¶ ದಾವೀದನ ಕಾಲದಲ್ಲಿ ಮೂರು ವರ್ಷಗಳ ವರೆಗೂ ಎಡಬಿಡದೆ ಬರವಿತ್ತು. ದಾವೀದನು ಯೆಹೋವನನ್ನು ವಿಚಾರಿಸಲು ಆತನು, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೆಯೂ, ಅವನ ಮನೆಯವರ ಮೇಲೆಯೂ ರಕ್ತಾಪರಾಧವಿದೆ” ಎಂದು ಉತ್ತರ ಕೊಟ್ಟನು.
TSK
TSK · ಮಿಕ 6:9
مراجع Treasury of Scripture Knowledge في ಕನ್ನಡ IRV.
ಕೇಡು ಉದ್ಭವಿಸುವುದು ಮಣ್ಣಿನಿಂದಲ್ಲ; ದುಃಖವು ಭೂಮಿಯಿಂದ ಮೊಳೆಯುವುದಿಲ್ಲ.
ನಾನು ದೇವರ ಮುಂದೆ, “ನನ್ನನ್ನು ಅಪರಾಧಿಯೆಂದು ನಿರ್ಣಯಿಸಬೇಡ, ನನ್ನೊಡನೆ ಏಕೆ ವ್ಯಾಜ್ಯವಾಡುತ್ತೀ ತಿಳಿಸು ಎನ್ನುವೆನು.
ಯೆಹೋವನು ನ್ಯಾಯತೀರಿಸುವವನಾಗಿ ತನ್ನನ್ನು ಪ್ರಕಟಿಸಿಕೊಂಡಿದ್ದಾನೆ; ದುಷ್ಟರು ತಾವೇ ಕಲ್ಪಿಸಿದ ಕುಯುಕ್ತಿಯಲ್ಲಿ ಸಿಕ್ಕಿಕೊಂಡಿದ್ದಾರಲ್ಲಾ. ಹಿಗ್ಗಾಯೋನ್ ಸೆಲಾ
ಆಗ ಯೆಹೋವನ ನಾಮದಿಂದ ಪ್ರಸಿದ್ಧನಾದ ನೀನೊಬ್ಬನೇ ಭೂಲೋಕದಲ್ಲೆಲ್ಲಾ ಸರ್ವೋನ್ನತನೆಂದು ಗ್ರಹಿಸುವರು.
ಜಾಣನು ಕೇಡನ್ನು ಕಂಡು ಅಡಗಿಕೊಳ್ಳುವನು, ಬುದ್ಧಿಹೀನನು ಮುಂದೆ ಹೋಗಿ ನಷ್ಟಪಡುವನು.
ಅಯ್ಯೋ, ಅಶ್ಶೂರವೇ ನೀನು ನನ್ನ ಕೋಪವೆಂಬ ಕೋಲು, ನಿನ್ನ ಕೈಯಲ್ಲಿರುವ ದೊಣ್ಣೆಯು ನನ್ನ ರೌದ್ರವೇ.
ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನರ ಅಭಿಮಾನವನ್ನು ನೋಡಿ ನಾಚಿಕೆಪಡಲಿ; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವುದು.
ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ.
ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ.
ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.
ಆಗ ನಾನು ಈ ಆಲಯವನ್ನು ಶಿಲೋವಿನ ಗತಿಗೆ ತಂದು, ಈ ಪಟ್ಟಣವು ಲೋಕದ ಸಮಸ್ತ ಜನಾಂಗಗಳಲ್ಲಿ ಶಾಪದ ಮಾತಾಗುವಂತೆ ಮಾಡುವೆನು’” ಎಂದು ಹೇಳು ಎಂದನು.
ಕಸ್ದೀಯರು ಪುನಃ ಬಂದು ಈ ಪಟ್ಟಣದ ವಿರುದ್ಧವಾಗಿ ಹೋರಾಡಿ, ಆಕ್ರಮಿಸಿ ಅದನ್ನು ಬೆಂಕಿಯಿಂದ ಸುಟ್ಟುಬಿಡುವರು’” ಎಂಬುದು.
ನಿನ್ನನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ನಿನ್ನ ದುರ್ಮಾರ್ಗಗಳಿಗೆ ತಕ್ಕ ಗತಿಯನ್ನು ಬರಮಾಡುವೆನು, ಆಗ ನಿನ್ನ ಅಸಹ್ಯಕಾರ್ಯಗಳು ನಿನ್ನ ಅನುಭವಕ್ಕೆ ಬರುವವು; ಯೆಹೋವನಾದ ನಾನು ದಂಡಿಸುವವನು ಎಂಬುದು ನಿನಗೆ ಗೊತ್ತಾಗುವುದು.
ಜ್ಞಾನಿಗಳು ಈ ಸಂಗತಿಗಳನ್ನು ಗ್ರಹಿಸುವರು; ವಿವೇಕಿಗಳು ಅವುಗಳನ್ನು ತಿಳಿದುಕೊಳ್ಳುವರು. ಯೆಹೋವನ ಮಾರ್ಗಗಳು ಸತ್ಯವಾದವುಗಳು; ಅವುಗಳಲ್ಲಿ ಸನ್ಮಾರ್ಗಿಗಳು ನಡೆಯುವರು, ದುರ್ಮಾರ್ಗಿಗಳು ಅವುಗಳನ್ನು ಬಿಟ್ಟು ಎಡವಿ ಬೀಳುವರು.
ಆದಕಾರಣ ನಾನು ಯೆಹೂದದ ಮೇಲೆ ಬೆಂಕಿಯನ್ನು ಉರಿಸುವೆನು. ಅದು ಯೆರೂಸಲೇಮಿನ ಅರಮನೆಗಳನ್ನು ನುಂಗಿಬಿಡುವುದು.”
¶ “ನಿಮ್ಮ ಪಟ್ಟಣಗಳಲ್ಲಿ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ಮತ್ತು ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೆಯೂ ಮಾಡಿದೆನು. ಆದರೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ” ಇದು ಯೆಹೋವನ ನುಡಿ.
ಯೋನನು ಪಟ್ಟಣವನ್ನು ಪ್ರವೇಶಿಸಿ ಒಂದು ದಿನದಷ್ಟು ದೂರ ಪ್ರಯಾಣಮಾಡಿದ ನಂತರ “ನಲವತ್ತು ದಿನಗಳಾದ ಮೇಲೆ ನಿನೆವೆಯು ಕೆಡವಲ್ಪಡುವುದು” ಎಂದು ಸಾರತೊಡಗಿದನು.
ಅದು ದೇವರ ವಾಕ್ಯಕ್ಕಾಗಲೀ ಆತನ ತಿದ್ದುಪಾಟಿಗಾಗಲಿ ಕಿವಿಗೊಡಲಿಲ್ಲ, ಶಿಕ್ಷಣಕ್ಕೆ ಒಳಪಡಲೇ ಇಲ್ಲ, ಯೆಹೋವನಲ್ಲಿ ಭರವಸವಿಡಲಿಲ್ಲ, ತನ್ನ ದೇವರ ಸನ್ನಿಧಿಗೆ ಸಮೀಪಿಸಲಿಲ್ಲ.
‹ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ.›