ಆಗ ಇಸ್ರಾಯೇಲರ ಅರಸನು ತನ್ನ ರಾಜ್ಯದಲ್ಲಿದ್ದ ಸುಮಾರು ನಾನೂರು ಪ್ರವಾದಿಗಳನ್ನು ಕೂಡಿಸಿ ಅವರನ್ನು, “ನಾನು ರಾಮೋತ್ ಗಿಲ್ಯಾದಿನ ಮೇಲೆ ಯುದ್ಧಕಾಗಿ ಹೋಗಬಹುದೋ ಹೋಗಬಾರದೋ?” ಎಂದು ಕೇಳಲು ಅವರು, “ಹೋಗಬಹುದು, ಕರ್ತನು ಅದನ್ನು ಅರಸನ ಕೈಗೆ ಒಪ್ಪಿಸುವನು” ಅಂದರು.
TSK
TSK · ಮಿಕ 3:2
مراجع Treasury of Scripture Knowledge في ಕನ್ನಡ IRV.
ಅವನು ಭ್ರಷ್ಟರನ್ನು ಬಿಟ್ಟುಬಿಟ್ಟವನೂ, ಯೆಹೋವನಲ್ಲಿ ಭಯಭಕ್ತಿಯುಳ್ಳವರನ್ನು ಸನ್ಮಾನಿಸುವವನೂ, ನಷ್ಟವಾದರೂ ಪ್ರಮಾಣತಪ್ಪದವನೂ ಆಗಿರಬೇಕು.
ಯೆಹೋವನೇ, ನಿನ್ನನ್ನು ದ್ವೇಷಿಸುವವರನ್ನು ನಾನು ದ್ವೇಷಿಸುತ್ತೇನಲ್ಲವೋ? ನಿನ್ನ ವಿರೋಧಿಗಳಿಗೆ ನಾನು ಬೇಸರಗೊಳ್ಳುವುದಿಲ್ಲವೋ?
ನೀವು ನನ್ನ ಜನರನ್ನು ಜಜ್ಜಿ, ಬಡವರನ್ನು ದುಃಖದಿಂದ ಹಿಂಸಿಸುವುದೇಕೆ?” ಎಂದು ಕರ್ತನಾದ ಸೇನಾಧೀಶ್ವರ ಯೆಹೋವನು ವಾದಿಸುವನು.
ಅಲ್ಲಿನ ಪ್ರಧಾನರು ಸುಲಿಗೆಗಾಗಿ ರಕ್ತ ಸುರಿಸಿ, ನರಪ್ರಾಣಿಗಳನ್ನು ನುಂಗುವವರಾಗಿ ಬೇಟೆಯನ್ನು ಸೀಳುವ ತೋಳಗಳಂತಿದ್ದಾರೆ.
¶ ಸಮಾರ್ಯ ಬೆಟ್ಟದಲ್ಲಿನ, ಬಾಷಾನಿನ ಕೊಬ್ಬಿದ ಹಸುಗಳಂತಿರುವ ಸ್ತ್ರೀಯರೇ, ಬಡವರನ್ನು ಹಿಂಸಿಸಿ, ದಿಕ್ಕಿಲ್ಲದವರನ್ನು ಜಜ್ಜಿ, ನೀವು ನಿಮ್ಮ ಪತಿಗಳಿಗೆ, “ಪಾನಗಳನ್ನು ತರಿಸಿ, ಕುಡಿಯೋಣ” ಎಂದು ಹೇಳುವವರೇ, ಈ ಮಾತನ್ನು ಕೇಳಿರಿ.
ಕೆಟ್ಟದ್ದನ್ನು ದ್ವೇಷಿಸಿರಿ, ಒಳ್ಳೆಯದನ್ನು ಪ್ರೀತಿಸಿರಿ, ಚಾವಡಿಯಲ್ಲಿ ನ್ಯಾಯವನ್ನು ಸ್ಥಾಪಿಸಿರಿ. ಒಂದು ವೇಳೆ ಸೇನಾಧೀಶ್ವರ ದೇವರಾದ ಯೆಹೋವನು ಯೋಸೇಫನ ವಂಶದಲ್ಲಿ ಉಳಿದವರಿಗೆ ಪ್ರಸನ್ನನಾದನು.
ಅವರೊಳಗಿನ ಮುಖ್ಯಾಧಿಕಾರಿಗಳು ಗರ್ಜಿಸುವ ಸಿಂಹಗಳು; ಅದರ ನ್ಯಾಯಾಧಿಪತಿಗಳು ಸಂಜೆಯ ತೋಳಗಳು; ಮರುದಿನ ಬೆಳಗ್ಗೆ ಕಡಿಯುವುದಕ್ಕೆ ಎಲುಬು ಸಹಾ ಬಿಡದ ಕ್ರೂರರು.
‹ಆದರೆ ಅವನ ಪಟ್ಟಣದ ನಿವಾಸಿಗಳು ಅವನನ್ನು ದ್ವೇಷಿಸಿ ಅವನ ಹಿಂದೆ ರಾಯಭಾರಿಗಳನ್ನು ಕಳುಹಿಸಿ ‘ನೀನು ನಮ್ಮ ಮೇಲೆ ದೊರೆತನಮಾಡುವುದು ನಮಗೆ ಇಷ್ಟವಿಲ್ಲ’ ಎಂದು ಹೇಳಿಸಿದರು.›
¶ ‹“ಲೋಕವು ನಿಮ್ಮನ್ನು ದ್ವೇಷ ಮಾಡುವುದಾದರೆ ಅದು ಮೊದಲು ನನ್ನನ್ನು ದ್ವೇಷ ಮಾಡಿತ್ತೆಂದು ನೀವು ತಿಳಿದುಕೊಳ್ಳಿರಿ.›
ಅದಕ್ಕೆ ಅವರೆಲ್ಲರೂ, “ಆತನನ್ನು ಬೇಡ ನಮಗೆ ಬರಬ್ಬನನ್ನು ಬಿಟ್ಟುಕೊಡಬೇಕು” ಎಂದು ಪುನಃ ಕೂಗಿಕೊಂಡರು. ಈ ಬರಬ್ಬನು ದರೋಡೆಗಾರನಾಗಿದ್ದನು.
ಇಂಥವುಗಳನ್ನು ನಡಿಸುವವರು ಮರಣಕ್ಕೆ ಪಾತ್ರರಾಗಿದ್ದಾರೆಂಬ ದೇವವಿಧಿಯು ಅವರಿಗೆ ತಿಳಿದಿದ್ದರೂ ಅವರು ತಾವೇ ಅವುಗಳನ್ನು ಮಾಡುವುದಲ್ಲದೆ ಮಾಡುವವರನ್ನೂ ಹೊಗಳುತ್ತಾ ಪ್ರೇರೇಪಿಸುತ್ತಾರೆ.
ಮಮತೆಯಿಲ್ಲದವರೂ, ಸಮಾಧಾನಹೊಂದದವರೂ, ಚಾಡಿಹೇಳುವವರೂ, ದಮೆಯಿಲ್ಲದವರೂ, ಕ್ರೂರರೂ, ಒಳ್ಳೆಯದನ್ನು ದ್ವೇಷಿಸುವವರೂ,