ನನ್ನನ್ನು ದ್ವೇಷಿಸುವವನಿಗೆ ಕೇಡು ಬಂದಾಗ ಉಬ್ಬಿಕೊಂಡು, ಅವನ ನಾಶನಕ್ಕೆ ಹಿಗ್ಗಿದೆನೋ?
TSK
TSK · ಮಿಕ 7:8
مراجع Treasury of Scripture Knowledge في ಕನ್ನಡ IRV.
ಅವರು ಬಿದ್ದುಹೋಗಿದ್ದಾರೆ; ನಾವಾದರೋ ಎದ್ದು ನಿಂತಿದ್ದೇವೆ.
ಆದರೂ ನನಗೆ ಆಪತ್ತು ಬಂದಾಗ, ಅವರು ಸಂತೋಷಿಸುತ್ತಾ ಕೂಡಿಕೊಂಡರು; ನಿರಾಕಾರಣವಾಗಿ ಈ ಭ್ರಷ್ಟರು ನನಗೆ ವಿರುದ್ಧವಾಗಿ ಕೂಡಿ ಕೊಂಡಾಡಿದರು, ಸೂರೆ ಮಾಡುವುದನ್ನು ಬಿಡಲೇ ಇಲ್ಲ.
ಯೆಹೋವನೇ, ನನ್ನ ದೇವರೇ, ನಿನ್ನ ನೀತಿಗನುಸಾರವಾಗಿ ನನಗೆ ತೀರ್ಪುಕೊಡು; ನನ್ನ ವಿಷಯದಲ್ಲಿ ಹಿಗ್ಗುವುದಕ್ಕೆ ಶತ್ರುಗಳಿಗೆ ಆಸ್ಪದವಿರಬಾರದು.
ಅವನು ಕೆಳಗೆ ಬಿದ್ದರೂ ಏಳದೆ ಹೋಗುವುದಿಲ್ಲ; ಯೆಹೋವನು ಅವನನ್ನು ಕೈಹಿಡಿದು ಉದ್ಧಾರ ಮಾಡುವನು.
ಯೆಹೋವನೇ, ನೀನಾದರೋ ಕರುಣಿಸಿ ನನ್ನನ್ನು ಏಳುವಂತೆ ಮಾಡು; ಆಗ ನಾನು ಅವರಿಗೆ ಮುಯ್ಯಿತೀರಿಸುವೆನು.
ನೀತಿವಂತರಿಗೋಸ್ಕರ ಬೆಳಕು ಪ್ರಕಾಶಿಸುವುದು, ಯಥಾರ್ಥಹೃದಯವುಳ್ಳವರಿಗೆ ಸಂತೋಷವೂ ಕೊಡಲ್ಪಟ್ಟಿವೆ.
ಯಥಾರ್ಥರಿಗೆ ಕತ್ತಲೆಯಲ್ಲಿಯೂ ಜ್ಯೋತಿ ಮೂಡುವುದು; ದಯೆಯೂ, ಕನಿಕರವೂ, ನೀತಿಯುಳ್ಳ ದೇವರೇ ಆ ಜ್ಯೋತಿ.
ಶಿಷ್ಟನು ಏಳು ಸಾರಿ ಬಿದ್ದರೂ ಮತ್ತೆ ಏಳುವನು, ದುಷ್ಟನು ಕೇಡಿನಿಂದ ಬಿದ್ದೇಹೋಗುವನು.
ಯಾಕೋಬಿನ ವಂಶದವರೇ ಬನ್ನಿರಿ, ಯೆಹೋವನ ಜ್ಞಾನದ ಬೆಳಕಿನಲ್ಲಿ ನಡೆಯೋಣ.
ನೀನು ಬಂದಿಸಲ್ಪಟ್ಟವರಿಗೆ ‘ಹೊರಟುಹೋಗಿರಿ’ ಎಂದು, ಕತ್ತಲಲ್ಲಿರುವವರಿಗೆ, ‘ಬೆಳಕಿಗೆ ಹೊರಡಿರಿ’ ಎಂದು ಅಪ್ಪಣೆಕೊಟ್ಟು ಹಾಳಾಗಿದ್ದ ಸ್ವತ್ತುಗಳನ್ನು ಅವರಿಗೆ ಹಂಚಿ ದೇಶವನ್ನು ಉನ್ನತ ಸ್ಥಿತಿಗೆ ತರುವೆನು. ನನ್ನ ಜನವೆಂಬ ಹಿಂಡು ದಾರಿಗಳಲ್ಲಿ ಮೇಯುವುದು. ಎಲ್ಲಾ ಬೋಳುಬೆಟ್ಟಗಳೂ ಕೂಡ ಹುಲ್ಲುಗಾವಲಾಗುವವು.
ಏಳು, ಪ್ರಕಾಶಿಸು, ನಿನಗೆ ಬೆಳಕು ಬಂತು, ಯೆಹೋವನ ತೇಜಸ್ಸು ನಿನ್ನ ಮೇಲೆ ಉದಯಿಸಿದೆ.
“ನನ್ನ ಸ್ವತ್ತನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ, ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ, ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವುದರಿಂದ
ಕರ್ತನಾದ ಯೆಹೋವನು ಇಂತೆನ್ನುತ್ತಾನೆ, “ನೀನು ಚಪ್ಪಾಳೆ ಹೊಡೆದು, ಕಾಲಿನಿಂದ ನೆಲವನ್ನು ಬಡಿದು, ಇಸ್ರಾಯೇಲ್ ದೇಶವನ್ನು ಮನಃಪೂರ್ವಕವಾಗಿ ತಿರಸ್ಕರಿಸಿ, ಅದರ ಗತಿಗೆ ಹಿಗ್ಗಿಕೊಂಡೆ.
¶ “ಆ ದಿನದಲ್ಲಿ ನಾನು ದಾವೀದನ ಬಿದ್ದುಹೋಗಿರುವ ಗುಡಾರವನ್ನು ಎತ್ತಿ, ಅದರ ಬಿರುಕುಗಳನ್ನು ಮುಚ್ಚುವೆನು, ಹಾಳಾದದ್ದನ್ನು ಎಬ್ಬಿಸಿ, ಹಿಂದಿನ ದಿನಗಳಲ್ಲಿ ಮಾಡಿದ ಹಾಗೆ ಕಟ್ಟುವೆನು.
“ನಿನ್ನ ದೇವರಾದ ಯೆಹೋವನು ಎಲ್ಲಿ?” ಎಂದು ನನ್ನನ್ನು ಹೀಯಾಳಿಸಿದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವುದು. ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಿನಂತೆ ತುಳಿತಕ್ಕೀಡಾಗುವರು.
ಹೀಗೆ ಕತ್ತಲಲ್ಲಿ ವಾಸಿಸಿದ ಈ ಸೀಮೆಯ ಜನರಿಗೆ ಮಹಾ ಬೆಳಕು ಕಾಣಿಸಿತು; ಮರಣದ ಛಾಯೆ ನೆರೆದ ಪ್ರದೇಶಗಳಲ್ಲಿ ವಾಸಿಸುವವರಿಗೆ ಬೆಳಕು ಉದಯವಾಯಿತು” ಎಂಬುದು.
¶ ಯೇಸು ಪುನಃ ಜನರೊಂದಿಗೆ ಮಾತನಾಡುತ್ತಾ, ‹“ನಾನೇ ಲೋಕದ ಬೆಳಕಾಗಿದ್ದೇನೆ. ನನ್ನನ್ನು ಹಿಂಬಾಲಿಸುವವನು ಎಂದಿಗೂ ಕತ್ತಲೆಯಲ್ಲಿ ನಡೆಯುವುದಿಲ್ಲ, ಆದರೆ ಅವನು ಜೀವದ ಬೆಳಕನ್ನು ಹೊಂದಿರುವನು”› ಎಂದು ಹೇಳಿದನು.
‹ಅವರು ಕತ್ತಲೆಯಿಂದ ಬೆಳಕಿಗೂ, ಸೈತಾನನ ಅಧಿಕಾರದಿಂದ ದೇವರ ಕಡೆಗೂ ತಿರುಗಿಕೊಂಡು, ನನ್ನಲ್ಲಿ ನಂಬಿಕೆಯಿಡುವುದರಿಂದ ಪಾಪಕ್ಷಮಾಪಣೆಯನ್ನೂ, ಪರಿಶುದ್ಧರೊಂದಿಗೆ ಹಕ್ಕನ್ನೂ ಹೊಂದುವಂತೆ, ಅವರ ಕಣ್ಣುಗಳನ್ನು ತೆರೆಯಬೇಕೆಂದು ಅವರ ಬಳಿಗೆ ನಾನು ನಿನ್ನನ್ನು ಕಳುಹಿಸುತ್ತೇನೆ’› ಅಂದನು.
ಈ ಇಬ್ಬರು ಪ್ರವಾದಿಗಳು ಭೂನಿವಾಸಿಗಳನ್ನು ಹಿಂಸಿಸಿದ್ದರಿಂದ ಇವರು ಸತ್ತದ್ದಕ್ಕೆ ಭೂನಿವಾಸಿಗಳು ಸಂತೋಷಿಸಿ ಸಂಭ್ರಮಗೊಂಡು ಒಬ್ಬರಿಗೊಬ್ಬರು ಉಡುಗೊರೆಗಳನ್ನು ಕಳುಹಿಸುವರು.
ಇನ್ನು ರಾತ್ರಿಯೇ ಇರುವುದಿಲ್ಲ. ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗಿರುವುದಿಲ್ಲ. ದೇವರಾದ ಕರ್ತನೇ ಅವರಿಗೆ ಬೆಳಕಾಗಿರುವನು. ಅವರು ಯುಗಯುಗಾಂತರಗಳಲ್ಲಿಯೂ ಆಳುವರು.