ರಾಜದಂಡವನ್ನು ಹಿಡಿಯತಕ್ಕವನು ಶಿಲೋವಿನಿಂದ ಬರುವ ತನಕ ಆ ದಂಡವು ಯೆಹೂದನ ಕೈಯಿಂದ ತಪ್ಪುವುದಿಲ್ಲ. ಮುದ್ರೆ ಕೋಲು ಅವನ ಪಾದಗಳ ಬಳಿಯಿಂದ ಕದಲುವುದಿಲ್ಲ. ಅನ್ಯಜನಾಂಗಗಳೂ ಅವನಿಗೆ ವಿಧೇಯರಾಗಿರುವರು.
TSK
TSK · ಮಿಕ 5:1
مراجع Treasury of Scripture Knowledge في ಕನ್ನಡ IRV.
ಅವರು ನಿಮ್ಮ ದನಗಳನ್ನೂ ಮತ್ತು ಬೆಳೆಗಳನ್ನೂ ತಿಂದುಬಿಟ್ಟು ನಿಮಗೆ ಧಾನ್ಯವನ್ನಾಗಲಿ, ದ್ರಾಕ್ಷಾರಸವನ್ನಾಗಲಿ, ಎಣ್ಣೆಯನ್ನಾಗಲಿ, ದನ ಮತ್ತು ಕುರಿಗಳ ಸಂತಾನವನ್ನಾಗಲಿ ಉಳಿಸದೆ ನಿಮ್ಮನ್ನು ಸಂಪೂರ್ಣವಾಗಿ ನಾಶಮಾಡುವರು.
¶ ಯೆಹೂದದ ಬೇತ್ಲೆಹೇಮಿನವನೂ, ಯೆಹೂದ ಕುಲದವನೂ ಆಗಿದ್ದ ಒಬ್ಬ ಯೌವನಸ್ಥನಾದ ಲೇವಿಯು ಉಪಜೀವನಕ್ಕೆ ಅನುಕೂಲವಾಗುವಂತೆ
¶ ಆಗ ಕೆನಾನನ ಮಗನಾದ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಹೋಗಿ ಅವನ ಕೆನ್ನೆಗೆ ಒಂದು ಏಟು ಹಾಕಿ, “ಯೆಹೋವನ ಆತ್ಮವು ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತನಾಡುವುದಕ್ಕೋಸ್ಕರ ಯಾವ ಮಾರ್ಗವಾಗಿ ಬಂದಿತು?” ಎನ್ನಲು
¶ ಚಿದ್ಕೀಯನ ಆಳ್ವಿಕೆಯ ಒಂಭತ್ತನೆಯ ವರ್ಷದ ಹತ್ತನೆಯ ತಿಂಗಳಿನ, ಹತ್ತನೆಯ ದಿನದಲ್ಲಿ, ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಸರ್ವಸೈನ್ಯ ಸಹಿತನಾಗಿ ಯೆರೂಸಲೇಮಿಗೆ ಬಂದು, ಅಲ್ಲಿ ಪಾಳೆಯಮಾಡಿಕೊಂಡು ಅದರ ಸುತ್ತಲೂ ಮಣ್ಣಿನ ದಿಬ್ಬವನ್ನು ಮಾಡಿದನು.
ಪ್ರಾರಂಭದಲ್ಲಿ, ಭೂಮಿಯು ಹುಟ್ಟುವುದಕ್ಕಿಂತ ಮುಂಚೆ, ಅನಾದಿಕಾಲದಲ್ಲಿ ಸ್ಥಾಪಿಸಲ್ಪಟ್ಟೆನು.
ಯುದ್ಧದ ಗದ್ದಲದಲ್ಲಿ ತುಳಿದಾಡಿದವರೆಲ್ಲರ ಪಾದರಕ್ಷೆಗಳೂ, ರಕ್ತದಲ್ಲಿ ಅದ್ದಿದ ಉಡುಪುಗಳೂ, ಅಗ್ನಿಗೆ ಆಹಾರವಾಗಿ ಸುಟ್ಟುಹೋಗುವವು.
ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು.
ನಾನು ಉತ್ತರ ದಿಕ್ಕಿನ ಜನಾಂಗಗಳನ್ನೆಲ್ಲಾ ಕರೆಯಿಸಿ, ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡುವೆನು. ಇವರೆಲ್ಲರನ್ನು ಈ ದೇಶದ ಮೇಲೂ, ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ, ಅವುಗಳನ್ನು ತುಂಬಾ ಹಾಳುಗೈದು, ಪರಿಹಾಸ್ಯಕ್ಕೂ, ನಿತ್ಯನಾಶನಕ್ಕೂ ಈಡುಮಾಡುವೆನು.
¶ “ಮಾರ್ಗವು ಕವಲೊಡೆಯುವ ಸ್ಥಳದಲ್ಲಿ, ಎರಡು ದಾರಿಗಳ ಮೊದಲಲ್ಲಿ ಬಾಬೆಲಿನ ಅರಸನು ಶಕುನ ನೋಡುವುದಕ್ಕೆ ನಿಂತಿದ್ದಾನೆ; ಬಾಣಗಳನ್ನು ಕಲಕಿ, ವಿಗ್ರಹಗಳನ್ನು ಪ್ರಶ್ನೆಕೇಳಿ, ಕಾಳಿಜವನ್ನು ಪರೀಕ್ಷಿಸಿದ್ದಾನೆ.
“ನರಪುತ್ರನೇ, ಈ ದಿನದ, ಇದೇ ದಿನದ ಹೆಸರನ್ನು ಬರೆದುಕೋ; ಇದೇ ದಿನದಲ್ಲಿ ಬಾಬೆಲಿನ ಅರಸನು ಯೆರೂಸಲೇಮಿಗೆ ಮುತ್ತಿಗೆ ಹಾಕಿದ್ದಾನೆ.
ಎಲ್ಲಾ ಜನರಿಗೆ ಹೀಗೆ ಪ್ರಕಟಿಸಿರಿ: ಜನಾಂಗಗಳೇ ಯುದ್ಧಸನ್ನದ್ಧರಾಗಿರಿ, ಶೂರರನ್ನು ಎಚ್ಚರಪಡಿಸಿರಿ, ಶೂರರು ಒಟ್ಟುಗೂಡಲಿ, ಶೂರರೆಲ್ಲರೂ ಯುದ್ಧಕ್ಕೆ ಹೊರಡಲಿ.
ಇಗೋ, ನಾನು ಶಕ್ತಿಶಾಲಿಗಳೂ, ತೀಕ್ಷ್ಣಬುದ್ಧಿಯುಳ್ಳವರೂ ಆಗಿರುವ ಕಸ್ದೀಯ ಜನಾಂಗದವರನ್ನು ನಿಮ್ಮ ವಿರುದ್ಧ ಹುರಿದುಂಬಿಸಿ ಎಬ್ಬಿಸುತ್ತೇನೆ; ಆ ಜನರು ಭಯಂಕರರೂ, ಉಗ್ರರೂ ಆಗಿ ತಮ್ಮದಲ್ಲದ ಸಂಸ್ಥಾನವನ್ನು ವಶಮಾಡಿಕೊಳ್ಳುವರು ಮತ್ತು ಲೋಕದಲ್ಲೆಲ್ಲಾ ಸಂಚರಿಸುವರು.
‹ಆದರೆ ನಾನು ನಿಮಗೆ ಹೇಳುವುದೇನಂದರೆ, ಕೆಡುಕನನ್ನು ವಿರೋಧಿಸಬೇಡ. ಒಬ್ಬನು ನಿನ್ನ ಬಲಗೆನ್ನೆಯ ಮೇಲೆ ಹೊಡೆದರೆ ಅವನಿಗೆ ನಿನ್ನ ಮತ್ತೊಂದು ಕೆನ್ನೆಯನ್ನು ಸಹ ತಿರುಗಿಸು.›
ಮತ್ತು ಆತನ ಮೇಲೆ ಉಗುಳಿ ಆ ಬೆತ್ತವನ್ನು ತೆಗೆದುಕೊಂಡು ಆತನ ತಲೆಯ ಮೇಲೆ ಹೊಡೆದರು.
ಯೇಸು ಈ ಮಾತನ್ನು ಹೇಳಿದಾಗ ಹತ್ತಿರ ನಿಂತಿದ್ದ ಕಾವಲಾಳುಗಳಲ್ಲಿ ಒಬ್ಬನು ತನ್ನ ಕೈಯಿಂದ ಯೇಸುವಿನ ಕೆನ್ನೆಗೆ ಹೊಡೆದು, “ನೀನು ಮಹಾಯಾಜಕನಿಗೆ ಹೀಗೆ ಉತ್ತರ ಕೊಡುತ್ತೀಯೋ?” ಎಂದನು.
ಅದಕ್ಕೆ ಮಹಾಯಾಜಕನಾದ ಅನನೀಯನು; ಅವನ ಬಾಯಿಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆ ಕೊಡಲು ಪೌಲನು ಅವನಿಗೆ;