ದೇವರೇ, ಮ್ಲೇಚ್ಛರು ನಿನ್ನ ಸ್ವತ್ತನ್ನು ಹೊಕ್ಕು, ನಿನ್ನ ಪರಿಶುದ್ಧಾಲಯವನ್ನು ಹೊಲೆಮಾಡಿದರು; ಯೆರೂಸಲೇಮ್ ಪಟ್ಟಣವನ್ನು ಹಾಳು ದಿಬ್ಬಗಳನ್ನಾಗಿ ಮಾಡಿಬಿಟ್ಟರು.
TSK
TSK · ಮಿಕ 3:12
مراجع Treasury of Scripture Knowledge في ಕನ್ನಡ IRV.
ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಸಕಲ ದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.
“ನಾನು ಪರ್ವತಗಳಿಗಾಗಿ ಅತ್ತು ಗೋಳಾಡುವೆನು, ಅಡವಿಯ ಕಾವಲುಗಳಿಗಾಗಿ ಶೋಕಗೀತೆಯನ್ನು ಹಾಡುವೆನು; ಅವು ಸುಟ್ಟುಹೋಗಿವೆ, ಯಾರೂ ಹಾದು ಹೋಗರು, ದನಕರುಗಳ ಶಬ್ದ ಕಿವಿಗೆ ಬೀಳದು, ಮೃಗ ಪಕ್ಷಿಗಳು ತೊಲಗಿಹೋಗಿವೆ.
“ಯೆಹೂದದ ಅರಸನಾದ ಹಿಜ್ಕೀಯನ ಕಾಲದಲ್ಲಿ ಮೋರೆಷೆತ್ ಊರಿನವನಾದ ಮೀಕಾಯನು ಯೆಹೂದ್ಯರೆಲ್ಲರಿಗೆ, ‘ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳಿರಿ, ಚೀಯೋನ್ ಪಟ್ಟಣವು ಹೊಲದಂತೆ ಉಳಲಾಗುವುದು, ಯೆರೂಸಲೇಮು ಹಾಳುದಿಬ್ಬಗಳಾಗಿ ಬೀಳುವುದು, ಯೆಹೋವನ ಆಲಯದ ಪರ್ವತವು ಕಾಡು ಗುಡ್ಡಗಳಂತಾಗುವುದು’ ಎಂದು ಹೇಳಲಾಗಿ
ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಎಲ್ಲಾ ಗುಡ್ಡ ಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವುದು. ಆಗ ಜನಾಂಗಗಳು ಅದರ ಕಡೆಗೆ ಪ್ರವಾಹಗಳಂತೆ ಬರುವರು.
ಆ ಸಾಕ್ಷಿಗಳು, “ಈ ಮನುಷ್ಯನು ಈ ಪರಿಶುದ್ಧವಾದ ಸ್ಥಳಕ್ಕೆ ವಿರೋಧವಾಗಿಯೂ, ಧರ್ಮಶಾಸ್ತ್ರಕ್ಕೆ ವಿರೋಧವಾಗಿಯೂ ಮಾತನಾಡುವುದನ್ನು ನಿಲ್ಲಿಸುತ್ತಿಲ್ಲ ಎಂದು ಹೇಳಿದರು.