಾರದೆಂದು ಅಪ್ಪಣೆಕೊಟ್ಟು ಅವರನ್ನು ಬಿಟ್ಟುಬಿಟ್ಟರು.
ಆ ಯೆಹೂದ್ಯರು ಕರ್ತನಾದ ಯೇಸುವನ್ನು ಮತ್ತು ಪ್ರವಾದಿಗಳನ್ನೂ ಕೊಂದರು ಹಾಗು ನಮ್ಮನ್ನೂ ಅಟ್ಟಿಬಿಟ್ಟರು. ಅವರು ದೇವರನ್ನು ಮೆಚ್ಚಿಸುವವರಲ್ಲ ಮತ್ತು ಎಲ್ಲಾ ಮನುಷ್ಯರಿಗೂ ವಿರೋಧಿಗಳಾಗಿದ್ದಾರೆ.