ಅದರಲ್ಲಿ, “ಎಲ್ಲರೂ ಉಪವಾಸಮಾಡಬೇಕೆಂದು ಪ್ರಕಟಿಸಿ, ನಾಬೋತನನ್ನು ನೆರೆದ ಸಭೆಯ ಮುಂದೆ ನಿಲ್ಲಿಸಿ,
TSK
TSK · ಮಿಕ 7:3
مراجع Treasury of Scripture Knowledge في ಕನ್ನಡ IRV.
ಕಣ್ಣನ್ನು ಮುಚ್ಚಿಕೊಳ್ಳುವವನು ಕುಯುಕ್ತಿಯನ್ನು ಕಲ್ಪಿಸುವನು, ತುಟಿಯನ್ನು ಕಚ್ಚುವವನು ಕೇಡನ್ನು ಸಾಧಿಸುವನು.
ಇಗೋ, ಯೆಹೋವನು ಭೂನಿವಾಸಿಗಳಿಗೆ ಅವರ ಪಾಪ ಫಲವನ್ನು ತಿನ್ನಿಸಬೇಕೆಂದು ತನ್ನ ಸ್ಥಳದಿಂದ ಹೊರಡುತ್ತಾನೆ; ಭೂಮಿಯು ತನ್ನಲ್ಲಿ ಇಂಗಿದ್ದ ರಕ್ತವನ್ನು ಪ್ರಕಟಮಾಡುವುದು, ತನ್ನ ನಿವಾಸಿಗಳಲ್ಲಿ ಹತರಾದವರನ್ನು ಇನ್ನು ಮರೆಮಾಡುವುದಿಲ್ಲ.”
¶ ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲು ಅರಿಯರು.
¶ “‘ಇಗೋ, ಇಸ್ರಾಯೇಲಿನ ಪ್ರಭುಗಳು ತಮ್ಮ ತಮ್ಮ ಶಕ್ತ್ಯಾನುಸಾರ ನಿನ್ನಲ್ಲಿ ರಕ್ತ ಸುರಿಸುತ್ತಲೇ ಇದ್ದಾರೆ.
ಏಕೆಂದರೆ (ಟಗರುಹೋತಗಳೇ,) ನೀವು ಕುರಿಮೇಕೆಗಳನ್ನು ಪಕ್ಕೆಯಿಂದಲೂ, ಹೆಗಲಿನಿಂದಲೂ ನೂಕುತ್ತಾ, ದುರ್ಬಲವಾದವುಗಳನ್ನು ಕೊಂಬುಗಳಿಂದ ಹಾಯುತ್ತಾ, ನನ್ನ ಹಿಂಡನ್ನು ಚದುರಿಸಿಬಿಟ್ಟಿರಿ.
ನೀತಿವಂತರನ್ನು ಹಿಂಸಿಸುವವರೇ, ಲಂಚತೆಗೆದುಕೊಳ್ಳುವವರೇ, ಚಾವಡಿಯಲ್ಲಿ ದರಿದ್ರರ ನ್ಯಾಯವನ್ನು ತಪ್ಪಿಸುವವರೇ. ನಿಮ್ಮ ದ್ರೋಹಗಳು ಬಹಳ, ನಿಮ್ಮ ಪಾಪಗಳು ನನಗೆ ಗೊತ್ತಿದೆ.
“ನಾನು ಆತನನ್ನು ಹಿಡಿಯಲು ನಿಮಗೆ ಸಹಾಯಮಾಡಿದರೆ ನನಗೆ ಏನು ಕೊಡುತ್ತೀರಿ?” ಅಂದನು. ಅವರು ಅವನಿಗೆ ಮೂವತ್ತು ಬೆಳ್ಳಿನಾಣ್ಯಗಳನ್ನು ತೂಗಿ ಕೊಟ್ಟರು.
ಆದ್ದರಿಂದ ಕರ್ತನು ಬರುವ ಕಾಲಕ್ಕಿಂತ ಮುಂಚೆ ಯಾವುದನ್ನು ಕುರಿತು ನ್ಯಾಯತೀರ್ಪುಮಾಡಬೇಡಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು. ಹೃದಯದ ಆಲೋಚನೆಗಳನ್ನು ಪ್ರಕಟಪಡಿಸುವನು. ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ದೊರಕುವುದು.